ಬಾಲಿವುಡ್ ನಟ ಸುನಿಲ್ ಶೆಟ್ಟಿ ಮೇಲೆ ಎಫ್ ಐಆರ್
ಉದಯಪುರ, ಮೇ.2: ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಮೇಲೆ ವಂಚನೆ ಕೇಸ್ ಬಿದ್ದಿದೆ. ರಾಜಸ್ಥಾನ ಮೂಲದ ಸಿನಿಮಾ ನಿರ್ಮಾಪಕರೊಬ್ಬರು ಸುನಿಲ್ ಶೆಟ್ಟಿ ವಿರುದ್ಧ ದೂರು ನೀಡಿದ್ದರು. ದೂರು ಪರಿಶೀಲಿಸಿದ ಇಲ್ಲಿನ ಪೊಲೀಸರು ಕೇಸು ದಾಖಲಿಸಿಕೊಂಡು ಶುಕ್ರವಾರ ಎಫ್ ಐಆರ್ ಹಾಕಿದ್ದಾರೆ.
ಸುನಿಲ್ ಶೆಟ್ಟಿ ಅವರು ನನ್ನ ಚಿತ್ರದಲ್ಲಿ ನಟಿಸಲು ಸುಮಾರು 21 ಲಕ್ಷ ರು ಪಡೆದುಕೊಂಡಿದ್ದರು. ಆದರೆ, ಅಡ್ವಾನ್ಸ್ ಪಡೆದುಕೊಂಡ ಮೇಲೆ ನಾಪತ್ತೆಯಾಗಿದ್ದಾರೆ. ನನ್ನ ಹಣವನ್ನು ಹಿಂತಿರುಗಿಸಿಲ್ಲ, ಫೋನ್ ಕರೆ ಸ್ವೀಕರಿಸುತಿಲ್ಲ. ಚಿತ್ರೀಕರಣದ ಬಗ್ಗೆ ಕೇಳಿಲ್ಲ ಎಂದು ನಿರ್ಮಾಪಕ ದೂರಿದ್ದಾರೆ.

ಸುನಿಲ್ ಶೆಟ್ಟಿ ಅವರು ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದರು. ಆದರೆ, ಶೆಟ್ಟಿ ಅವರು ದುಡ್ಡು ವಾಪಸ್ ಮಾಡಲಿಲ್ಲ ಎಂದು ತಿಳಿದು ಬಂದಿದೆ. ಸುನಿಲ್ ಶೆಟ್ಟಿ ಮೇಲೆ ಭಾರತೀಯ ದಂಡ ಸಂಹಿತೆ ಪ್ರಕಾರ ಸೆಕ್ಷನ್ 420(ವಂಚನೆ), 406 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಲಾಗಿದೆ. ಹಣ ಪಾವತಿ ಹಾಗೂ ಇನ್ನಿತರ ವಿವರಗಳನ್ನು ಬ್ಯಾಂಕಿನಿಂದ ಪಡೆಯಲಾಗುತ್ತಿದೆ ಎಂದು ತನಿಖಾಧಿಕಾರಿ ಹೇಳಿದ್ದಾರೆ.
'ಮುಂಬೈ ಕಿಸ್ಕಿ' ಎಂಬ ಹೆಸರಿನಲ್ಲಿ ಚಿತ್ರವೊಂದು ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಮುಂಬೈನಲ್ಲಿ ಸೆಟ್ಟೇರಿತ್ತು. ಈ ಚಿತ್ರದ ನಾಯಕ ಪಾತ್ರ ಮಾಡಲು ಸುನಿಲ್ ಶೆಟ್ಟಿ ಒಪ್ಪಿಕೊಂಡು 70 ಲಕ್ಷ ರು ಸಂಭಾವನೆ ಪಡೆಯಲು ಸಮ್ಮತಿಸಿದ್ದರು. ಚಿತ್ರೀಕರಣ ಆರಂಭಕ್ಕೂ ಮುನ್ನ ಮುಂಗಡ ಹಣವಾಗಿ 21 ಲಕ್ಷ ರು ಪಡೆದುಕೊಂಡಿದ್ದರು ಎಂದು ನಿರ್ಮಾಪಕ ಹೇಮೇಂದ್ರ ಸಿಂಗ್ ವಿವರಿಸಿದ್ದಾರೆ. (ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications