ಮುಂಜಾನೆ 'ಮಹಾ' ಕ್ರಾಂತಿ: ಟ್ರೆಂಡಿಂಗ್ ಆಯ್ತು ಫಡ್ನವಿಸ್ ಟ್ವೀಟ್
Recommended Video
ರಾಜಕೀಯದಲ್ಲಿ ಶಾಶ್ವತ ಶತ್ರುಗಳಿಲ್ಲ, ಮಿತ್ರರೂ ಇಲ್ಲ ಎಂಬ ಮಾತತು ಎಂದಿನಿಂದಲೋ ಜನಜನಿತ. ಚುನಾವಣೆಗೆ ಮುಂಚೆ ವಾಚಾಮಗೋಚರ ಬೈದುಕೊಂಡವರೇ ಚುನಾವಣೆಯ ನಂತರ ಕುಚಿಕು ಸ್ನೇಹಿತರಾಗಬಹುದು! ಇದೀಗ ಮಹಾರಾಷ್ಟ್ರದಲ್ಲಿ ನಡೆದ ಅನಿರೀಕ್ಷಿತ ಬೆಳವಣಿಗೆ ಅಂಥದೊಂದು ಮಾತಿಗೆ ಪುಷ್ಠಿ ನೀಡಿದೆ.
ಇದೀಗ ಬಿಜೆಪಿ ಎನ್ ಸಿಪಿಯ ಅಜಿತ್ ಪವಾರ್ ಅವರ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲು ಮುಂದಾಗಿದ್ದು, ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಈ ಕ್ಷಿಪ್ರ ಬೆಳವಣಿಗೆಯ ಹೊತ್ತಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು 2014 ರ ಸೆಪ್ಟೆಂಬರ್ 26 ರಂದು ಮಾಡಿದ್ದ ಟ್ವೀಟ್ ಇದೀಗ ಟ್ರೆಂಡಿಂಗ್ ಆಗಿದೆ.
"ಬಿಜೆಪಿ ಎಂದಿಗೂ, ಎಂದೆಂದಿಗೂ ಎನ್ ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ವದಂತಿಗಳೆಲ್ಲ ಸುಳ್ಳು. ನಾವು ವಿಧಾನಸಭೆಯಲ್ಲಿ ಎನ್ ಸಿಪಿಯ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಆದರೆ ಮಿಕ್ಕವರೆಲ್ಲ ಆಗ ಮೌನವಾಗಿದ್ದರು" ಎಂಬ ದೇವೇಂದ್ರ ಫಡ್ನವಿಸ್ ಟ್ವೀಟ್ ಇದೀಗ ಟ್ರೋಲ್ ಹೈಕ್ಳಿಗೆ ಮೃಷ್ಟಾನ್ನ ಭೋಜನ ಬಡಿಸಿದೆ!

ಮಾತು ಮುರಿಯದ ಫಡ್ನವಿಸ್!
ಫಡ್ನವಿಸ್ ಎಂದಿಗೂ ತಮ್ಮ ಮಾತಿಗೆ ಬದ್ಧರಾಗಿರುತ್ತಾರೆ. ಅವ್ರು ಮಾತು ಮುರಿಯುವುದಿಲ್ಲ ಎಂಬುದನ್ನು ಕೇಳಿದ್ದೆ. ಬಿಜೆಪಿ ಅಂಥ ಸಿದ್ಧಾಂತಗಳನ್ನು ಎಂದಿಗೂ ಮರೆಯುವುದಿಲ್ಲ. ಅದಕ್ಕೆ ಇಲ್ಲಿದೆ ಸಾಕ್ಷಿ ಎಂದು ಪಿಶು ಎಂಬುವವರು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಹಗರಣ ಬಯಲು ಮಾಡಿದ್ದ ಫಡ್ನವಿಸ್
ಮಹಾರಾಷ್ಟ್ರ ನೀರಾವರಿ ಹಗರಣವನ್ನು ದೇವೇಂದ್ರ ಫಡ್ನವಿಸ್ ಬಯಲು ಮಾಡುವಾಗ ಅಂದಿನ ರಾಜ್ಯ ಜಲ ಸಂಪನ್ಮೂಲ ಇಲಾಖೆಯ ನೇತೃತ್ವ ವಹಿಸಿದ್ದು ಅಜಿತ್ ಪವಾರ್. ಇದೀಗ ಅದೇ ವ್ಯಕ್ತಿಯೊಂದಿಗೆ ಫದ್ನವಿಸ್ ಸರ್ಕಾರ ರಚಿಸಿ, ಡಿಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂದು ರಾಫ್ಲ್ ರಿಪಬ್ಲಿಕ್ ಎಂಬ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಅವರ ಮಾತಿಗೆ ವಿಧೇಯರಾಗಿದ್ದಾರೆ!
"ಈ ವ್ಯಕ್ತಿ ನಮ್ಮ ಮಹಾರಾಷ್ಟ್ರ ಮುಖ್ಯಮಂತ್ರಿ. ಅವರು ಎಂದಿಗೂ ತಮ್ಮ ಮಾತಿಗೆ ಬದ್ಧರಾಗಿದ್ದಾರೆ" - ಪ್ರೀತಿ ಶರ್ಮಾ ಮೆನಾನ್

ಅನಿರೀಕ್ಷಿತ ಬೆಳವಣಿಗೆ
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕುರಿತು ಸಾಕಷ್ಟು ಮೈತ್ರಿ ಕಾಂಬಿನೇಷನ್ ಗಳ ವದಂತಿ ಇತ್ತಾದರೂ ಶುಕ್ರವಾರ ಸಂಜೆಯ ಹೊತ್ತಿಗೆ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂಬುದು ಬಹುತೇಕ ಖಚಿತವಾಗಿತ್ತು. ಆದರೆ ಬೆಳಿಗ್ಗೆ ಇದ್ದಕ್ಕಿದ್ದಂತೆ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಎನ್ ಸಿಪಿ ಮುಖಂಡ ಅಜಿತ್ ಪವಾರ ಬೆಂಬಲದ ಮೇರೆಗೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications