Breaking;ಹನುಮಾನ್ ಚಾಲೀಸಾ ವಿವಾದ; ಮೌನ ಮುರಿದ ಸಿಎಂ!
ಮುಂಬೈ, ಏಪ್ರಿಲ್ 26; ಮಹಾರಾಷ್ಟ್ರದಲ್ಲಿ ಹನುಮಾನ್ ಚಾಲೀಸಾ ವಿವಾದ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಮೊದಲ ಬಾರಿಗೆ ಈ ವಿವಾದದ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮೌನ ಮುರಿದಿದ್ದಾರೆ.
ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ, ಆಕೆಯ ಪತಿ ರಾಣಾ ಕೌರ್ ಬಂಧನದ ಬಳಿಕ ರಾಜ್ಯದಲ್ಲಿ ಹನುಮಾನ್ ಚಾಲೀಸಾ ವಿವಾದ ತಾರಕ್ಕಕ್ಕೇರಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಟೀಕೆಗಳನ್ನು ಮಾಡುತ್ತಿದ್ದಾರೆ.
ವಿವಾದದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, "ದಾದಗಿರಿಗೆ ಹೇಗೆ ತಿರುಗೇಟು ನೀಡಬೇಕು ಎಂದು ನಮಗೆ ತಿಳಿದಿದೆ" ಎಂದು ಹೇಳುವ ಮೂಲಕ ಮತ್ತೆ ಚರ್ಚೆಯ ಕಾವನ್ನು ಹೆಚ್ಚಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, "ಅವರು (ನವನೀತ್ ಕೌರ್ ರಾಣಾ, ರಾಣಾ ಕೌರ್) ದಾದಾಗಿರಿ ಮಾಡಿದರೆ ಹೇಗೆ ತಿರುಗೇಟು ನೀಡಬೇಕು ನೀಡಬೇಕು ಎಂಬುದು ತಿಳಿದಿದೆ" ಎಂದರು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿದ್ದ ನವನೀತ್ ಕೌರ್ ರಾಣಾ, ರಾಣಾ ಕೌರ್ ಬಂಧನವಾಗಿದೆ. ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ದಂಪತಿಗಳು ಕೋರಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.
ಹನುಮಾನ್ ಚಾಲೀಸಾ ವಿವಾದ ನಿರ್ವಹಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಿದೆ. ನವನೀತ್ ಕೌರ್ ರಾಣಾ, ರಾಣಾ ಕೌರ್ ದಂಪತಿ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಂಗಳವಾರ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications