Get Updates
Get notified of breaking news, exclusive insights, and must-see stories!

ಹಿಜಾಬ್‌ ವಿವಾದ: ಶಾಲೆಯಲ್ಲಿ ಸಮವಸ್ತ್ರ ಬಿಟ್ಟು ಬೇರೆ ಉಡುಗೆಗೆ ಅವಕಾಶ ನೀಡಬಾರದು: ಆದಿತ್ಯ ಠಾಕ್ರೆ

ಮುಂಬೈ, ಫೆಬ್ರವರಿ 09: ಕರ್ನಾಟಕದಲ್ಲಿ ಹೈಕೋರ್ಟ್‌ವರೆಗೂ ತಲುಪಿರುವ ಹಿಜಾಬ್‌ ವಿವಾದವು ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಲವಾರು ರಾಷ್ಟ್ರೀಯ ನಾಯಕರು ಹಿಜಾಬ್‌ ಪರವಾಗಿ ಹಾಗೂ ವಿರೋಧವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್‌ ಬೆಂಬಲಿತ ಮಹಾರಾಷ್ಟ್ರ ಸರ್ಕಾರದ ಸಚಿವ ಆದಿತ್ಯ ಠಾಕ್ರೆ, "ಶಾಲೆಗಳಲ್ಲಿ ಶಾಲಾ ಸಮವಸ್ತ್ರವನ್ನು ಹೊರತುಪಡಿಸಿ ಬೇರೆ ಯಾವುದೇ ಉಡುಗೆಗೆ ಸ್ಥಳಾವಕಾಶ ನೀಡಬಾರದು," ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ, "ಶಾಲೆಗಳಲ್ಲಿ ಸಮವಸ್ತ್ರವಿದ್ದರೆ, ಅದನ್ನು ಹೊರತುಪಡಿಸಿ ಬೇರೆ ಯಾವುದೇ ಉಡುಗೆಗೆ ಅವಕಾಶ ನೀಡಬಾರದು. ಶಾಲೆಗಳು ಮತ್ತು ಕಾಲೇಜುಗಳು ಶಿಕ್ಷಣದ ಕೇಂದ್ರಗಳಾಗಿವೆ, ಅಲ್ಲಿ ಶಿಕ್ಷಣವನ್ನು ಮಾತ್ರ ನೀಡಬೇಕು," ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ರಾಜಕೀಯ, ಧಾರ್ಮಿಕ ವಿಷಯಗಳಿಗೆ ಪ್ರಾತಿನಿಧ್ಯ ಇರಬಾರದು," ಎಂದು ಒತ್ತಿ ಹೇಳಿದ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ, "ಶಾಲಾ ಮತ್ತು ಕಾಲೇಜುಗಳಲ್ಲಿ ಯಾವುದೇ ರಾಜಕೀಯ, ಧಾರ್ಮಿಕ ಅಥವಾ ಅಂತಹ ಯಾವುದೇ ವಿಷಯವನ್ನು ತರಬಾರದು. ಶಿವಸೇನೆಗೆ ಒಂದೇ ಒಂದು ಪಾತ್ರವಿದೆ. ಅದು ಶಾಲೆಗಳಲ್ಲಿ ಉನ್ನತ ದರ್ಜೆಯ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವುದು ಆಗಿದೆ," ಎಂದರು.

Hijab Row: There Should Not Be a Place for Any Other Dress in School: Aaditya Thackeray

ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ

ಈ ನಡುವೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಪೀಠವು ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸುವ ಅರ್ಜಿಗಳನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.

ರಾಷ್ಟ್ರೀಯ ನಾಯಕರುಗಳಿಂದ ಪರ-ವಿರೋಧ ಹೇಳಿಕೆ

ಹಿಜಾಬ್‌ ವಿವಾದದ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ವಿದ್ಯಾರ್ಥಿಗಳಿಗೆ ಪತ್ರವನ್ನು ಬರೆದಿದ್ದಾರೆ. . ನಾನು ನಿಮ್ಮ ಹಿತೈಷಿಯಾಗಿ, ವಿದ್ಯಾರ್ಥಿ ಹೋರಾಟಗಾರನಾಗಿ, ಭಾರತದ ಪ್ರಾಚೀನ ವಿಶ್ವವಿದ್ಯಾಲಯವಾಗಿರುವ ಪಂಜಾಬ್ ವಿವಿಯ ಸೆನೆಟ್, ಸಿಂಡಿಕೇಟ್ ಸದಸ್ಯನಾಗಿ, ಆಡಳಿತಗಾರನಾಗಿ ನನಗಿರುವ ಸುದೀರ್ಘ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

"ಭ್ರಷ್ಟಾಚಾರ, ದುರಾಡಳಿತದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರವು ತನ್ನ ರಾಜಕೀಯ ದುರುದ್ದೇಶಕ್ಕೆ ಕರ್ನಾಟಕ ರಾಜ್ಯದ ಯುವಕರು ಹಾಗೂ ವಿದ್ಯಾರ್ಥಿಗಳಲ್ಲಿ ಬಿರುಕು ಮೂಡಿಸಿ ಅವರ ಏಕತೆಯನ್ನು ಒಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಪರೀಕ್ಷೆಗಳು ಎದುರಾಗುತ್ತಿದ್ದು, ಅದರಲ್ಲೂ ಪಿಯುಸಿ ಪರೀಕ್ಷೆ ಬಹಳ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಈ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವಾಗ, ಸಮಾಜಘಾತುಕ ಶಕ್ತಿಗಳು ವಿದ್ಯಾರ್ಥಿಗಳ ನಡುವೆ ವೈಷಮ್ಯ ಸೃಷ್ಟಿಸಿ ಅವರ ಕೈಗೆ ಚಾಕು, ಚೂರಿ, ಕಲ್ಲುಗಳನ್ನು ಕೊಟ್ಟು ರಾಜ್ಯದ ವಿದ್ಯಾರ್ಥಿ ಸಮುದಾಯದ ಭವಿಷ್ಯವನ್ನು ನಾಶ ಮಾಡಲು ಪ್ರಯತ್ನಿಸುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

"ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು," ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ. "ಹೆಣ್ಣುಮಕ್ಕಳು ಬಿಕಿನಿಯಾದರೂ ಹಾಕಲಿ, ಮುಸುಕಾದರೂ ಧರಿಸಲಿ. ಜೀನ್ಸ್ ಬಟ್ಟೆಯೇ ಆಗಿರಲಿ ಅಥವಾ ಹಿಜಾಬ್ ಆದರೂ ಆಗಿರಲಿ. ತಾನು ಏನು ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಮಹಿಳೆಯ ಹಕ್ಕು. ಭಾರತೀಯ ಸಂವಿಧಾನವೇ ಮಹಿಳೆಯರಿಗೆ ಈ ಹಕ್ಕನ್ನು ನೀಡಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ," ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+