ಭೂಗತ ಪಾತಕಿ ದಾವೂದ್ ಗ್ಯಾಂಗಿನ ಏಜಾಜ್ ಬಂಧನ
ಮುಂಬೈ, ಜನವರಿ 09: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗಿಗೆ ಸೇರಿದ ಮಾಜಿ ಬಂಟ ಏಜಾಜ್ ಲಕ್ಡಾವಾಲನನ್ನು ಪೊಲೀಸರು ಬಂಧಿಸಿದ್ದಾರೆ.
ಛೋಟಾ ರಾಜನ್, ದಾವೂದ್ ಇಬ್ರಾಹಿಂ ಬಂಟನಾಗಿದ್ದ ಏಜಾಜ್ ನಂತರ ಗ್ಯಾಂಗಿನಿಂದ ದೂರ ಉಳಿದಿದ್ದ. ಈತನ ಮೇಲೆ ಸುಮಾರು 25 ಬೆದರಿಕೆ, ಕೊಲೆ ಯತ್ನ, ಗಲಭೆಗೆ ಕುಮ್ಮಕ್ಕು ಮುಂತಾದ ಪ್ರಕರಣಗಳು ದಾಖಲಾಗಿವೆ.
"ಕಳೆದ ಆರು ತಿಂಗಳಿನಿಂದ ಏಜಾಜ್ ಬಂಧನಕ್ಕಾಗಿ ಬಲೆ ಬೀಸಲಾಗಿತ್ತು. ಡಿಸೆಂಬರ್ 28ರಂದು ಆತನ ಮಗಳನ್ನು ಬಂಧಿಸಿದ ಬಳಿಕ ಮಹತ್ವದ ಸುಳಿವು ಸಿಕ್ಕಿತ್ತು. ಬುಧವಾರದಂದು ಪಾಟ್ನಕ್ಕೆ ಬರುತ್ತಿರುವ ಖಚಿತ ಮಾಹಿತಿ ಸಿಕ್ಕ ಬಳಿಕ ಅಲ್ಲಿನ ಪೊಲೀಸರ ನೆರವಿನಿಂದ ಆತನನ್ನು ಬಂಧಿಸಿ ಮುಂಬೈಗೆ ಕರೆ ತರಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂತೋಷ್ ರಸ್ತೋಗಿ ಹೇಳಿದರು.

ದಾವೂದ್, ಛೋಟಾ ರಾಜನ್ ಸಂಪರ್ಕ್ ಕಡಿತಗೊಂಡ ಬಳಿಕ 10 ವರ್ಷಗಳ ಹಿಂದೆ ತನ್ನದೇ ಹೊಸ ಗ್ಯಾಂಗ್ ಕಟ್ಟಿ ಭೂಗತ ಚಟುವಟಿಕೆಗಳಲ್ಲಿ ತೊಡಗಿದ್ದ. ಮಲೇಷಿಯಾ, ಯುನೈಟೆಡ್ ಸ್ಟೇಟ್ಸ್, ನೇಪಾಳ ಮುಂತಾದ ದೇಶಗಳಲ್ಲಿ ಕಳೆದ 10 ವರ್ಷಗಳಲ್ಲಿ ವಾಸವಿದ್ದ. ಈತನ ವಿರುದ್ಧ ಇಂಟರ್ ಪೋಲ್ ನಿಂದ ನೋಟಿಸ್ ಕೂಡಾ ಜಾರಿಗೊಳಿಸಲಾಗಿತ್ತು.
ಕೆನಡಾದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಾಸಿಸುತ್ತಿದ್ದ ಏಜಾಜ್ ನ ಮಗಳು ಸೋನಿಯಾಳನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಆಕೆ ನೀಡಿದ ಸುಳಿವಿನ ಆಧಾರದ ಮೇಲೆ ಏಜಾಜ್ ಬಂಧನವಾಗಿದ್ದು, ಜನವರಿ 21 ರ ತನಕ ಪೊಲೀಸ್ ಕಸ್ಟಡಿಗೆ ಮುಂಬೈ ಕೋರ್ಟ್ ನೀಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications