ಮಹಾರಾಷ್ಟ್ರ ರಾಜಕೀಯ: ಬಹುಮತ ಸಾಬೀತಿಗೆ ಸೋಮವಾರ ಮುಹೂರ್ತ ಫಿಕ್ಸ್
ಮುಂಬೈ, ಜುಲೈ 3: ಮಹಾರಾಷ್ಟ್ರದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಏಕನಾಥ್ ಶಿಂಧೆ-ಬಿಜೆಪಿ ಸರಕಾರಕ್ಕೆ ಜುಲೈ 4ರ ಸೋಮವಾರ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜುಲೈ 3 ಭಾನುವಾರದಿಂದ ಎರಡು ದಿನಗಳ ವಿಧಾನಸಭೆ ವಿಶೇಷ ಅಧಿವೇಶನ ನಡೆಯಲಿದೆ.
ಇದಕ್ಕೂ ಮೊದಲು ಸ್ಪೀಕರ್ ಆಯ್ಕೆ ಮಾಡಲಿದ್ದು, ಶಿವಸೇನೆ ಶಾಸಕ ಮತ್ತು ಉದ್ಧವ್ ಠಾಕ್ರೆ ಬೆಂಬಲಿಗ ರಾಜನ್ ಸಾಲ್ವಿ, ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಟಿಕೆಟ್ನಲ್ಲಿ ಸ್ಪೀಕರ್ ಹುದ್ದೆಗೆ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯ ನೂತನ ಶಾಸಕ ರಾಹುಲ್ ನಾರ್ವೇಕರ್ ಎದುರಾಳಿಯಾಗಿ ಸ್ಪರ್ಧಿಸಿದ್ದಾರೆ.
39 ಶಿವಸೇನೆ ಬಂಡಾಯ ಶಾಸಕರು ಸೇರಿದಂತೆ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ 50 ಶಾಸಕರು ಶನಿವಾರ ರಾತ್ರಿ ಗೋವಾದಿಂದ ಮುಂಬೈಗೆ ಚಾರ್ಟರ್ಡ್ ವಿಮಾನದಲ್ಲಿ ಆಗಮಿಸಿದ್ದಾರೆ. ವಿಧಾನಸಭೆ ಅಧಿವೇಶನದ ಮುನ್ನಾದಿನ, ಬಂದಿಳಿದ ಶಾಸಕರು ವಿಧಾನ ಭವನದ ಸಮೀಪವಿರುವ ದಕ್ಷಿಣ ಮುಂಬೈನಲ್ಲಿರುವ ಐಷಾರಾಮಿ ಹೋಟೆಲ್ನಲ್ಲಿ ತಂಗಿದ್ದರು.

ಎನ್ಸಿಪಿ ನಾಯಕ ಶರದ್ ಪವಾರ್, ಉಪಸಭಾಪತಿ ನರಹರಿ ಜಿರ್ವಾಲ್ ಅವರ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಪರಿಗಣಿಸಲಾಗಿದ್ದರೂ ಸಹ ಸ್ಪೀಕರ್ ಆಗಿ ಕಾರ್ಯನಿರ್ವಹಿಸಬಹುದು ಎಂದು ಪ್ರತಿಪಾದಿಸಿದರು. ಫೆಬ್ರವರಿ 2021 ರಲ್ಲಿ ಕಾಂಗ್ರೆಸ್ನ ನಾನಾ ಪಟೋಲೆ ರಾಜೀನಾಮೆ ನೀಡಿದ ನಂತರ, ಸ್ಪೀಕರ್ ಸ್ಥಾನ ಖಾಲಿಯಾಗಿದೆ.
ಸದನದ ಬಲಾಬಲ; 288 ಸದಸ್ಯ ಬಲದ ಸದನದಲ್ಲಿ 10 ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರು ಹಾಗೂ 106 ಬಿಜೆಪಿ ಶಾಸಕರು ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದಾರೆ. ಶಿವಸೇನೆ 55, ಎನ್ಸಿಪಿ 53, ಕಾಂಗ್ರೆಸ್ 44, ಬಿಜೆಪಿ 106, ಬಹುಜನ ವಿಕಾಸ್ ಅಘಾಡಿ 3, ಸಮಾಜವಾದಿ 2, ಎಐಎಂಐಎಂ 2, ಪ್ರಹರ್ ಜನಶಕ್ತಿ 1, ಸಿಪಿಐ (ಎಂ) 1, ಪಿಡಬ್ಲ್ಯೂಪಿ 1, ಸ್ವಾಭಿಮಾನಿ ಪಕ್ಷ 1, ರಾಷ್ಟ್ರೀಯ ಸಮಾಜ ಪಕ್ಷ 1, ಜನಸುರಾಜ್ಯ ಶಕ್ತಿ ಪಕ್ಷ 1, ಕ್ರಾಂತಿಕಾರಿ ಶೆಟ್ಕರಿ ಪಕ್ಷ 1 ಸ್ಥಾನಗಳನ್ನು ಹೊಂದಿದೆ.

ಮೇ ತಿಂಗಳಲ್ಲಿ ಶಿವಸೇನೆ ಶಾಸಕ ರಮೇಶ್ ಲಟ್ಕೆ ಅವರು ನಿಧನರಾದ ಕಾರಣ ಒಂದು ಸ್ಥಾನ ಖಾಲಿಯಾಗಿದೆ. ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಮಾಜಿ ಸಚಿವ ಛಗನ್ ಭುಜಬಲ್ ಇಬ್ಬರೂ ಎನ್ಸಿಪಿ ಸದಸ್ಯರಾಗಿದ್ದು, ಕೋವಿಡ್ -19 ಸೋಂಕು ಧೃಡವಾಗಿದೆ, ಪಕ್ಷದ ಇತರ ಇಬ್ಬರು ಶಾಸಕರಾದ ಅನಿಲ್ ದೇಶಮುಖ್ ಮತ್ತು ನವಾಬ್ ಮಲಿಕ್ ಪ್ರಸ್ತುತ ಜೈಲಿನಲ್ಲಿದ್ದಾರೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications