ಬಿಲ್ಡರ್ ಕೊಲೆ: ಅಬು ಸಲೇಂ ದೋಷಿ : ಟಾಡಾ ಕೋರ್ಟ್
ನವದೆಹಲಿ, ಫೆ.16: ಮುಂಬೈ ಮೂಲದ ಬಿಲ್ಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಭೂಗತ ಪಾತಕಿ , ಗ್ಯಾಂಗ್ಸ್ಟರ್ ಅಬು ಸಲೇಂ ದೋಷಿ ಎಂದು ಟಾಡಾ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಿದೆ.
1995ರ ಮಾ.7ರಂದು ಮುಂಬೈ ಮೂಲದ ಬಿಲ್ಡರ್ ಪ್ರದೀಪ್ ಜೈನ್ ಎಂಬುವವರನ್ನು ಕೊಲೆ ಮಾಡಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ ಟಾಡಾ ನ್ಯಾಯಾಲಯ ಇಂದು ಅಬು ಸಲೇಂ ಹಂತಕ ಎಂದು ತೀರ್ಮಾನಿಸಿ ಮಹತ್ವದ ತೀರ್ಪು ನೀಡಿದೆ. ವಾದಿ -ಪ್ರತಿವಾದಿ ನ್ಯಾಯವಾದಿಗಳ ವಾದವನ್ನು ಆಲಿಸಿದ ಟಾಡಾ ಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರು ಅಬು ಸಲೇಂ ಅಪರಾಧಿ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

1993 ರ ಮುಂಬೈ ಸರಣಿ ಬಾಂಬ್ ಸ್ಫೋಟ ಆರೋಪಿ ಅಬು ಸೇಲಂನನ್ನು ಪೋರ್ಚುಗಲ್ ನಿಂದ 2005ರ ನವೆಂಬರ್ 11ರಂದು ಭಾರತಕ್ಕೆ ಗಡಿಪಾರು ಮಾಡಲಾಗಿತ್ತು. ಗಡಿಪಾರಾದ ನಂತರ ತಪ್ಪಿತಸ್ಥ ಎಂದು ಸಾಬೀತಾಗಿರುವ ಮೊದಲ ಪ್ರಕರಣ ಇದಾಗಿದೆ.
ಅಬು ಸಲೇಂ ಜೊತೆಗೆ ವೀರೇಂದ್ರ ಜಂಬ್ ಮತ್ತು ಮೆಹಂದಿ ಹಸ್ಸನ್ ಇನ್ನಿಬ್ಬರು ತಪ್ಪಿತಸ್ಥರು ಎಂದು ಕೋರ್ಟ್ ಹೇಳಿದೆ. ಮೂವರು ದೋಷಿಗಳ ಮೇಲೆ ಐಪಿಸಿ ಸೆಕ್ಷನ್ 302, 102 ಬಿ ಅಡಿ ಪ್ರಕರಣ ದಾಖಲಾಗಿತ್ತು ಎಂದು ವಿಶೇಷ ಪಬ್ಲಿಕ್ ಪ್ರಾಸೆಕ್ಯೂಟರ್ ಉಜ್ವಲ್ ನಿಕಂ ತಿಳಿಸಿದ್ದಾರೆ.
Today Abu Salem has been declared terrorist for committing various terrorist attacks,It's a historical judgment: Ujjwal Nikam
— ANI (@ANI_news) February 16, 2015 ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಸಲೇಂ 2002ರಲ್ಲಿ ಪ್ರೇಯಸಿ ಮೋನಿಕಾ ಬೇಡಿ ಜತೆ ಲಿಸ್ಬನ್ನಲ್ಲಿ ಸೆರೆಸಿಕ್ಕಿದ್ದ. ಮೂರು ವರ್ಷಗಳ ನಂತರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಭಾರತಕ್ಕೆ ಪೋರ್ಚುಗಲ್ ದೇಶದಿಂದ ಹಸ್ತಾಂತರಗೊಂಡಿದ್ದ.
ಹಸ್ತಾಂತರದ ವೇಳೆ ಭಾರತ, ಅಬು ಸಲೇಂಗೆ ಮರಣದಂಡನೆ ಅಥವಾ 25 ವರ್ಷಕ್ಕಿಂತ ಹೆಚ್ಚಿನ ಸೆರೆವಾಸ ಶಿಕ್ಷೆ ವಿಧಿಸುವುದಿಲ್ಲ ಎಂದು ಪೋರ್ಚುಗಲ್ ಗೆ ಭರವಸೆ ನೀಡಲಾಗಿತ್ತು. ಭಾರತದಲ್ಲಿ ತನ್ನ ಮೇಲಿನ ಆರೋಪಗಳ ವಿಚಾರಣೆ ರದ್ದುಗೊಳಿಸುವಂತೆ ಅಬು ಸಲೇಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.
ನಂತರ, ನಕಲಿ ಪಾಸ್ ಫೋರ್ಟ್ ಬಳಕೆ ಆರೋಪದಡಿಯಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ 2013ರಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications