ಮಹಾಮಳೆ: ಮುಂಬೈ ವಿಮಾನ ನಿಲ್ದಾಣ ಬಂದ್; ಇತರ ಬೆಳವಣಿಗೆ
ಮುಂಬೈ ಮಹಾಮಳೆಗೆ ಛತ್ರಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಟುವಟಿಕೆ ಸ್ಥಗಿತ. ಮಳೆಯಿಂದಾಗಿ, ನಿಲ್ದಾಣದ ಎರಡೂ ರನ್ ವೇ ಗಳಲ್ಲಿ ನೀರು ತುಂಬಿದ್ದರಿಂದ ವಿಮಾನ ಸಂಚಾರ ಇಲ್ಲ.
ಮುಂಬೈ, ಸೆಪ್ಟೆಂಬರ್ 20: ಶಾಲಾ ಕಾಲೇಜುಗಳು ಬಂದ್. ಟ್ರಾಫಿಕ್ ಗಣನೀಯ ಮಟ್ಟದಲ್ಲಿ ಕುಸಿತ. ಜನ ಜೀವನ ಅಸ್ತವ್ಯಸ್ತ. ಬಾಗಿಲು ಮುಚ್ಚಿದ ಅಂಗಡಿ ಮುಂಗಟ್ಟುಗಳು..... ಇದೆಲ್ಲವೂ ಮುಂಬೈನಲ್ಲಿಅಗಾಧವಾಗಿ ಸುರಿಯುತ್ತಿರುವ ಮಳೆ ಉಂಟು ಮಾಡಿರುವ ತಲ್ಲಣ.
ಇದಕ್ಕೆ ಮತ್ತಷ್ಟು ಸೇರ್ಪಡೆ ಎಂಬಂತೆ, ಅತಿಯಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ನಿಲ್ದಾಣದ ಎರಡೂ ರನ್ ವೇಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ರನ್ ವೇಗಳಲ್ಲಿ ಹೇರಳವಾಗಿ ನೀರು ನಿಂತಿರುವುದರಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ ಬರಬೇಕಿದ್ದ ವಿಮಾನಗಳನ್ನು ಗೋವಾ, ಬೆಂಗಳೂರು, ದೆಹಲಿ ಹಾಗೂ ಹೈದರಾಬಾದ್ ಗೆ ತೆರಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ (ಸೆ. 19) ರಾತ್ರಿ, ಸ್ಪೈಸ್ ಜೆಟ್ ವಿಮಾನ ಸಂಸ್ಥೆಗೆ ಸೇರಿದ ವಿಮಾನವೊಂದು ಮಳೆ ಸುರಿಯುತ್ತಿದ್ದ ವೇಳೆಯೇ ರನ್ ವೇ ಮೇಲೆ ಬಂದಿಳಿದಾಗ, ಅದು ನಿಯಂತ್ರಣ ತಪ್ಪಿ ರನ್ ವೇಯಿಂದ ಹೊರಗೆ ಹೋಗಿ ಮಣ್ಣಿನ ನೆಲದಲ್ಲಿ ನಿಂತಿದ್ದು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ದಿಗ್ಭ್ರಾಂತರನ್ನಾಗಿಸಿತು. ಹೀಗಾಗಿಯೇ, ರನ್ ವೇಗಳನ್ನು ಉಪಯೋಗಿಸದಿರಲು ನಿರ್ಧರಿಸಲಾಗಿದೆ.
ಏತನ್ಮಧ್ಯೆ, ಮುಂಬೈನಲ್ಲಿ ಮುಂದಿನ 24 ಗಂಟೆವರೆಗೂ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚಿಸಿದ್ದು, ಇದು ಜನರ ಜೀವನನ್ನು ಮತ್ತಷ್ಟು ಅಸ್ತವ್ಯಸ್ತಗೊಳಿಸಲಿದೆ ಎಂದು ಅಂದಾಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ರಕ್ಷಣೆಗೆ ಆದ್ಯತೆ ಕೊಟ್ಟುಕೊಳ್ಳಬೇಕೆಂದು ಮುಂಬೈ ಪೊಲೀಸರು ಮನವಿ ಮಾಡಿದ್ದಾರೆ. ಹೇರಳ ಮಳೆಯಿಂದಾಗಿ, ಬುಧವಾರ (ಸೆ. 2) ಮಧ್ಯಾಹ್ನ 12:03ಕ್ಕೆ ಹಾಗೂ ಸಂಜೆ 6:04 ಸುಮಾರಿಗೆ ಮೇಘಸ್ಫೋಟದಂಥ ಮಳೆ ಬರುವ ನಿರೀಕ್ಷೆಯಿದ್ದು ಈ ಬಗ್ಗೆ ಎಚ್ಚರದಿಂದಿರಲು ಮನವಿ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications