ಗುದ್ದೋಡು ಪ್ರಕರಣ: ಸಲ್ಮಾನ್ ಖಾನ್ ಇನ್ ಟ್ರಬಲ್
ಮುಂಬೈ, ಡಿ.3: ತಂಗಿ ಮದುವೆ ಮುಗಿಸಿಕೊಂಡು ಶೂಟಿಂಗ್ ಗಳಲ್ಲಿ ನಿರತರಾಗಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಕಹಿ ಸುದ್ದಿ ಸಿಕ್ಕಿದೆ. 2002ರ ಗುದ್ದೋಡು ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ಸಲ್ಮಾನ್ ಅವರ ಆಲ್ಕೋಹಾಲ್ ಪರೀಕ್ಷೆ ವರದಿ ಬಂದಿದ್ದು, ಸಲ್ಲೂಗೆ ಮುಳುವಾಗುವಂತಿದೆ.
48 ವರ್ಷ ವಯಸ್ಸಿನ ನಟ ಸಲ್ಮಾನ್ ಖಾನ್ ಅವರು ಮುಂಬೈ ಸೆಷನ್ಸ್ ಕೋರ್ಟಿನಲ್ಲಿ ಬುಧವಾರ ಖುದ್ದು ಹಾಜರಾಗಿದ್ದರು. ಈ ಸಂದರ್ಭದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆಲ್ಕೋಹಾಲ್ ಪರೀಕ್ಷಾ ವರದಿಯನ್ನು ಕೋರ್ಟಿಗೆ ಸಲ್ಲಿಸಿದರು. [ಸಲ್ಲೂ ಕೃಷ್ಣ ಮೃಗ ಬೇಟೆ ಕೇಸ್ ಅಪ್ಡೇಟ್ಸ್]
ವರದಿ ಪ್ರಕಾರ ಘಟನೆ ನಡೆದ ದಿನ ಸಲ್ಮಾನ್ ಖಾನ್ ಅವರ ದೇಹದ ರಕ್ತದಲ್ಲಿ ಮದ್ಯದ ಅಂಶ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿತ್ತು ಎಂದು ತಿಳಿದು ಬಂದಿದೆ. ತಜ್ಞರ ಹೇಳಿಕೆ ಪ್ರಕಾರ ರಕ್ತದಲ್ಲಿ ಆಲ್ಕೋಹಾಲ್ ಅಂಶ 30 ಮಿಲಿ ಗ್ರಾಮ್ ನಷ್ಟಿರಬಹುದು. ಅದರೆ, ಸಲ್ಮಾನ್ ಅವರ ರಕ್ತದಲ್ಲಿ 62 ಮಿಲಿಗ್ರಾಂನಷ್ಟಿದೆ. ಹೀಗಾಗಿ ಸಲ್ಮಾನ್ ಖಾನ್ ಅವರು ಘಟನೆ ನಡೆದ ವೇಳೆ ಕಾರಿನಲ್ಲಿದ್ದರು ಹಾಗೂ ವಾಹನ ಚಲಾಯಿಸುವಾಗ ಕುಡಿದಿದ್ದರು ಎಂಬುದಕ್ಕೆ ಪುರಾವೆ ಸಿಕ್ಕಿದ್ದಂತಾಗಿದೆ.

ನ.24ರ ವಿಚಾರಣೆಗೆ ಸಲ್ಲೂ ಹಾಜರಾಗಿರಲಿಲ್ಲ. ಅದರೆ, ಅಂದು ಲಾಂಡ್ರಿ ಮ್ಯಾನೇಜರ್ ಹಾಗೂ ಮತ್ತೊಬ್ಬ ಸಾಕ್ಷಿಯನ್ನು ಕೋರ್ಟ್ ವಿಚಾರಣೆಗೊಳಪಡಿಸಿತ್ತು. ಸೆ.28, 2002ರಂದು ಸಲ್ಮಾನ್ ಖಾನ್ ಅವರಿದ್ದ ಲ್ಯಾಂಡ್ ರೋವರ್ ವಾಹನ ಅಡ್ಡಾದಿಡ್ಡಿ ಚಲಿಸಿ ಫುಟ್ ಪಾತ್ ನಲ್ಲಿದ್ದ ಒಬ್ಬ ವ್ಯಕ್ತಿ ಸಾವಿಗೆ ಕಾರಣವಾಗಿತ್ತು. ಘಟನೆಯಲ್ಲಿ ನಾಲ್ವರ ಗಾಯಗೊಂಡಿದ್ದರು.
2002ರ ಹಿಟ್ ಅಂಡ್ ರನ್ ಕೇಸಿಗೆ ಸಂಬಂಧಿಸಿದಂತೆ ಕಾರು ಚಾಲನೆ ಮಾಡಿದ ವೇಳೆ ಸಲ್ಮಾನ್ ಅವರು ಕುಡಿದಿರಲಿಲ್ಲ. ಘಟನೆ ನಂತರ ನಾನು ಅವರನ್ನು ಭೇಟಿ ಮಾಡಿದ್ದೆ ಎಂದು ಪ್ರತ್ಯಕ್ಷದರ್ಶಿ ಇತ್ತೀಚಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ತಿಳಿಸಿದ್ದರಿಂದ ಪ್ರಕರಣಕ್ಕೆ ತಿರುವು ಸಿಕ್ಕಿತ್ತು.
ಗಾಡಿನ ವಿಮೆ ಏಜೆಂಟ್ ಹೇಳಿಕೆ ನೀಡಿ ವಾಹನ ವಿಮೆ ಸಲ್ಮಾನ್ ಹೆಸರಿನಲ್ಲಿಲ್ಲ. ಈ ವಾಹನ ಮತ್ತೊಬ್ಬರಿಂದ ಖರೀದಿಸಿದ್ದಾರೆ. ಅವರ ಹೆಸರಿನಲ್ಲಿ ವಿಮೆ ಇದೆ ಎಂದಿದ್ದಾರೆ. ಇನ್ನೂ 11 ಜನ ಸಾಕ್ಷಿಗಳ ವಿಚಾರಣೆ ಬಾಕಿ ಇದೆ. ಸಲ್ಮಾನ್ ಖಾನ್ ಅವರ ಭವಿಷ್ಯ ನಿರ್ಧಾರ ಏನಾಗುವುದೋ ಕಾದು ನೋಡಬೇಕಿದೆ.(ಪಿಟಿಐ)
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications