ಸುಶಾಂತ್ ಸಿಂಗ್ ಕೇಸ್: ED ವಿಚಾರಣೆಯಲ್ಲಿ ರಿಯಾ ಚಕ್ರವರ್ತಿ ಹೇಳಿದ್ದೇನು?
ಮುಂಬೈ, ಆಗಸ್ಟ್ 8: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲದ ಮುಂದೆ ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾ ಚಕ್ರವರ್ತಿ 'ನನ್ನ ಸ್ವಂತ ಆದಾಯದಿಂದ ವ್ಯವಹಾರ ಮಾಡಿದ್ದೇನೆ, ಸುಶಾಂತ್ ಹಣವನ್ನು ನಾನು ಬಳಸಿಲ್ಲ' ಎಂದು ಹೇಳಿಕೆ ನೀಡಿದ್ದಾರೆ.
ಸುಶಾಂತ್ ಸಿಂಗ್ ಖಾತೆಯಿಂದ ಗೆಳತಿ ರಿಯಾ ಚಕ್ರವರ್ತಿ ಸುಮಾರು 15 ಕೋಟಿವರೆಗೂ ಹಣ ತೆಗೆದುಕೊಂಡಿದ್ದಾಳೆ ಎಂದು ಸುಶಾಂತ್ ಸಿಂಗ್ ತಂದೆ ಪಾಟ್ನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪಾಟ್ನಾ ಪೊಲೀಸ್ ಎಫ್ ಐ ಆರ್ ಆಧರಿಸಿ ಇಡಿ ಇಲಾಖೆ ರಿಯಾ ಚಕ್ರವರ್ತಿ ಹಾಗು ಇನ್ನಿತರ ಏಂಟು ಜನರ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ನಮೂದಿಸಿದ್ದರು. ಈ ಸಂಬಂಧ ರಿಯಾಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಸಮನ್ಸ್ ಹಿನ್ನೆಲೆ ಶುಕ್ರವಾರ ಮುಂಬೈನ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದ ರಿಯಾ, ಸುಶಾಂತ್ ಜೊತೆಗಿನ ವ್ಯವಹಾರಿಕ ಸಂಬಂಧದ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ. ಅಷ್ಟಕ್ಕೂ, ಇಡಿ ಅಧಿಕಾರಿಗಳ ಮುಂದೆ ರಿಯಾ ಹೇಳಿದ್ದೇನು? ಮುಂದೆ ಓದಿ....

ಫ್ಲ್ಯಾಟ್ ಬಗ್ಗೆ ರಿಯಾ ಸ್ಪಷ್ಟನೆ
ರಿಯಾ ಚಕ್ರವರ್ತಿ ಬಳಿಕ ಕೋಟ್ಯಾಂತರ ಮೌಲ್ಯದ ಆಸ್ತಿಪಾಸ್ತಿ ಇದೆ ಎಂದು ಹೇಳಲಾಗಿದೆ. ಅದರಲ್ಲಿ ಸುಶಾಂತ್ ಹಣದಲ್ಲಿ ಮುಂಬೈನಲ್ಲಿ ಒಂದು ಫ್ಲ್ಯಾಟ್ ಖರೀದಿಸಿದ್ದಾರೆ ಎಂದು ಸುಶಾಂತ್ ತಂದೆ ದೂರಿದ್ದಾರೆ. ಈ ಬಗ್ಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಅದಕ್ಕೆ ಸ್ಪಷ್ಟನೆ ನೀಡಿರುವ ರಿಯಾ ಚಕ್ರವರ್ತಿ, 'ನನ್ನ ಸ್ವಂತ ಆದಾಯದಿಂದ ವ್ಯವಹಾರ ಮಾಡಿದ್ದೇನೆ, ಸುಶಾಂತ್ ಹಣವನ್ನು ನಾನು ಬಳಸಿಲ್ಲ' ಎಂದಿದ್ದಾರೆ. 'ಫ್ಲ್ಯಾಟ್ ಬೆಲೆ 85 ಲಕ್ಷ, 60 ಲಕ್ಷಕ್ಕೆ ಲೋನ್ ಪಡೆಯಲಾಗಿದೆ. ಉಳಿದ 25 ಲಕ್ಷ ತನ್ನ ಸ್ವಂತ ಆದಾಯದಿಂದ ಬಂದಿದೆ' ಎಂದಿದ್ದಾರೆ.

ಎರಡನೇ ಬಾರಿಯ ರಿಯಾ ವಿಚಾರಣೆ ಸಾಧ್ಯತೆ!
'ರಿಯಾ ಚಕ್ರವರ್ತಿ ಹೇಳಿಕೆ ಪಡೆಯಲಾಗಿದೆ. ವಕೀಲ ಪಿಂಕ್ವಿಲ್ಲಾಗೆ. ಐಟಿ ರಿಟರ್ನ್ಸ್ ಸೇರಿದಂತೆ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಪೊಲೀಸ್ ಮತ್ತು ಇಡಿ ತನಿಖೆಗೆ ರಿಯಾ ಯಾವಾಗಲೂ ಸಹಕರಿಸುತ್ತಾರೆ. ಮರೆಮಾಚಲು ಏನೂ ಇಲ್ಲ. ಅಗತ್ಯವಿದ್ದು ಮತ್ತೆ ವಿಚಾರಣೆಗೆ ಕರೆದರೂ ಸಹ ಅವರು ಬರ್ತಾರೆ' ಎಂದು ರಿಯಾ ಚಕ್ರವರ್ತಿ ಪರ ವಕೀಲ ತಿಳಿಸಿದ್ದಾರೆ.

ಶ್ರುತಿ ಮೋದಿಗೂ ಸಮನ್ಸ್
ಸುಶಾಂತ್ ಸಿಂಗ್ ರಜಪೂತ ಜೊತೆ ಕೆಲಸ ಮಾಡಿರುವ ರಿಯಾ ಅವರ ಮ್ಯಾನೇಜರ್ ಶ್ರುತಿ ಮೋದಿಗೂ ಇಡಿ ಸಮನ್ಸ್ ನೀಡಿತ್ತು. ರಿಯಾ ಅವರ ಸಹೋದರ ಶೌವಿಕ್ ಚಕ್ರವರ್ತಿ ವಿರುದ್ಧ ಸಹ ದೂರು ದಾಖಲಾಗಿದೆ. ಶುಕ್ರವಾರ ರಿಯಾ, ಶ್ರುತಿ ಮತ್ತು ಶೋಯಿಕ್ ಅವರ ಹೇಳಿಕೆಗಳನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ತನಿಖೆ ಸಹ ಆರಂಭ!
ಮತ್ತೊಂದೆಡೆ ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಡಿ ಅಧಿಕಾರಿಗಳ ತನಿಖೆಗೆ ಜೊತೆ ಸಿಬಿಐ ತನಿಖೆಗೂ ರಿಯಾ ಚಕ್ರವರ್ತಿ ಸಹಕರಿಸಬೇಕಿದೆ. ಪಾಟ್ನಾ ಪೊಲೀಸರಿಂದ ಕೇಸ್ಗೆ ಸಂಬಂಧಿಸಿದಂತೆ ವಿವರಗಳನ್ನು ಪಡೆದುಕೊಂಡಿರುವ ಸಿಬಿಐ ಅಧಿಕಾರಿಗಳು ರಿಯಾ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಹೆಚ್ಚಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications