ಭಪ್ಪರೆ ಮಗು.. ಕೊರೊನಾ ವೈರಸ್ ನ ಬಗ್ಗುಬಡಿದ 36 ದಿನದ ಹಸುಗೂಸು.!
ಮುಂಬೈ, ಮೇ 28: ವಿಶ್ವದಾದ್ಯಂತ 57,92,992 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಡೆಡ್ಲಿ ಕೋವಿಡ್-19 ಗೆ 3,57,480 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಡಿ 24,99,168 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
Recommended Video
ಭಾರತದಲ್ಲಿ ಈವರೆಗೂ 1,58,613 ಮಂದಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ. ಆ ಪೈಕಿ 4540 ಮಂದಿ ಮೃತಪಟ್ಟಿದ್ದು, 67,753 ಜನ ಗುಣಮುಖರಾಗಿದ್ದಾರೆ.
ಹಾಗೆ ಮಹಾಮಾರಿ ಕೊರೊನಾ ವೈರಸ್ ಅನ್ನು ಬಗ್ಗುಬಡಿದು ಗುಣಮುಖರಾದವರ ಪೈಕಿ 36 ದಿನದ ಹಸುಗೂಸು ಕೂಡ ಒಂದು ಅನ್ನೋದು ನೀವೆಲ್ಲರೂ ಗಮನಿಸಬೇಕಾದ ಅಚ್ಚರಿಯ ಸಂಗತಿ.!
ಹೌದು, ಮಹಾರಾಷ್ಟ್ರದಲ್ಲಿ ಕೇವಲ 36 ದಿನಗಳ ಹಿಂದೆಯಷ್ಟೇ ಜನ್ಮ ತಾಳಿದ ಕಂದಮ್ಮ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಗೆಲುವು ಕಂಡಿದೆ. ಕೊರೊನಾ ವೈರಸ್ ಅನ್ನು ಸದೆಬಡಿಯುವಲ್ಲಿ 36 ದಿನದ ಹಸುಗೂಸು ಅಕ್ಷರಶಃ ಯಶಸ್ವಿಯಾಗಿದೆ.

ಕೋವಿಡ್-19 ನಿಂದ ಗುಣಮುಖವಾದ ಪುಟ್ಟ ಮಗು
ಮಹಾರಾಷ್ಟ್ರದಲ್ಲಿ ತಿಂಗಳ ಹಿಂದೆ ಹುಟ್ಟಿದ ಮಗುವಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿತ್ತು. ಇದೀಗ ಆ ಮಗು ಕೋವಿಡ್-19 ರೋಗದಿಂದ ಗುಣಮುಖವಾಗಿದೆ. ಸಂಪೂರ್ಣವಾಗಿ ಚೇತರಿಸಿಕೊಂಡ ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವಾಗ ವೈದ್ಯರು ಮತ್ತು ನರ್ಸ್ ಚಪ್ಪಾಳೆ ತಟ್ಟಿ ಶಬ್ಬಾಸ್ ಹೇಳಿದ್ದಾರೆ.
|
ಚಪ್ಪಾಳೆ ತಟ್ಟಿದ ವೈದ್ಯರು
ಮುಂಬೈನಲ್ಲಿನ ಸಿಯಾನ್ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್ ಆಗುವ ಸಂದರ್ಭದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಚಪ್ಪಾಳೆ ತಟ್ಟುವ ವಿಡಿಯೋವನ್ನು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಮಗುವಿಗೆ ಮತ್ತು ಚಿಕಿತ್ಸೆ ನೀಡಿದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಗೆ ಮಹಾರಾಷ್ಟ್ರ ಸಿಎಂ ಭೇಷ್ ಎಂದಿದ್ದಾರೆ.
|
ಚಪ್ಪಾಳೆ ತಟ್ಟಿದ ಪ್ರವಾಸೋದ್ಯಮ ಸಚಿವ
ಇದೇ ವಿಡಿಯೋವನ್ನು ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಕೂಡ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡು ಚಪ್ಪಾಳೆ ತಟ್ಟಿದ್ದಾರೆ.

ವೈರಲ್ ಆದ ವಿಡಿಯೋ
ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. 3 ಲಕ್ಷಕ್ಕೂ ಅಧಿಕ ಮಂದಿ ಈ ವಿಡಿಯೋನ ವೀಕ್ಷಿಸಿದ್ದು, ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ. ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಹಸುಗೂಸು ಯಶಸ್ವಿಯಾಗಿರುವುದರಿಂದ ಹಲವರಿಗೆ ಜೀವದ ಮೇಲೆ ಭರವಸೆ ಮೂಡಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications