ಫಡ್ನವೀಸ್ ವಿಶಾಲ ಹೃದಯವಂತಿಕೆ ತೋರಿದ್ದಾರೆ ಎಂದ ಶಿಂಧೆ
ಮುಂಬೈ, ಜೂ.30: ಬಂಡಾಯ ಶಾಸಕರ ಬಿಕ್ಕಟ್ಟಿನ ಅವಧಿ ಮುಗಿದು ಏಕನಾಥ್ ಶಿಂಧೆ ಮುಖ್ಯಮಂತ್ರಿ ಎಂದು ಘೋಷಿತವಾಗುತ್ತಿದ್ದಂತೆ ಶಿಂಧೆ ಬಿಜೆಪಿಯ ದೇವೇಂದ್ರ ಫಡ್ನವೀಸ್ಗೆ ಅವರು ವಿಶಾಲ ಹೃದಯವಂತಿಕೆ ತೋರಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.
ಶಿವಸೇನೆಯ ಬಂಡಾಯ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಎಂದು ಘೋಷಿತವಾಗಿರುವ ಏಕನಾಥ್ ಶಿಂಧೆ ಗುರುವಾರ ಬಿಜೆಪಿಯ ದೇವೇಂದ್ರ ಫಡ್ನವೀಸ್ಗೆ ಧನ್ಯವಾದ ಅರ್ಪಿಸಿದ್ದಾರೆ. ಅವರು ತಮ್ಮ ಸಂಖ್ಯೆ ಬಲಗಳ ಪ್ರಕಾರ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ ದೊಡ್ಡ ಹೃದಯವಂತಿಕೆ ತೋರಿಸಿದ್ದಾರೆ ಎಂದು ಹೇಳಿದರು.
ಬಾಳಾ ಠಾಕ್ರೆಯವರ ಶಿವಸೈನಿಕರನ್ನು ಬೆಂಬಲಿಸುವುದಾಗಿ ದೇವೇಂದ್ರ ಫಡ್ನವೀಸ್ ನನಗೆ ಹೇಳಿದ್ದರು. ಈ ವೇಳೆ ಅವರು ತಮ್ಮ ದೊಡ್ಡ ಹೃದಯವಂತಿಕೆಯನ್ನು ತೋರಿಸಿದ್ದಾರೆ. 120 ಶಾಸಕರನ್ನು ಹೊಂದಿರುವ ಯಾರೋ ಇದನ್ನು ಮಾಡುವುದಿಲ್ಲ. ಯಾರೂ ಕೂಡ ಮುಖ್ಯಸ್ಥರ ಹುದ್ದೆಯನ್ನು ಸಹ ಬಿಡುವುದಿಲ್ಲ. ಅಂತಹದ್ದರಲ್ಲಿ ಇದು ಮುಖ್ಯಮಂತ್ರಿ ಹುದ್ದೆಯಾಗಿದೆ ಎಂದು ಅವರು ಹೇಳಿದರು.

ಮೋದಿ, ಶಾ, ಜೆಪಿ ನಡ್ಡಾಗೆ ಧನ್ಯವಾದ
ದೊಡ್ಡ ಅಭೂತಪೂರ್ವ ಘೋಷಣೆಯ ನಂತರ ಫಡ್ನವಿಸ್ ಅವರ ಪಕ್ಕದಲ್ಲಿ ಕೂತು ಮಾತನಾಡಿದ ಏಕನಾಥ್ ಶಿಂಧೆ ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ದ್ರೋಹ ಬಗೆಯುವುದಿಲ್ಲ. ಬಾಳಾ ಠಾಕ್ರೆಯವರ ಶಿವಸೈನಿಕರನ್ನುನಂಬಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರಿಗೆ ಧನ್ಯವಾದ ಅರ್ಪಿಸಿದರು.

ಏಕನಾಥ್ ಶಿಂಧೆ ಅಧಿಕಾರದ ಲಾಲಸೆ ಹೊಂದಿಲ್ಲ
ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವದ ಕಲ್ಪನೆ ಮತ್ತು ದಿವಂಗತ ಶಿವಸೇನೆಯ ಹಿರಿಯ ನಾಯಕ ಆನಂದ್ ದಿಘೆ ಅವರ ಬೋಧನೆಗಳನ್ನು ಮುಂದುವರಿಸಲು ಬಂಡಾಯ ಶಾಸಕರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಮತ್ತೊಮ್ಮೆ ಹೇಳಿದರು. ಏಕನಾಥ್ ಶಿಂಧೆ ಅವರು ಅಧಿಕಾರ ಅಥವಾ ಸ್ಥಾನದ ಲಾಲಸೆಯನ್ನು ಹೊಂದಿಲ್ಲ. ಅವರೊಂದಿಗಿನ ತಮ್ಮ 50 ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಸಿದ್ಧಾಂತ ಮತ್ತು ಅಭಿವೃದ್ಧಿಯ ಬಗ್ಗೆ ಮಾತ್ರ ಕಾಳಜಿ ವಹಿಸಿದ್ದಾರೆ ಎಂದು ಪುನರುಚ್ಚರಿಸಿದರು. ಇದನ್ನು ಮಹಾ ವಿಕಾಸ್ ಅಘಾಡಿ ಸರ್ಕಾರದ ಭಾಗವಾಗಿರುವ ಇತರ ಪಕ್ಷಗಳು ಕೈಬಿಟ್ಟಿವೆ ಎಂದು ಶಿಂಧೆ ಹೇಳಿದರು.

ನಾನು ಹೊರಗಿನಿಂದ ಬೆಂಬಲ ನೀಡುತ್ತೇನೆ
ಬಂಡಾಯ ಶಾಸಕರು ಶಿವಸೇನೆಯನ್ನು ಸರಿಪಡಿಸಬೇಕು ಮತ್ತು ತಮ್ಮ ಮಿತ್ರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಪದೇ ಪದೇ ವಿನಂತಿಸಿದರು. ಆದರೆ ಕೇಳಲಿಲ್ಲ ಎಂದು ಶಿಂಧೆ ಹೇಳಿದರು. ಪ್ರಮಾಣವಚನ ಸ್ವೀಕಾರಕ್ಕೆ ಕೆಲವೇ ಗಂಟೆಗಳ ಮೊದಲು ದೇವೇಂದ್ರ ಫಡ್ನವೀಸ್ ಅವರು ಅಚ್ಚರಿಯ ಘೋಷಣೆ ಮಾಡಿ ತಾನು ಸರ್ಕಾರದ ಮುಖ್ಯಸ್ಥನಾಗುವುದಿಲ್ಲ ಆದರೆ ಹೊರಗಿನಿಂದ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ.

ಏಕನಾಥ್ ಶಿಂಧೆ ಸಿಎಂ ಆಗಿ ಪ್ರಮಾಣವಚನ
ನಾನು ಮುಖ್ಯ ಸ್ಥಾನದಿಂದ ಹೊರಗುಳಿಯುತ್ತೇನೆ ಹಾಗೂ ಅದು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳುತ್ತೇನೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದರು. ಏಕನಾಥ್ ಶಿಂಧೆ ಸಂಜೆ 7:30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದರು. ಬೇರೆ ಯಾವುದೇ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಶಿಂಧೆ ಅವರ ಗುಂಪಿಗೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದೆ. ಶಿವಸೇನಾ ಬಂಡಾಯ ಶಾಸಕರು, ಬಿಜೆಪಿ ಶಾಸಕರು ಮತ್ತು ಕೆಲವು ಸ್ವತಂತ್ರರು ಸಂಪುಟ ವಿಸ್ತರಣೆಯ ಸಮಯದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಫಡ್ನವೀಸ್ ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications