ಗೌರಿ ಹತ್ಯೆ ಪ್ರಕರಣದಲ್ಲಿ ಆರೆಸ್ಸೆಸ್ ವಿರುದ್ಧ ಆರೋಪ: ರಾಹುಲ್ ಗಾಂಧಿಗೆ ಸಮನ್ಸ್
ಮುಂಬೈ, ಫೆಬ್ರವರಿ 22: ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರಿಗೆ ಮುಂಬೈ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬಿಜೆಪಿ-ಆರೆಸ್ಸೆಸ್ ಸಿದ್ಧಾಂತಕ್ಕೂ ಗೌರಿ ಲಂಕೇಶ್ ಅವರ ಹತ್ಯೆಗೂ ನಂಟು ಬೆಸೆದಿದ್ದ ಕಾರಣಕ್ಕೆ ಆರೆಸ್ಸೆಸ್ ಕಾರ್ಯಕರ್ತ ಧ್ರುತಿಮಾನ್ ಜೋಶಿ ಎಂಬುವವರು 2017ರಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಸೀತಾರಾಮ್ ಯಚೂರಿ ಅವರ ವಿರುದ್ಧ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಫೆ. 18ರಂದು ಮ್ಯಾಜಿಸ್ಟ್ರೇಟ್ ಪಿ.ಕೆ. ದೇಶಪಾಂಡೆ ಅವರು, ರಾಹುಲ್ ಗಾಂಧಿ ಮತ್ತು ಯಚೂರಿ ಅವರ ವಿರುದ್ಧ ಸಮನ್ಸ್ ಜಾರಿಗೆ ಆದೇಶಿಸಿದ್ದರು.
A Mumbai court has issued defamation process against Rahul Gandhi & Sitaram Yechury for making allegations against RSS over Gauri Lankesh murder. Defamation case was filed by one RSS worker. Next date of hearing is 25th March, the Court has asked them appear before it in person.
— ANI (@ANI) 22 February 2019
ಆದರೆ, ಆಗಿನ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಿಪಿಐ (ಎಂ) ವಿರುದ್ಧದ ದೂರನ್ನು ಕೋರ್ಟ್ ಕೈಬಿಟ್ಟಿದೆ. ವ್ಯಕ್ತಿಗತವಾಗಿ ನೀಡಿದ ಹೇಳಿಕೆಗೆ ಪಕ್ಷವನ್ನು ಹೊಣೆಗಾರನನ್ನಾಗಿ ಮಾಡಲಾಗುವುದಿಲ್ಲ ಎಂದು ಕೋರ್ಟ್ ಹೇಳಿತ್ತು. ಮುಂದಿನ ವಿಚಾರಣೆಯನ್ನು ಮಾರ್ಚ್ 25ಕ್ಕೆ ನಿಗದಿಪಡಿಸಲಾಗಿದೆ.
Anybody who speaks against the RSS/BJP is attacked &even killed. They want to impose only one ideology which is against the nature of India
— Rahul Gandhi (@RahulGandhi) 6 September 2017
ಗೌರಿ ಲಂಕೇಶ್ ಅವರ ಹತ್ಯೆಯಾದ 24 ಗಂಟೆಯ ಒಳಗೇ ರಾಹುಲ್ ಗಾಂಧಿ, 'ಬಿಜೆಪಿ ಮತ್ತು ಆರೆಸ್ಸೆಸ್ನ ಸಿದ್ಧಾಂತಗಳಿಗೆ ವಿರುದ್ಧವಾಗಿ ಮಾತನಾಡಿದವರ ಮೇಲೆ ಒತ್ತಡ ಹೇರಲಾಗುತ್ತದೆ, ಹೊಡೆಯಲಾಗುತ್ತದೆ, ದಾಳಿ ಮಾಡಲಾಗುತ್ತದೆ ಮತ್ತು ಹತ್ಯೆಯನ್ನೂ ಮಾಡಲಾಗುತ್ತದೆ' ಎಂದು ಹೇಳಿದ್ದರು ಎಂದು ಜೋಶಿ ಆರೋಪಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆಗೆ ಆರೆಸ್ಸೆಸ್ ಸಿದ್ಧಾಂತವೇ ಕಾರಣ ಎಂದು ಯಚೂರಿ ಕೂಡ ಆರೋಪಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications