ದೇಶ ಬಿಟ್ಟು ಹೊರಟಿದ್ದ ಮತ್ತೊಬ್ಬ ಸಾಲಗಾರನನ್ನು ತಡೆದ ಅಧಿಕಾರಿಗಳು
ಮುಂಬೈ, ಮೇ 25: ದೇಶ ಬಿಟ್ಟು ಹೊರಡಲು ಅಣಿಯಾಗಿ ವಿಮಾನ ಏರಲು ಬಂದಿದ್ದ ಜೆಟ್ ಏರ್ವೇಸ್ ಸಂಸ್ಥಾಪಕ ಮತ್ತು ಆತನ ಪತ್ನಿಯನ್ನು ವಿಮಾನ ನಿಲ್ದಾಣ ಅಧಿಕಾರಿಗಳು ತಡೆದಿದ್ದಾರೆ.
ಜೆಟ್ ಏರ್ವೇಸ್ನ ಮಾಜಿ ಚೇರ್ಮನ್ ನರೇಶ್ ಘೋಯಲ್ ತನ್ನ ಪತ್ನಿಯೊಂದಿಗೆ ವಿದೇಶಕ್ಕೆ ಹಾರಲೆಂದು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಆದರೆ ಅವರನ್ನು ವಿಮಾನ ನಿಲ್ದಾಣ ಅಧಿಕಾರಿಗಳು ತಡೆದಿದ್ದಾರೆ.
ಜೆಟ್ ಏರ್ವೇಸ್ ಸಂಸ್ಥಾಪಕರಾದ ನರೇಶ್ ಘೋಯಲ್ ಅವರ ವಿರುದ್ಧ ಲುಕ್ಔಟ್ ನೋಟೀಸ್ ಜಾರಿಯಾಗಿದ್ದ ಕಾರಣ ಅವರನ್ನು ವಿದೇಶಕ್ಕೆ ಪ್ರಯಾಣಿಸದಂತೆ ತಡೆಯಲಾಗಿದೆ.

ಇತ್ತೀಚೆಗಷ್ಟೆ ನರೇಶ್ ಘೋಯಲ್ ಅವರು ಜೆಟ್ ಏರ್ವೇಸ್ ನ ನಿರ್ದೇಶಕ ಮಂಡಳಿಗೆ ರಾಜೀನಾಮೆ ನೀಡಿ ಹೊರಬಂದಿದ್ದರು. ಆದರೆ ಜೆಟ್ ಏರ್ವೇಸ್ ಮೇಲೆ ಭಾರಿ ಪ್ರಮಾಣದ ಸಾಲವಿದ್ದು, ಅದು ತನ್ನ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಜೆಟ್ ಏರ್ವೇಸ್ ಮೇಲೆ 1.2 ಬಿಲಿಯನ್ ಡಾಲರ್ ಸಾಲದ ಹೊರೆ ಇದೆ. ವಿಮಾನ ಸಂಸ್ಥೆಯ ನೌಕರರಿಗೆ ಸಂಬಳ ನೀಡಲಾಗಿಲ್ಲ, ಏಪ್ರಿಲ್ 17 ರಂದು ಜೆಟ್ ಏರ್ವೇಸ್ ತನ್ನ ಸೇವೆಯನ್ನು ಸ್ಥಗಿತಗೊಳಿಸಿತು. ಅಂದಿನಿಂದಲೂ ನೌಕರರು ಬೀದಿಗೆ ಬಿದ್ದಿದ್ದಾರೆ.
ಈಗಾಗಲೇ ವಿಜಯ್ ಮಲ್ಯ, ಮೆಹೂಲ್ ಚೋಕ್ಸಿ, ನೀರವ್ ಮೋದಿ ಅವರುಗಳು ಸಾಲಮಾಡಿ ದೇಶಬಿಟ್ಟು ಪರಾರಿ ಆಗಿದ್ದಾರೆ. ನರೇಶ್ ಘೋಯಲ್ ಸಹ ಇದೇ ಹಾದಿಯಲ್ಲಿ ಯತ್ನ ಮಾಡಿದ್ದರು. ಆದರೆ ಅಧಿಕಾರಿಗಳು ಅವರನ್ನು ತಡೆದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications