ಗೋಡ್ಸೆ-ಸಾವರ್ಕರ್ ಸಲಿಂಗಿ ಎಂದ ಕಾಂಗ್ರೆಸ್ಸಿಗೆ ಶಿವಸೇನಾ ತಿರುಗೇಟು
ಭೋಪಾಲ್, ಜನವರಿ 03: ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿ ಅಧೀನದ ಸೇವಾ ದಳ ಪ್ರಕಟಿಸಿರುವ ಕೈಪಿಡಿಯಲ್ಲಿ ವೀರ್ ಸಾವರ್ಕರ್ ಸಲಿಂಗಿ, ಸಾವರ್ಕರ್ ಮತ್ತು ಗೋಡ್ಸೆ ಮಧ್ಯೆ ದೈಹಿಕ ಸಂಬಂಧವಿತ್ತು ಎಂದು ಉಲ್ಲೇಖಿಸಲಾಗಿದೆ. ಈ ಬಗ್ಗೆ ಬಿಜೆಪಿ ಹಾಗೂ ಶಿವಸೇನೆ ಕಿಡಿಕಾರಿದೆ. ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಪ್ರತಿಕ್ರಿಯಿಸಿದ್ದಾರೆ.
"ವೀರ್ ಸಾವರ್ಕರ್ ಅವರು ಶ್ರೇಷ್ಠ ವ್ಯಕ್ತಿ, ಹೋರಾಟಗಾರ, ಅವರು ಜನರ ಮನಸ್ಸಿನಲ್ಲಿ ಹಾಗೆ ಉಳಿಯುತ್ತಾರೆ. ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುವವರ ಮನಸ್ಸು ಕೊಳಕಿನಿಂದ ಕೂಡಿರುತ್ತದೆ" ಎಂದಿದ್ದಾರೆ.
ಭೋಪಾಲ್ನ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಅಖಿಲ ಭಾರತ ಕಾಂಗ್ರೆಸ್ ಸೇವಾದಳ ತರಬೇತಿ ಶಿಬಿರದಲ್ಲಿ 'ಹೌ ಬ್ರೇವ್ ವಾಸ್ ವೀರ್ ಸಾವರ್ಕರ್' ಅಥವಾ ವೀರ್ ಸಾವರ್ಕರ್ ಕಿತ್ನೆ ವೀರ್ ಎಂಬ ಶೀರ್ಷಿಕೆಯ ಪುಸ್ತಕವನ್ನು ಹಂಚಲಾಗಿದೆ. ಈ ಪುಸ್ತಕದಲ್ಲಿ ಆರೆಸ್ಸೆಸ್, ಸಾವರ್ಕರ್, ನಾಥೂರಾಮ್ ಗೋಡ್ಸೆ ಬಗ್ಗೆ ಉಲ್ಲೇಖವಿದೆ.

ಹಿಂದು ಮಹಾಸಭೆ ಸಹಸಂಸ್ಥಾಪಕ ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆ ನಡುವೆ ದೈಹಿಕ ಸಂಬಂಧವಿತ್ತು, ಅಂಡಮಾನ್ ಸೆಲ್ಯುಲರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಬ್ರಿಟಿಷರಿಂದ ಸಾವರ್ಕರ್ ಹಣ ಪಡೆದಿದ್ದರು ಎಂದು ತಿಳಿಸಲಾಗಿದೆ.
'ಫ್ರೀಡಂ ಅಟ್ ಮಿಡ್ನೈಟ್' ಪುಸ್ತಕದಲ್ಲಿ ತಿಳಿಸಿರುವ ಘಟನೆಯೊಂದನ್ನು ಉಲ್ಲೇಖಿಸಿ, '' ಗೋಡ್ಸೆ ಹಾಗೂ ಅವರ ರಾಜಕೀಯ ಗುರು ಸಾವರ್ಕರ್ ನಡುವಿನ ದೈಹಿಕ ಸಂಬಂಧದ ಬಗ್ಗೆ ವಿವರಗಳಿವೆ. ಒಟ್ಟಾರೆ ಕಾಂಗ್ರೆಸ್ ಕೈಪಿಡಿ ವಿವಾದಕ್ಕೆ ಕಾರಣವಾಗಿದೆ.
ಸಾವರ್ಕರ್ 12 ವರ್ಷದವರಿದ್ದಾಗ ಮಸೀದಿಯೊಂದಕ್ಕೆ ಕಲ್ಲೆಸೆದಿದ್ದರು. ಹಿಟ್ಲರ್ ನಿಂದ ಪ್ರೇರಣೆ ಪಡೆದಿದ್ದರು ಎಂದೆಲ್ಲ ಪ್ರಶ್ನೋತ್ತರ ಕೈಪಿಡಿಯಲ್ಲಿ ಬರೆಯಲಾಗಿದೆ.
ಕಾಂಗ್ರೆಸ್ ಕೈಪಿಡಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ರಾಕೇಶ್ ಸಿಂಗ್, ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡುವುದೇ ಕಾಂಗ್ರೆಸ್ಸಿನ ಕಾಯಕ ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಕೈಜೋಡಿಸಿ ಸರ್ಕಾರ ರಚಿಸಿದೆ. ಆದರೆ, ಸಾವರ್ಕರ್ ಗೆ ಅಪಮಾನ ಮಾಡುವಂಥ ಇಂಥ ಕೃತ್ಯದ ಬಗ್ಗೆ ಶಿವಸೇನಾ ನಾಯಕರು ಕಿಡಿಕಾರಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications