ಮುಂಬೈ ಮಹಾಮಳೆ: ರೈಲು ಬಂದ್, ಕರೆಂಟ್ ಇಲ್ಲ
ಮುಂಬೈ, ಜೂ, 19: ಭಾರೀ ಮಳೆ ಮುಂಬೈನಲ್ಲಿ ಎರಡು ಜೀವಗಳನ್ನು ಬಲಿ ತೆಗೆದುಕೊಂಡಿದ್ದು ಸಾವಿನ ಸರಣಿಯ ಪೂರ್ಣ ಲೆಕ್ಕ ಇಲ್ಲಿಯವರೆಗೆ ಸಿಕ್ಕಿಲ್ಲ. ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಶುಕ್ರವಾರ ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರವಾರ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ ಪರಿಣಾಮ ರೈಲು ನಿಲ್ದಾಣಗಳಲ್ಲಿ ನೀರು ತುಂಬಿಕೊಂಡಿದ್ದರೆ, ರಸ್ತೆ, ಚರಂಡಿ ನೀರೆಲ್ಲಾ ಹರಿದು ಪ್ರವಾಹ ಸ್ಥಿತಿ ಉಂಟಾಗಿದೆ. ಶುಕ್ರವಾರ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.[ಬೆಂಗಳೂರು ಮಳೆ ಭೀಕರ ಚಿತ್ರಗಳು]
ಮುಂಗಾರು ಮಾರುತಗಳು ಸಮುದ್ರ ತೀರದ ಭಾಗದಲ್ಲಿ ಆರ್ಭಟಿಸಲು ಆರಂಭಿಸಿವೆ. ನವದೆಹಲಿಯಲ್ಲಿ ಒಮ್ಮೆ ಗುಡುಗಿದ್ದ ವರುಣ ಮಾಯವಾಗಿದ್ದ. ದೇಶದ ಎಲ್ಲೆಡೆ ಏಕರೂಪದ ಮಳೆಯಾಗುತ್ತಿಲ್ಲ. ಮುಂಬೈ ಸೇರಿದಂತೆ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆಯ ಆವಾಂತರ ನೋಡಿ

ರೈಲು ಸಂಚಾರ ಬಂದ್
ರೈಲು ಹಳಿಗಳು ನೀರಿನಿಂದ ಸಂಪೂರ್ಣ ಮುಳುಗಿ ಹೋಗಿದ್ದು ಛತ್ರಪತಿ ಶಿವಾಜಿ ಟರ್ಮಿನಸ್(ಸಿಎಸ್ಟಿ) ಮತ್ತು ಕುರ್ಲಾ, ಸೆಂಟ್ರಲ್ ಪ್ರದೇಶದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಮುಂಬೈ ನಿವಾಸಿಗಳ ಜೀವನಾಡಿಯಾಗಿರುವ ಲೋಕಲ್ ರೈಲಿನಲ್ಲಿ ದಿನಂಪ್ರತಿ 70ರಿಂದ 80 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಆದರೆ ಮಹಾಮಳೆ ದೈನಂದಿನ ಕೆಲಸಕ್ಕೆ ಅಡ್ಡಿ ಉಂಟುಮಾಡಿದೆ.
|
ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್
ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಗುರುವಾರ ರಾತ್ರಿಯಿಂದ #MumbaiRains ಟ್ರೆಂಡಿಂಗ್ ನಲ್ಲಿ ಇದ್ದು ನಾಗರಿಕರು ಮಳೆಯ ಆವಾಂತರಗಳ ಫೋಟೋವನ್ನು ಪ್ರಕಟಿಸುತ್ತ ತಮ್ಮ ಅನುಭವ ಬರೆದುಕೊಳ್ಳುತ್ತಿದ್ದಾರೆ.

ರೈಲ್ವೆ ಇಲಾಖೆ ಎಚ್ಚರಿಕೆ
ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ನಿಮಗೆ ತುಂಬಾ ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳಿ ಎಂದು ರೈಲ್ವೆ ಇಲಾಖೆ ಪ್ರಯಾಣಿಕರಲ್ಲಿ ಮನವಿ ಮಾಡಿಕೊಂಡಿದೆ.

ಮೊಬೈಲ್ ನೆಟ್ ವರ್ಕ್ ಇಲ್ಲ
ಮುಂಬೈ ಮಹಾನಗರದ ಎಲ್ಲ ಕಡೆ ಮೊಬೈಲ್ ಟವರ್ ಗಳು ಧರೆಗುರುಳಿದೆ. ವಿದ್ಯುತ್ ಕೂಡಾ ಮಾಯವಾಗಿದ್ದು ಶುಕ್ರವಾರವೂ ಮಳೆ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವುದರಲ್ಲಿ ಸಂಶಯವಿಲ್ಲ.
|
ಶಾಲೆ ಬಂದ್, ಪರೀಕ್ಷೆ ಮುಂದಕ್ಕೆ
ಮಹಾಮಳೆ ಪರಿಣಾಮ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಡೆಯಬೇಕಿದ್ದ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದ್ದು ಮನೆ ಬಿಟ್ಟು ಹೊರಬರದಂತೆ ನಾಗರಿಕರಿಗೆ ಮನವಿ ಮಾಡಿಕೊಳ್ಳಲಾಗಿದೆ.

ರೈಲು ಸಂಚಾರ ವ್ಯತ್ಯಯ ಸಾಧ್ಯತೆ
ಮುಂಬೈಗೆ ದೇಶದ ಹಲವೆಡೆಯಿಂದ ತೆರಳುವ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮಳೆ ನಿಂತು ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದ ಮೇಲೆ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications