ಸ್ವಯಂ ಘೋಷಿತ ದೇವಮಾತೆ ರಾಧೇ ಮಾಗೆ ರಿಲೀಫ್
ಮುಂಬೈ, ಅ. 08: ಸ್ವಯಂ ಘೋಷಿತ ದೇವಮಾತೆ ರಾಧೇ ಮಾ ಬಂಧನದ ಭೀತಿಯಿಂದ ಪಾರಾಗಿದ್ದಾರೆ. ಬಾಂಬೆ ಹೈಕೋರ್ಟ್ ಗುರುವಾರ ದೇವಮಾತೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜಸ್ಟೀಸ್ ರೇವತಿ ಮೋಹಿತೆ ದೇರೆ ಅವರು ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ರಾಧೇ ಮಾ ಅಲಿಯಾಸ್ ಸುಖ್ವಿಂದರ್ ಕೌರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಇದಕ್ಕೂ ಮುನ್ನ ಇದೇ ಕೋರ್ಟಿನಿಂದ ರಾಧೇ ಮಾ ಅವರು ಮಧ್ಯಂತರ ಜಾಮೀನು ಪಡೆದುಕೊಂದಿದ್ದರು.[ರಾಧೇ ಮಾಗಾಗಿ ಸ್ವಾಮೀಜಿ- ಸಾಧ್ವಿ ಬಿಗ್ ಫೈಟ್]
ರಾಧೇ ಮಾ ವರದಕ್ಷಿಣೆ ಕಿರುಕುಳ, ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದರು. ಸೆಷನ್ಸ್ ಕೋರ್ಟಿನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆಗಸ್ಟ್ 5ರಂದು 32 ವರ್ಷ ವಯಸ್ಸಿನ ಮಹಿಳೆಯೊಬ್ಬರು ರಾಧೇ ಮಾ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಬೊರಿವಿಲಿ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣ ಬಂದಿತ್ತು. ಸಿಆರ್ ಪಿಸಿ ಸೆಕ್ಷನ್ 156(3) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.
ರಾಧೇ ಮಾ ಅವರು ನನ್ನ ಪತಿ, ಅತ್ತೆ, ಮಾವ ಅವರನ್ನು ನಿಯಂತ್ರಿಸುತ್ತಿದ್ದಾರೆ, ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಇವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ, ಮಾನಸಿಕ ಹಿಂಸೆ ನೀಡಿದ್ದಾರೆ, ವರದಕ್ಷಿಣೆ ತರುವಂತೆ ತವರಿಗೆ ಅಟ್ಟಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದರು.
ಅದರೆ, ಕುಟುಂಬ ಕಲಹವನ್ನು ಕೌಟುಂಬಿಕ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳದೆ, ರಾಧೇ ಮಾ ಅವರ ಮಾನ ಕಳೆಯುವ ದುರುದ್ದೇಶದಿಂದ ಅವರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ರಾಧೇ ಮಾ ಪರ ವಕೀಲ ಅಬದ್ ಪೊಂಡಾ ವಾದಿಸಿದರು. ರಾಧೇ ಮಾ ವಿರುದ್ಧ ಯಾವುದೇ ನೇರ ಆರೋಪ ಹಾಗೂ ಅದಕ್ಕೆ ತಕ್ಕ ಸಾಕ್ಷಿ ಲಭ್ಯವಿಲ್ಲದ ಕಾರಣ ಜಾಮೀನು ಮಂಜೂರಾಗಿದೆ. (ಒನ್ ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications