ಭಿಕ್ಷುಕರು, ಮನೆಯಿಲ್ಲದವರಿಗೆ ಸರ್ಕಾರ ಎಲ್ಲವನ್ನೂ ನೀಡಲಾಗುವುದಿಲ್ಲ: ಬಾಂಬೆ ಹೈಕೋರ್ಟ್
ಮುಂಬೈ, ಜುಲೈ 03: ಮನೆಯಿಲ್ಲದವರು, ಭಿಕ್ಷುಕರಿಗೆ ಎಲ್ಲವನ್ನೂ ಸರ್ಕಾರ ನೀಡಲು ಸಾಧ್ಯವಿಲ್ಲ, ಅವರೂ ದುಡಿಯಬೇಕು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತಾ ಹಾಗೂ ನ್ಯಾ. ಜಿಎಸ್ ಕುಲಕರ್ಣಿ ನೇತೃತ್ವದ ಪೀಠವು ಈ ಹೇಳಿಕೆ ನೀಡಿದೆ.
ಬ್ರಿಜೇಶ್ ಆರ್ಯ ಎಂಬುವರು ಸಲ್ಲಿಸಿದ ಅರ್ಜಿಯಲ್ಲಿ ಮುಂಬೈ ಮಹಾನಗರ ಪಾಲಿಕೆಯು ಮನೆ ಇಲ್ಲದವರಿಗೆ ಮತ್ತು ಭಿಕ್ಷುಕರಿಗೆ ದೈನಂದಿನ ಮೂರು ಹೊತ್ತು ಪೋಷಕಾಂಶಯುಕ್ತ ಆಹಾರ, ನೀರು, ವಸತಿ ಹಾಗೂ ಸಾರ್ವಜನಿಕ ಶೌಚಾಲಯ ಒದಗಿಸಬೇಕು ಎಂದು ಉಲ್ಲೇಖಿಸಲಾಗಿತ್ತು.

ಎನ್ಜಿಒಗಳ ಸಹಾಯದಿಂದ ಮುಂಬೈನಾದ್ಯಂತ ನಿರ್ಗತಿಕರಿಗೆ ಹಾಗೂ ವಸತಿ ಇಲ್ಲದವರಿಗೆ ಆಹಾರದ ಪೊಟ್ಟಣಗಳನ್ನು ಮಹಾನಗರ ಪಾಲಿಕೆ ಈಗಾಗಲೇ ವಿತರಿಸುತ್ತಿದೆ.
ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸಲಾಗುತ್ತಿದೆ ಎಂದು ಬಿಎಂಸಿಯು ನ್ಯಾಯಾಲಯಕ್ಕೆ ತಿಳಿಸಿದೆ, ಈ ಸಲ್ಲಿಕೆಯನ್ನು ಸಂಗೀಕರಿಸಿದ ನ್ಯಾಯಾಲಯವು ಈ ಅರ್ಜಿಯ ಕುರಿತು ಹೆಚ್ಚಿನ ನಿರ್ದೇಶನ ಅಗತ್ಯವಿಲ್ಲ ಎಂದರು.
ವಸತಿಯಿಲ್ಲದವರು ಹಾಗೂ ಭಿಕ್ಷುಕರು ದೇಶಕ್ಕಾಗಿ ಸಹ ಕೆಲಸ ಮಾಡಬೇಕು, ಎಲ್ಲವನ್ನೂ ಸರ್ಕಾರ ಅಥವಾ ರಾಜ್ಯದಿಂದ ಒದಗಿಸಲು ಸಾಧ್ಯವಿಲ್ಲ.
ನೀವು ಇಂಥವರ ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದೀರಿ ಮತ್ತು ಜನರನ್ನು ಕೆಲಸ ಮಾಡದಂತೆ ತಡೆಯುತ್ತಿದ್ದೀರಿ ಎಂದು ಅರ್ಜಿದಾರರನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications