ಸಂಜಯ್ ದತ್ ಕೈಗೆ ಬಾಂಬ್ ನೀಡಿರಲಿಲ್ಲ: ಅಬು ಸಲೇಂ
ಮುಂಬೈ, ಆಗಸ್ಟ್ 12: ಮುಂಬೈನಲ್ಲಿ 1993ರಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ವೇಳೆ ಬಾಲಿವುಡ್ ನಟ ಸಂಜಯ್ ದತ್ ಮನೆಗೆ ತೆರಳಿ ಸ್ಫೋಟಕ ವಸ್ತುಗಳನ್ನು ಸಾಗಿಸಿರಲಿಲ್ಲ ಎಂದು ಭೂಗತ ಪಾತಕಿ ಅಬು ಸಲೇಂ ಹೇಳಿದ್ದಾರೆ. ಟಾಡಾ ನ್ಯಾಯಾಲಯದ ಮುಂದೆ ಗ್ಯಾಂಗ್ ಸ್ಟರ್ ನೀಡುವ ಹೇಳಿಕೆ ಈ ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದೆ.
ಮುಂಬೈ ಸರಣಿ ಬಾಂಬ್ ಸ್ಫೋಟಕ ಸಂಬಂಧಿಸಿದಂತೆ ಈಗಾಗಲೇ ಪೊಲೀಸರ ವಶದಲ್ಲಿರುವ ಸಂಜಯ್ ದತ್ ಅವರಿಗೆ ಎರಡು ಎಕೆ-47 ಬಂದೂಕು, ಗ್ರಾನೈಡ್ ಬಾಂಬ್ಗಳನ್ನು ಪೂರೈಕೆ ಮಾಡಿರುವ ಆರೋಪ ನಿಜವಲ್ಲ. ನಾನು ಯಾವುದೇ ಸ್ಫೋಟಕ ವಸ್ತುಗಳನ್ನು ನೀಡಿರಲಿಲ್ಲ ಎಂದು ಟಾಡಾ ನ್ಯಾಯಾಲಯದ ಮುಂದೆ ಅಬು ಸಲೇಂ ತನ್ನ ಹೇಳಿಕೆ ದಾಖಲಿಸಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಕಾರಣಕ್ಕೆ ನಟ ಸಂಜಯ್ದತ್ ಅವರಿಗೆ ಮುಂಬೈನ ಟಾಡಾ ನ್ಯಾಯಾಲಯ ಮೂರೂವರೆ ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಈ ಪ್ರಕರಣದಲ್ಲಿ ಅಬು ಸಲೇಂ ಜತೆಗೆ ರಿಯಾಜ್ ಸಿದ್ದಿಕಿ , ಕರೀಂ ಉಲ್ಲಾ ಖಾನ್, ಫೆರೋಜ್ ಅಬ್ದುಲ್ ರಸೀದ್, ತಾಹಿರ್ ಮರ್ಚೆಂಟ್ ಮತ್ತು ಮುಸ್ತಫ ಜೋಸಾ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.
ಇತ್ತೀಚೆಗಷ್ಟೆ ನಾಗ್ಪುರ್ ಸೆಂಟ್ರಲ್ ಜೈಲಿನಲ್ಲಿ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮೊದಲ ಅಪರಾಧಿಯಾಗಿ ನೇಣಿಗೇರಿದ ಯಾಕೂಬ್ ಮೆಮನ್ ಕೂಡಾ ಅಪರಾಧಿಯಾಗಿದ್ದರು.ಭಾರತದಿಂದ ತಲೆಮರೆಸಿಕೊಂಡು ಪೋರ್ಚ್ಗಲ್ನಲ್ಲಿದ್ದ ಅಬುಸಲೇಂನನ್ನು 2012ರಲ್ಲಿ ಭಾರತಕ್ಕೆ ಕರೆ ತರಲಾಗಿತ್ತು. (ಪಿಟಿಐ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications