ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಮತ್ತೆ ಸಸ್ಪೆಂಡ್
ಮುಂಬೈ, ಜು.03: ಕರ್ನಾಟಕದ ಮೂಲದ ಎನ್ ಕೌಂಟರ್ ಸ್ಪೆಷಲಿಸ್ಟ್ ಸಬ್ ಇನ್ಸ್ ಪೆಕ್ಟರ್ ದಯಾನಾಯಕ್ ಅವರನ್ನು ಮಹಾರಾಷ್ಟ್ರ ಪೊಲೀಸ್ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ದಯಾನಾಯಕ್ ಅವರು ಈ ಹಿಂದೆ ಕೂಡಾ ಅಮಾನತುಗೊಂಡಿದ್ದರು. 2012ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ್ದರು. ಆಂತರಿಕ ತನಿಖೆ ಜಾರಿಯಲ್ಲಿದ್ದರಿಂದ ಕಳೆದ ವರ್ಷ ನಾಗಪುರಕ್ಕೆ ಅವರನ್ನು ವರ್ಗಾಯಿಸಲಾಗಿತ್ತು. ಅದರೆ, ಕರ್ತವ್ಯಕ್ಕೆ ಹಾಜರಾಗಿರಲಿಲ್ಲ.ಇದೇ ಕಾರಣಕ್ಕೆ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂಬ ಸುದ್ದಿಯಿದೆ. ಅದರೆ, ಮಹಾರಾಷ್ಟ್ರ ಪೊಲೀಸರು ಕಾರಣ ಸ್ಪಷ್ಟಪಡಿಸಿಲ್ಲ.
1995 ಐಪಿಎಸ್ ಬ್ಯಾಚಿನ ಅಧಿಕಾರಿ ದಯಾನಾಯಕ್ ಅವರನ್ನು 2006ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬಂಧಿಸಿದ ನಂತರ ಸುಮಾರು ಆರು ವರ್ಷಗಳ ಕಾಲ ಸೇವೆಯಿಂದ ಹೊರಗುಳಿಯಬೇಕಾಗಿತ್ತು. ಅಗತ್ಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಹೊರೆಸಿ ಕೇತಾನ್ ತಿರೋಡ್ಕರ್ ಎಂಬ ಪತ್ರಕರ್ತ ದೂರು ಸಲ್ಲಿಸಿದ್ದರು.

ದಯಾನಾಯಕ್ ವಿರುದ್ದ Maharashtra Control of Organised Crime Act ಮೋಕಾ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆದರೆ, 2010ರಲ್ಲಿ ನಾಯಕ್ ವಿರುದ್ಧ ಇದ್ದ ಎಲ್ಲಾ ಆರೋಪಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಕೇಸಿನಿಂದ ಮುಕ್ತಿ ನೀಡಿತ್ತು. [ಸಂತೋಷ್ 'ಎನ್ಕೌಂಟರ್'ನಲ್ಲಿ ಸಿಕ್ಕಿಬಿದ್ದ ದಯಾನಾಯಕ್]
2012ರಲ್ಲಿ ಮತ್ತೊಮ್ಮೆ ಕರ್ತವ್ಯದ ಕರೆ ಬಂದರೂ ಅಧಿಕಾರ ವಹಿಸಿಕೊಂಡಿರಲಿಲ್ಲ. ನಾಯಕ್ ಅವರು ವಿನೋದ್ ಮಟ್ಕರ್, ರಫೀಕ್ ಡಬ್ಬಾ, ಸಾಧಿಕ್ ಕಾಲಿಯಾ, ಲಷ್ಕರ್ ಉಗ್ರರು ಸೇರಿದಂತೆ 80ಕ್ಕೂ ಅಧಿಕ ಕ್ರಿಮಿನಲ್ ಗಳನ್ನು ಎನ್ ಕೌಂಟರ್ ಮೂಲಕ ಹತ್ಯೆಗೈದಿರುವ ರೆಕಾರ್ಡ್ ಹೊಂದಿದ್ದಾರೆ.
ಅಮಾನತು ಆದೇಶ ನನ್ನ ಕೈ ಸೇರಿಲ್ಲ ಎಂದು ದಯಾನಾಯಕ್ ಅವರು ತಕ್ಷಣದ ಪ್ರತಿಕ್ರಿಯೆ ನೀಡಿದ್ದಾರೆ. (ಪಿಟಿಐ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications