ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಹತ್ಯೆ ಪ್ರಕರಣ: ಸನಾತನ ಸಂಸ್ಥೆಗೆ ನಿಷೇಧ?

|
Google Oneindia Kannada News

ಮುಂಬೈ, ಆಗಸ್ಟ್ 28: 'ಅಗತ್ಯ ಬಂದರೆ ಸನಾತನ ಸಂಸ್ಥೆಯ ಮೇಲೆ ನಿಷೇಧ ಹೇರಲಾಗುವುದು' ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮತ್ತು ಡಾ.ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಗಳ ಆರೋಪಿಗಳು ಸನಾತನ ಸಂಸ್ಥೆ ಎಂಬ ಬಲಪಂಥೀಯಗ ಸಂಘಟನೆಗೆ ಸೇರಿದವರು ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಈ ಸಂಸ್ಥೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ.ಅಕಸ್ಮಾತ್ ಆರೋಪ ಸಾಬೀತಾದಲ್ಲಿ ಸನಾತನ ಸಂಸ್ಥೆಯ ಮೇಲೆ ನಿಷೇಧ ಹೇರುವುದು ಗ್ಯಾರಂಟಿ ಎನ್ನಿಸಿದೆ.

ಗೌರಿ ಲಂಕೇಶ್ ಹತ್ಯೆ: ಪುಣೆಯಲ್ಲಿ ಮತ್ತೊಂದು ಬೈಕ್ ಪತ್ತೆ ಗೌರಿ ಲಂಕೇಶ್ ಹತ್ಯೆ: ಪುಣೆಯಲ್ಲಿ ಮತ್ತೊಂದು ಬೈಕ್ ಪತ್ತೆ

ಅಗತ್ಯ ಬಂದಲ್ಲಿ ಈ ಸಂಘಟನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ರಾಮದಾಸ್ ಅಠಾವಳೆ ಹೇಳಿದ್ದಾರೆ.

Gauri Lankesh murder: Ban Sanatan Sanstha if needed: Ramdas Athawale

ಗೌರಿ ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ಪರುಶುರಾಮ ವಾಘ್ಮೋರೆ, ಅಮೋಲ್ ಕಾಳೆ, ಅಮಿತ್ ದೇಗ್ವೇಕರ್, ಗಣೇಶ್ ಮಿಸ್ಕಿನ್, ಅಮಿತ್ ಬದ್ದಿ, ಮನೋಹರ್ ಯಡವೆ, ಕೆ.ಟಿ. ನವೀನ್ ಕುಮಾರ್, ಮೋಹನ್ ನಾಯಕ್ ಸೇರಿದಂತೆ 12 ಜನರನ್ನು ಎಸ್ ಐಟಿ(ವಿಶೇಷ ತನಿಖಾ ದಳ) ತಂಡ ಬಂಧಿಸಿದೆ.

English summary
Union Minister of State (MoS) for Social Justice and Empowerment Ramdas Athawale on Monday said that "if needed" Hindu right-wing group Sanatan Sanstha should be "completely banned."
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X