ಕಂಗನಾ ವಿರುದ್ಧ ಕಿಡಿಕಾರಿದ್ದ ಶಾಸಕನ ಮನೆ ಮೇಲೆ ಇ.ಡಿ ದಾಳಿ
ಮುಂಬೈ, ನವೆಂಬರ್ 24: ಶಿವಸೇನಾ ಮುಖಂಡ ಪ್ರತಾಪ್ ಸರ್ನಾಯಕ್ ಅವರ ಕಚೇರಿ ಮತ್ತು ನಿವಾಸ ಆವರಣಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದೆ.
ಶಿವಸೇನಾ ಶಾಸಕ ಪ್ರತಾಪ್ ಸರ್ನಾಯಕ್ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಪಾಸಣೆ ಮತ್ತು ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ದಾಳಿಯೇ ಎಂಬುದನ್ನು ಇ.ಡಿ. ಇನ್ನೂ ಖಾತರಿಪಡಿಸಿಲ್ಲ.
'ಜಾರಿ ನಿರ್ದೇಶಾನಲಯವು ಭದ್ರತಾ ಪೂರೈಕೆದಾರ ಟಾಪ್ಸ್ ಗ್ರೂಪ್ ಪ್ರವರ್ತಕರಿಗೆ ಮತ್ತು ಕೆಲವು ರಾಜಕಾರಣಿಗಳು ಸೇರಿದಂತೆ ಅದಕ್ಕೆ ಸಂಬಂಧಿಸಿದ ಸದಸ್ಯರಿಗೆ ಸೇರಿದ ಜಾಗಗಳಲ್ಲಿ ತಪಾಸಣೆ ನಡೆಸಿದೆ. ಮುಂಬೈ ಮತ್ತು ಥಾಣೆಗಳಲ್ಲಿ ಹತ್ತು ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ' ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ಥಾಣೆಯ ಒವಾಲ-ಮಜಿವಾಡ ಕ್ಷೇತ್ರದ ಶಿವಸೇನಾ ಶಾಸಕರಾಗಿರುವ ಪ್ರತಾಪ್ ಸರ್ನಾಯಕ್, ಮುಂಬೈ ಅನ್ನು ಪಾಕಿಸ್ತಾನ ಆಕ್ರಮಿಕ ಕಾಶ್ಮೀರಕ್ಕೆ ಹೋಲಿಸಿದ್ದ ನಟಿ ಕಂಗನಾ ರಣಾವತ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸುವ ಮೂಲಕ ಇತ್ತೀಚೆಗೆ ಸುದ್ದಿಯಾಗಿದ್ದರು.
'ಸಂಸದ ಸಂಜಯ್ ರಾವತ್ ಅವರು ಬಹಳ ಮೃದುವಾದ ರೀತಿ ಕಂಗನಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಆಕೆ ಇಲ್ಲಿಗೆ ಬಂದರೆ ನಮ್ಮ ಧೈರ್ಯಶಾಲಿ ಮಹಿಳೆಯರು ಆಕೆಗೆ ಬಾರಿಸದೆ ಇರುವುದಿಲ್ಲ. ಉದ್ಯಮಿಗಳು ಮತ್ತು ಸಿನಿಮಾ ತಾರೆಯರನ್ನು ಸೃಷ್ಟಿಸುವ ನಗರವಾದ ಮುಂಬೈ ಅನ್ನು ಆಕೆ ಪಿಒಕೆಗೆ ಹೋಲಿಸಿದ್ದಕ್ಕೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು' ಎಂದು ಅವರು ಹೇಳಿದ್ದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications