ಹಿಂದು,ಬ್ರಾಹ್ಮಣನ ವಿರೋಧಿ ಪೋಸ್ಟ್: ಮುಂಬೈಯಲ್ಲಿ ವೈದ್ಯನ ಬಂಧನ
ಮುಂಬೈ, ಮೇ 16: ಹಿಂದು-ಬ್ರಾಹ್ಮಣ ವಿರೋಧಿ ಹೇಳಿಕೆಯನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ವೈದ್ಯರೊಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ರವೀಂದ್ರ ತಿವಾರಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು 38 ವರ್ಷ ವಯಸ್ಸಿನ ಡಾ.ಸುನಿಲ್ ಕುಮಾರ್ ನಿಶಾದ್ ಎಂಬುವವರನ್ನು ಬುಧವಾರ ಬಂಧಿಸಿದ್ದಾರೆ.
ಮೊದಲ ಉಗ್ರ ಹಿಂದು: ಸತ್ಯವನ್ನೇ ಹೇಳಿದ್ದೇನೆ ಎಂದ ಕಮಲ್ ಹಾಸನ್
ಕಳೆದ ಹಲವು ದಿನಗಳಿಂದ ನಿರಂತರವಾಗಿ ಫೇಸ್ ಬುಕ್ ನಲ್ಲಿ ನಿಶಾದ್ ಅವರು ಹಿಂದು ವಿರೋಧಿ ಮತ್ತು ಬ್ರಾಹ್ಮಣ ವಿರೋಧಿ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಹೋಮಿಯೋಪಥಿ ವೈದ್ಯರಾಗಿದ್ದ ಅವರು ಫೇಸ್ ಬುಕ್ ನಲ್ಲಿ 4996 ಸ್ನೇಹಿತರನ್ನು ಹೊಂದಿದ್ದು, ಇತ್ತೀಚೆಗೆ ಇವಿಎಂ ಬಗ್ಗೆ, ಭೋಪಾಲ್ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ಠಾಕೂರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದರು.
ಬಿಎಸ್ಪಿಯ ಕಾಂಶಿರಾಮ್ ಅವರ ಬಿಎಎಂಸಿಇಎಫ್(ಅಲ್ಪಸಂಖ್ಯಾತ ಸಮುದಾಯದ ಉದ್ಯೋಗಿಗಳ ಸಂಘಟನೆ) ಯ ಸದಸ್ಯನೆಂದು ನಿಶಾದ್ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಗುರುವಾರ ಅವರನ್ನು ಕೋರ್ಟಿಗೆ ಹಾಜರುಪಡಿಸಲಾಗುತ್ತಿದ್ದು, ಈಗಾಗಲೇ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.