'ಇಎಂಐ ಕಟ್ಟಲು ಹಣ ಬೇಕಿತ್ತು, ಕೊಲೆ ಮಾಡಿದೆ' : ಕ್ಯಾಬ್ ಚಾಲಕ
ನವದೆಹಲಿ, ಸೆಪ್ಟೆಂಬರ್ 11: ಎಚ್ ಡಿ ಎಫ್ ಸಿ ಬ್ಯಾಂಕ್ ಉಪಾಧ್ಯಕ್ಷ ಸಿದ್ದಾರ್ಥ್ ಸಾಂಘ್ವಿ ಕೊಲೆ ಕೇಸಿನಲ್ಲಿ ಬಂಧಿತನಾಗಿರುವ ಕ್ಯಾಬ್ ಚಾಲಕ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ವಾಹನ ಸಾಲದ ಕಂತು ಕಟ್ಟಲು ಹಣ ಸಾಲುತ್ತಿರಲಿಲ್ಲ, ಹಾಗಾಗಿ, ಅವರನ್ನು ಕೊಲೆ ಮಾಡಿದೆ ಎಂದಿದ್ದಾನೆ.
ಈ ನಡುವೆ ಎಚ್ಡಿಎಫ್ಸಿ ಬ್ಯಾಂಕ್ ಉಪಾಧ್ಯಕ್ಷ ಸಿದ್ಧಾರ್ಥ್ ಸಾಂಘ್ವಿ ಅವರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅವರ ಕುಟುಂಬಸ್ಥರು, ಆಪ್ತರು, ಪ್ರತಿಭಟನೆ ನಡೆಸಿದ್ದಾರೆ.
ಸಿದ್ದಾರ್ಥ್ ಅವರನ್ನು ಕೊಲೆಗೈದಿರುವ ವ್ಯಕ್ತಿಯನ್ನು 20 ವರ್ಷ ವಯಸ್ಸಿನ ಸರ್ಫರಾಜ್ ಶೇಖ್ ಎಂದು ಗುರುತಿಸಲಾಗಿದೆ. ಮೋಟರ್ ಬೈಕ್ ಗಾಗಿ ಸಾಲ ಮಾಡಿದ್ದ. ಸಾಲದ ಇಎಮ್ಐ ಪಾವತಿ ಕಟ್ಟಲು ಹಣ ಸಿಗದೆ ಪರದಾಡುತ್ತಿದ್ದ. ಹಣಕ್ಕಾಗಿ ನಡೆದ ದರೋಡೆ ಪ್ರಯತ್ನ ನಡೆಸಿದ್ದ, ಈ ಸಂದರ್ಭದಲ್ಲಿ 39 ವರ್ಷದ ಸಾಂಘ್ವಿ ಅವರನ್ನು ಕಮಲ್ ಮಿಲ್ ಕಾಂಪೌಂಡ್ನ ಪಾರ್ಕಿಂಗ್ ಸ್ಥಳದಲ್ಲಿ ಸೆಪ್ಟೆಂಬರ್ 5ರಂದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಸಿದ್ದಾರ್ಥ್ ಅವರ ಘಟನೆ ನಡೆದ ಸ್ಥಳದಿಂದ 45 ಕಿ.ಮೀ . ದೂರದ ಕಲ್ಯಾಣ್ ಬಳಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿತ್ತು. ಸದ್ಯ ಆರೋಪಿಯನ್ನು ಸೆಪ್ಟೆಂಬರ್ 19ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಸಾಂಘ್ವಿ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆದರೆ, ಸಾಂಘ್ವಿ ಜೋರಾಗಿ ಮಾತನಾಡಿ, ಸಹಾಯಕ್ಕಾಗಿ ಕೂಗಿದ್ದಾರೆ ಗಾಬರಿಗೊಂಡ ಶೇಖ್ ತಕ್ಷಣವೇ ಸಾಂಘ್ವಿ ಅವರ ಕುತ್ತಿಗೆಯನ್ನು ಸೀಳಿದ್ದಾನೆ. ನಂತರ ಹಲವಾರು ಬಾರಿ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾನೆ. ನಂತರ ಮೃತದೇಹವನ್ನು ಕಾರಿನ ಹಿಂಬದಿ ಸೀಟಿನ ಕೆಳಗೆ ಹಾಕಿದ್ದಾನೆ. ನವಿ ಮುಂಬೈ ಬಳಿ ಬಂದಿದ್ದಾನೆ, ಕಲ್ಯಾಣ್ ಬಳಿ, ಸಾಂಘ್ವಿ ದೇಹವನ್ನು ಎಸೆದು, ಕಾರನ್ನು ಅಲ್ಲಿಯೇ ಬಿಟ್ಟು, ಸಾಂಘ್ವಿ ಫೋನ್ ತೆಗೆದುಕೊಂಡು ಪರಾರಿಯಾಗಿದ್ದಾನೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications