Breaking; ಮಹಾರಾಷ್ಟ್ರ ಸಚಿವರ ಮನೆ ಮೇಲೆ ಇಡಿ ದಾಳಿ
ಮುಂಬೈ, ಮೇ 26: ಭೂ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್ಗೆ ಸಂಬಂಧಿಸಿದ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ.
ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಮಾರು 7 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಸೇನಾ ನಾಯಕ ಅನಿಲ್ ಪರಬ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಹೊಸ ಪ್ರಕರಣ ದಾಖಲಿಸಿದ ನಂತರ ಪುಣೆ, ಮುಂಬೈ ಮತ್ತು ದಾಪೋಲಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
2017ರಲ್ಲಿ ರತ್ನಗಿರಿ ಜಿಲ್ಲೆಯ ದಾಪೋಲಿಯಲ್ಲಿ ಶ್ರೀ ಪರಬ್ 1 ಕೋಟಿಗೆ ಭೂಮಿಯನ್ನು ಖರೀದಿಸಿದ್ದಾರೆ. ಆದರೆ ಇದು 2019ರಲ್ಲಿ ನೋಂದಾಯಿಸಲ್ಪಟ್ಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಇಡಿ ಕ್ರಮಕ್ಕೆ ಮುಂದಾಗಿದೆ.
ನಂತರ 2020ರಲ್ಲಿ ಮುಂಬೈ ಮೂಲದ ಕೇಬಲ್ ಆಪರೇಟರ್ ಸದಾನಂದ್ ಕದಂ ಎಂಬುವವರಿಗೆ 1.10 ಕೋಟಿಗೆ ಭೂಮಿಯನ್ನು ಮಾರಾಟ ಮಾಡಲಾಗಿದ್ದು, 2017-2020ರ ನಡುವೆ ಆ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.
ಆದಾಯ ತೆರಿಗೆ ಇಲಾಖೆಯು 2017 ರಲ್ಲಿ ರೆಸಾರ್ಟ್ ನಿರ್ಮಾಣದ ಬಗ್ಗೆ ತನಿಖೆ ಪ್ರಾರಂಭಿಸಿತ್ತು. ಅದಕ್ಕೆ 6 ಕೋಟಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂಬ ಆರೋಪವಿದೆ.