ಸದ್ಯ, ನನ್ಮೇಲೆ 'ಮೀಟೂ' ಆರೋಪ ಬರಲಿಲ್ಲ! ಶತ್ರುಘ್ನ ಸಿನ್ಹ ಹೇಳಿಕೆಯ ಅರ್ಥವೇನು?
Recommended Video

ನವದೆಹಲಿ, ಫೆಬ್ರವರಿ 07: 2018 ರ ಅಂತ್ಯದ ಒಂದೆರಡು ತಿಂಗಳು ಸಿನಿಮಾ ರಂಗ, ರಾಜಕಾರಣಿಗಳ ನಿದ್ದೆ ಕೆಡಿಸಿದ್ದ ಮೀಟೂ ಆರೋಪ ಸದ್ಯಕ್ಕೆ ಬೂದಿ ಮುಚ್ಚಿದ ಕೆಂಡಂದಂತಿದೆ.
ಆದರೆ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ತಮಾಷೆ ಮಾಡುವುದಕ್ಕೆಂದೋ, ಅಥವಾ ಮಾತಿನ ಓಘದಲ್ಲೋ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಆಡಿದ ಮಾತೊಂದು ಸಾಕಷ್ಟು ಅಪಾರ್ಥಗಳಿಗೆ ಎಡೆ ಮಾಡಿಕೊಟ್ಟಿದೆ.
"ನಾನು ನಿಜಕ್ಕೂ ಅದೃಷ್ಟವಂತ ಎಂದು ನಾನೇ ಹೇಳಿಕೊಳ್ಳುತ್ತೇನೆ. ಏಕೆಂದರೆ ನನ್ನ ಮೇಲೆ ಯಾರೂ ಮೀಟೂ ಆರೋಪ ಮಾಡಲಿಲ್ಲ" ಎಂದು ಸಿನ್ಹಾ ಹೇಳಿದ್ದರು.

ಅಷ್ಟಕ್ಕೂ ಅವರ ಮಾತಿನ ಅರ್ಥವೇನು? 'ನನ್ನ ಮೇಲೆ ಆರೋಪ ಮಾಡಬೇಕಿತ್ತು' ಎಂಬುದೇ? 'ತಪ್ಪು ಮಾಡಿದರೂ ನನ್ನನ್ನು ಯಾರೂ ಹಳಿಯಲಿಲ್ಲ ಎಂಬುದೇ?' ಅಥವಾ 'ಈ ಮೀಟೂ ಆರೋಪಗಳು ಆಧಾರ ರಹಿತವಾದುದು' ಎಂಬುದೆ?
"ಪ್ರತಿಯೊಬ್ಬ ಯಶಸ್ವೀ ಪುರುಷನ ಸೋಲಿನ ಹಿಂದೆಯೂ ಓರ್ವ ಮಹಿಳೆ ಇರುತ್ತಾಳೆ ಎಂಬುದು ಮೀಟೂ ಆಂದೋಲನದಿಂದ ತಿಳಿದಿದೆ. ನನ್ನ ಮೇಲೆ ಮೀಟೂ ಆರೋಪ ಮಾಡುವುದಕ್ಕೆ ಯಾರಾದರೂ ಯೋಚಿಸಿದ್ದರೆ, ದಯವಿಟ್ಟು ಮಾಡಬೇಡಿ" ಎಂದು ಅವರು ಹೇಳಿದರು.
ತಮ್ಮ ಹೇಳಿಕೆಯ ಬಗ್ಗೆ ನಂತರ ಸಮಜಾಯಿಷಿ ನೀಡಿದ ಸಿನ್ಹಾ, 'ನಾನು ತಮಾಷೆಗಾಗಿ ಹೇಳಿದೆ. ಯಾರೂ ಇದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ' ಎಂದರು.
ಕಳೆದ ವರ್ಷ ಹಲವು ಮಹಿಳೆಯರು ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೀಟೂ ಹೆಸರಿನಲ್ಲಿ ಅಭಿಯಾನ ಆರಂಭಿಸಿದ್ದರು. ಕೇಂದ್ರ ಸಚಿವ ಎಂಜೆ ಅಕ್ಬರ್, ಹಿಂದಿ ನಟರಾದ ಅಲೋಕ್ ನಾಥ್, ನಾನಾ ಪಾಟೇಕರ್ ಮುಂತಾದವರ ವಿರುದ್ಧ ಕೇಳಿಬಂದ ಈ ಆರೋಪದ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications