ಹೃತಿಕ್ ರೋಷನ್ ತಂದೆ ರಾಕೇಶ್ ಗೆ ಗಂಟಲು ಕ್ಯಾನ್ಸರ್ ಶಸ್ತ್ರಚಿಕಿತ್ಸೆ
ಮುಂಬೈ, ಜನವರಿ 8: ಹಿರಿಯ ನಿರ್ಮಾಪಕ- ನಟ ರಾಕೇಶ್ ರೋಷನ್ ಅವರಿಗೆ ಗಂಟಲು ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಸಮಸ್ಯೆ ಆರಂಭಿಕ ಹಂತದಲ್ಲಿದೆ ಎಂದು ನಟ ಹಾಗೂ ರಾಕೇಶ್ ಮಗ ಹೃತಿಕ್ ರೋಷನ್ ಮಂಗಳವಾರ ಹೇಳಿದ್ದಾರೆ. ನನ್ನ ತಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಅವರು ಇನ್ ಸ್ಟಾ ಗ್ರಾಮ್ ನಲ್ಲಿ ತಿಳಿಸಿದ್ದಾರೆ.
ಒಂದು ಫೋಟೋಗಾಗಿ ಅಪ್ಪನನ್ನು ಕೇಳಿದೆ. ನನಗೆ ಗೊತ್ತಿತ್ತು ಶಸ್ತ್ರಚಿಕಿತ್ಸೆ ದಿನವೂ ಅವರು ಜಿಮ್ ತಪ್ಪಿಸಲ್ಲ. ನನಗೆ ಗೊತ್ತಿರುವ ಹಾಗೆ ತುಂಬ ಗಟ್ಟಿ ಮನುಷ್ಯ ಅವರು. ಕೆಲವು ವಾರಗಳ ಹಿಂದೆ ಅವರಿಗೆ ಗಂಟಲು ಕ್ಯಾನ್ಸರ್ ಇರುವುದು ಗೊತ್ತಾಯಿತು. ಅದು ಆರಂಭಿಕ ಹಂತದಲ್ಲಿತ್ತು. ಅವರಿಗೆ ಇಂದು ತುಂಬ ಉತ್ಸಾಹ ಇತ್ತು. ಅವರು ಅದರ ಜತೆ ಕಾದಾಡಲು ಹೊರಟಿದ್ದಾರೆ. ಕುಟುಂಬವಾಗಿ ನಾವು ಅದೃಷ್ಟವಂತರು. ಏಕೆಂದರೆ ನಮಗೆ ಅವರಂಥ ನಾಯಕರಿದ್ದಾರೆ ಎಂದು ಹೃತಿಕ್ ಬರೆದುಕೊಂಡಿದ್ದಾರೆ.

ಅರವತ್ತೊಂಬತ್ತು ವರ್ಷದ ರಾಕೇಶ್ ರೋಷನ್ ಅವರ ಜತೆಗೆ ಜಿಮ್ ನಲ್ಲಿ ನಿಂತಿರುವ ಫೋಟೋವನ್ನು ಹೃತಿಕ್ ಹಾಕಿದ್ದಾರೆ. ಕೆಲವು ವರ್ಷಗಳ ಹಿಂದೆ ರಾಕೇಶ್ ರೋಷನ್ ರ ಮಗಳು ಸುನೈನಾಗೆ ಕೂಡ ಸರ್ವಿಕಲ್ ಕ್ಯಾನ್ಸರ್ ಪತ್ತೆಯಾಗಿತ್ತು. ಆ ನಂತರ ಅವರು ಗುಣಮುಖರಾಗಿದ್ದರು.
View this post on InstagramA post shared by Hrithik Roshan (@hrithikroshan) on
ರಾಕೇಶ್ ರೋಷನ್ ಅವರು ಕಾಮ್ ಚೋರ್ ಹಾಗೂ ಖೂಬ್ ಸೂರತ್ ನಂಥ ಸಿನಿಮಾಗಳಿಂದ ತಮ್ಮ ವೃತ್ತಿ ಬದುಕು ಆರಂಭಿಸಿದರು. ಆ ನಂತರ ನಿರ್ಮಾಣಕ್ಕೆ ಇಳಿದರು. ತಾವೇ ನಿರ್ದೇಶನ ಮಾಡಿದ ಚಿತ್ರಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications