ಎಲ್ಗರ್ ಪರಿಷದ್ ಪ್ರಕರಣ ಆರೋಪಿ ಸ್ಟಾನ್ ಸ್ವಾಮಿಗೆ ಕೊರೊನಾ ದೃಢ
ಮುಂಬೈ, ಮೇ 31: ಎಲ್ಗರ್ ಪರಿಷತ್ ಪ್ರಕರಣದ ಆರೋಪಿ, ಸಾಮಾಜಿಕ ಕಾರ್ಯಕರ್ತ ಸ್ಟಾನ್ ಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
84 ವರ್ಷದ ಸ್ಟಾನ್ ಸ್ವಾಮಿ ಅವರು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳೂ ಇದ್ದವು. ಮೇ 28ರಂದು ತಲೋಜಾ ಜೈಲಿನಿಂದ ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲು ಮಾಡಲು ಬಾಂಬೆ ಹೈಕೋರ್ಟ್ ಸೂಚನೆ ನೀಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಭಾನುವಾರ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವ್ ಬಂದಿರುವುದಾಗಿ ಸ್ಟಾನ್ ಪರ ವಕೀಲ ಮಿಹಿರ್ ದೇಸಾಯಿ ತಿಳಿಸಿದ್ದಾರೆ. ತಲೋಜಾ ಜೈಲು ಅಧಿಕಾರಿಗಳ ನಿರ್ಲಕ್ಷ್ಯವೇ ಸೋಂಕು ಹರಡಲು ಕಾರಣ ಎಂದು ವಕೀಲರು ಆರೋಪಿಸಿದ್ದಾರೆ. ಜೈಲು ಸಿಬ್ಬಂದಿಗೆ, ಕೈದಿಗಳಿಗೆ ಕೊರೊನಾ ತಗುಲಿದ್ದರೂ ನಿರ್ಲಕ್ಷ್ಯ ಮಾಡಿದ್ದಾರೆ. ಈ ಕಾರಣವಾಗಿ ಸೋಂಕು ತಗುಲಿದೆ ಎಂದು ಹೇಳಿದ್ದಾರೆ.

ಈ ಮುನ್ನ ಜೆಜೆ ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿದ್ದು, ಆಸ್ಪತ್ರೆಗೆ ದಾಖಲಾಗಲು ಸ್ಟಾನ್ ಸ್ವಾಮಿ ನಿರಾಕರಿಸಿದ್ದರು. ಕ್ರಮೇಣ ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕ್ಷೀಣಿಸುತ್ತಿದ್ದು, ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿಕೊಂಡಿದ್ದರು. ಅವರ ಅನಾರೋಗ್ಯ ಪರಿಗಣಿಸಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿಕೊಂಡಿದ್ದರು.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಾನು ಇಲ್ಲಿಯೇ ಸಾಯಬಹುದು. ನಾನು ಆಸ್ಪತ್ರೆಗೆ ದಾಖಲಾಗುವ ಬದಲು ಇಲ್ಲೇ ಇರುತ್ತೇನೆ ಎಂದು ಬಾಂಬೆ ಹೈಕೋರ್ಟ್ಗೆ ಹೇಳಿದ್ದರು. ನಾನು ನನ್ನ ಕೊನೆಯ ಸಂದರ್ಭದಲ್ಲಿ ರಾಂಚಿಯಲ್ಲಿರಲು ಬಯಸುತ್ತೇನೆ. ಈಗ ನನ್ನನ್ನು ಆಸ್ಪತ್ರೆಗೆ ದಾಖಲು ಮಾಡುವುದರಿಂದ ಏನೂ ಪ್ರಯೋಜನವಾಗದು ಎಂದು ನನಗನಿಸುತ್ತಿದೆ. ನಿಧಾನವಾಗಿ ನನ್ನ ಸ್ಥಿತಿ ಶೋಚನೀಯವಾಗುತ್ತಿದೆ. ಎಂಟು ತಿಂಗಳ ಹಿಂದೆ ನಾನು ನನ್ನ ಕೆಲವು ಕೆಲಸಗಳನ್ನಾದರೂ ಮಾಡುತ್ತಿದ್ದೆ. ಊಟ ಮಾಡುತ್ತಿದ್ದೆ, ಸ್ವಲ್ಪ ಬರೆಯುತ್ತಿದ್ದೆ, ನಡೆದಾಡುತ್ತಿದ್ದೆ, ಯಾರ ಸಹಾಯ ಪಡೆಯದೆಯೇ ಸ್ನಾನ ಮಾಡುತ್ತಿದ್ದೆ. ಆದರೆ ಈಗ ಪರಿಸ್ಥಿತಿ ಬಿಗಡಾಯಿಸಿದೆ. ನನಗೆ ನಡೆದಾಡಲು ಕೂಡ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಇದ್ದೇನೆ. ಆಹಾರವನ್ನೂ ಯಾರಾದರು ತಿನ್ನಿಸಬೇಕಾಗಿದೆ. ಹೀಗಿರುವಾಗ ನಾನು ರಾಂಚಿಯಲ್ಲಿರಲು ಬಯಸುತ್ತೇನೆ' ಎಂದು ಹೇಳಿದ್ದರು.
ಮೇ 28ರಂದು ಎಸ್ ಎಸ್ ಶಿಂಧೆ ಹಾಗೂ ಎನ್ ಆರ್ ಬೋರ್ಕಾರ್ ಅವರನ್ನೊಳಗೊಂಡ ಪೀಠವು ಜೈಲು ಅಧಿಕಾರಿಗಳಿಗೆ ತಲೋಜಾ ಜೈಲಿನಿಂದ ಆಸ್ಪತ್ರೆಗೆ ಸ್ಟಾನ್ ಸ್ವಾಮಿ ಅವರನ್ನು ಸ್ಥಳಾಂತರಿಸಲು ಸೂಚಿಸಿತ್ತು.
ಕಳೆದ ಅಕ್ಟೋಬರ್ನಲ್ಲಿ ಅವರನ್ನು ಎಲ್ಗರ್ ಪರಿಷದ್ ಮಾವೋವಾದಿ ನಂಟಿನ ಸಂಬಂಧ ಬಂಧಿಸಿ ತಲೋಜಾ ಜೈಲಿನಲ್ಲಿ ಇರಿಸಲಾಗಿತ್ತು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications