ಸುಶಾಂತ್ ಸಿಂಗ್ ಕೇಸ್: ED ವಿಚಾರಣೆಯಲ್ಲಿ ರಿಯಾ ಚಕ್ರವರ್ತಿ ಹೇಳಿದ್ದೇನು?
ಮುಂಬೈ, ಆಗಸ್ಟ್ 8: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲದ ಮುಂದೆ ವಿಚಾರಣೆಗೆ ಹಾಜರಾಗಿದ್ದ ನಟಿ ರಿಯಾ ಚಕ್ರವರ್ತಿ 'ನನ್ನ ಸ್ವಂತ ಆದಾಯದಿಂದ ವ್ಯವಹಾರ ಮಾಡಿದ್ದೇನೆ, ಸುಶಾಂತ್ ಹಣವನ್ನು ನಾನು ಬಳಸಿಲ್ಲ' ಎಂದು ಹೇಳಿಕೆ ನೀಡಿದ್ದಾರೆ.
ಸುಶಾಂತ್ ಸಿಂಗ್ ಖಾತೆಯಿಂದ ಗೆಳತಿ ರಿಯಾ ಚಕ್ರವರ್ತಿ ಸುಮಾರು 15 ಕೋಟಿವರೆಗೂ ಹಣ ತೆಗೆದುಕೊಂಡಿದ್ದಾಳೆ ಎಂದು ಸುಶಾಂತ್ ಸಿಂಗ್ ತಂದೆ ಪಾಟ್ನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪಾಟ್ನಾ ಪೊಲೀಸ್ ಎಫ್ ಐ ಆರ್ ಆಧರಿಸಿ ಇಡಿ ಇಲಾಖೆ ರಿಯಾ ಚಕ್ರವರ್ತಿ ಹಾಗು ಇನ್ನಿತರ ಏಂಟು ಜನರ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ನಮೂದಿಸಿದ್ದರು. ಈ ಸಂಬಂಧ ರಿಯಾಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಸಮನ್ಸ್ ಹಿನ್ನೆಲೆ ಶುಕ್ರವಾರ ಮುಂಬೈನ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದ ರಿಯಾ, ಸುಶಾಂತ್ ಜೊತೆಗಿನ ವ್ಯವಹಾರಿಕ ಸಂಬಂಧದ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ. ಅಷ್ಟಕ್ಕೂ, ಇಡಿ ಅಧಿಕಾರಿಗಳ ಮುಂದೆ ರಿಯಾ ಹೇಳಿದ್ದೇನು? ಮುಂದೆ ಓದಿ....

ಫ್ಲ್ಯಾಟ್ ಬಗ್ಗೆ ರಿಯಾ ಸ್ಪಷ್ಟನೆ
ರಿಯಾ ಚಕ್ರವರ್ತಿ ಬಳಿಕ ಕೋಟ್ಯಾಂತರ ಮೌಲ್ಯದ ಆಸ್ತಿಪಾಸ್ತಿ ಇದೆ ಎಂದು ಹೇಳಲಾಗಿದೆ. ಅದರಲ್ಲಿ ಸುಶಾಂತ್ ಹಣದಲ್ಲಿ ಮುಂಬೈನಲ್ಲಿ ಒಂದು ಫ್ಲ್ಯಾಟ್ ಖರೀದಿಸಿದ್ದಾರೆ ಎಂದು ಸುಶಾಂತ್ ತಂದೆ ದೂರಿದ್ದಾರೆ. ಈ ಬಗ್ಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಅದಕ್ಕೆ ಸ್ಪಷ್ಟನೆ ನೀಡಿರುವ ರಿಯಾ ಚಕ್ರವರ್ತಿ, 'ನನ್ನ ಸ್ವಂತ ಆದಾಯದಿಂದ ವ್ಯವಹಾರ ಮಾಡಿದ್ದೇನೆ, ಸುಶಾಂತ್ ಹಣವನ್ನು ನಾನು ಬಳಸಿಲ್ಲ' ಎಂದಿದ್ದಾರೆ. 'ಫ್ಲ್ಯಾಟ್ ಬೆಲೆ 85 ಲಕ್ಷ, 60 ಲಕ್ಷಕ್ಕೆ ಲೋನ್ ಪಡೆಯಲಾಗಿದೆ. ಉಳಿದ 25 ಲಕ್ಷ ತನ್ನ ಸ್ವಂತ ಆದಾಯದಿಂದ ಬಂದಿದೆ' ಎಂದಿದ್ದಾರೆ.

ಎರಡನೇ ಬಾರಿಯ ರಿಯಾ ವಿಚಾರಣೆ ಸಾಧ್ಯತೆ!
'ರಿಯಾ ಚಕ್ರವರ್ತಿ ಹೇಳಿಕೆ ಪಡೆಯಲಾಗಿದೆ. ವಕೀಲ ಪಿಂಕ್ವಿಲ್ಲಾಗೆ. ಐಟಿ ರಿಟರ್ನ್ಸ್ ಸೇರಿದಂತೆ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಪೊಲೀಸ್ ಮತ್ತು ಇಡಿ ತನಿಖೆಗೆ ರಿಯಾ ಯಾವಾಗಲೂ ಸಹಕರಿಸುತ್ತಾರೆ. ಮರೆಮಾಚಲು ಏನೂ ಇಲ್ಲ. ಅಗತ್ಯವಿದ್ದು ಮತ್ತೆ ವಿಚಾರಣೆಗೆ ಕರೆದರೂ ಸಹ ಅವರು ಬರ್ತಾರೆ' ಎಂದು ರಿಯಾ ಚಕ್ರವರ್ತಿ ಪರ ವಕೀಲ ತಿಳಿಸಿದ್ದಾರೆ.

ಶ್ರುತಿ ಮೋದಿಗೂ ಸಮನ್ಸ್
ಸುಶಾಂತ್ ಸಿಂಗ್ ರಜಪೂತ ಜೊತೆ ಕೆಲಸ ಮಾಡಿರುವ ರಿಯಾ ಅವರ ಮ್ಯಾನೇಜರ್ ಶ್ರುತಿ ಮೋದಿಗೂ ಇಡಿ ಸಮನ್ಸ್ ನೀಡಿತ್ತು. ರಿಯಾ ಅವರ ಸಹೋದರ ಶೌವಿಕ್ ಚಕ್ರವರ್ತಿ ವಿರುದ್ಧ ಸಹ ದೂರು ದಾಖಲಾಗಿದೆ. ಶುಕ್ರವಾರ ರಿಯಾ, ಶ್ರುತಿ ಮತ್ತು ಶೋಯಿಕ್ ಅವರ ಹೇಳಿಕೆಗಳನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ತನಿಖೆ ಸಹ ಆರಂಭ!
ಮತ್ತೊಂದೆಡೆ ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಡಿ ಅಧಿಕಾರಿಗಳ ತನಿಖೆಗೆ ಜೊತೆ ಸಿಬಿಐ ತನಿಖೆಗೂ ರಿಯಾ ಚಕ್ರವರ್ತಿ ಸಹಕರಿಸಬೇಕಿದೆ. ಪಾಟ್ನಾ ಪೊಲೀಸರಿಂದ ಕೇಸ್ಗೆ ಸಂಬಂಧಿಸಿದಂತೆ ವಿವರಗಳನ್ನು ಪಡೆದುಕೊಂಡಿರುವ ಸಿಬಿಐ ಅಧಿಕಾರಿಗಳು ರಿಯಾ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಹೆಚ್ಚಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications