ನಾನು ಕ್ಷಮೆ ಕೇಳೋದು ದೇಶಕ್ಕೆ ಮಾತ್ರ, ಏರ್ ಲೈನ್ಸ್ ಗಲ್ಲ! ರವೀಂದ್ರ ಗಾಯಕ್ ವಾಡ್
ಏರ್ ಇಂಡಿಯಾ ಸಿಬ್ಬಂದಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಶಿವಸೇನೆಯ ಸಂಸದ ರವೀಂದ್ರ ಗಾಯಕ್ ವಾಡ್ ತಮ್ಮ ವರ್ತನೆಗೆ ದೇಶದ ಜನರ ಕ್ಷಮೆ ಯಾಚಿಸಿದ್ದಾರೆ.
ಏರ್ ಇಂಡಿಯಾ ಸಿಬ್ಬಂದಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದ ಶಿವಸೇನೆಯ ಸಂಸದ ರವೀಂದ್ರ ಗಾಯಕ್ ವಾಡ್ ತಮ್ಮ ವರ್ತನೆಗೆ ದೇಶದ ಜನರ ಕ್ಷಮೆ ಯಾಚಿಸಿದ್ದಾರೆ.
ನಾನು ಸಂಸತ್ತನ್ನೂ, ನಮ್ಮ ನಾಯಕ ಉದ್ದವ್ ಠಾಕ್ರೆ ಅವರನ್ನು ಅತ್ಯಂತ ಗೌರವದಿಂದ ಕಾಣುತ್ತೇನೆ. ನನ್ನ ವರ್ತನೆಯಿಂದ ನಿಮಗೆ ನೋವಾಗಿದ್ದರೆ ಕ್ಷಮಿಸಿ, ಆದರೆ ನಾನು ಯಾವುದೇ ಕಾರಣಕ್ಕೂ ಏರ್ ಲೈನ್ಸ್ ಅಧಿಕಾರಿಗಳಲ್ಲಿ ಕ್ಷಮೆ ಕೇಳುವುದಿಲ್ಲ ಎಂದು ಸಂಸತ್ತಿನಲ್ಲಿ ಇಂದು ಅವರು ಹೇಳಿದ್ದಾರೆ.[ಚಪ್ಪಲಿಯೇಟು ಪ್ರಕರಣ: ಶಿವಸೇನಾ ಸಂಸದ ವಿರುದ್ಧ ಎಫ್ಐಆರ್]

ಅಲ್ಲದೆ, ಆ ಘಟನೆಯ ಕುರಿತು ನನ್ನನ್ನು ಯಾರೂ ತನಿಖೆ ಮಾಡಿಲ್ಲ, ಸತ್ಯ ತಿಳಿಯುವ ಅಗತ್ಯವಿದ್ದರೆ ನನ್ನನ್ನು ಮುಕ್ತವಾಗಿ ವಿಚಾರಣೆ ಮಾಡಬಹುದಿತ್ತಲ್ಲ ಎಂದರಲ್ಲದೆ, ಪ್ರಧಾನಿ ಮೋದಿಯವರ ಕುರಿತು ಸಿಬ್ಬಂದಿ ಹೇಳಿದ ಮಾತುಗಳು ನನ್ನನ್ನು ರೊಚ್ಚಿಗೊಳಿಸಿದವು ಎಂದಿದ್ದಾರೆ.
ಮಾಧ್ಯಮಗಳು ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಿವೆ. ಅಂದು ನಡೆದ ಘಟನೆಯ ಪೂರ್ಣ ವಿಡಿಯೋವನ್ನು ಮಾಧ್ಯಮಗಳು ತೋರಿಸುತ್ತಿಲ್ಲ. ವಿಡಿಯೋವನ್ನು ತಿರುಚಿ, ಕೇವಲ ನಾನು ಏರ್ ಇಂಡಿಯಾ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ದೃಶ್ಯವನ್ನಷ್ಟೇ ತೋರಿಸಲಾಗುತ್ತಿದೆ. ಅದಕ್ಕೂ ಮೊದಲು ಅವರು ನನ್ನೊಂದಿಗೆ ಎಷ್ಟು ಅಸಭ್ಯವಾಗಿ ವರ್ತಿಸಿದರು ಎಂಬುದನ್ನು ತೋರಿಸಿಲ್ಲ. ಅದಕ್ಕೆಂದೇ ಸಂಸತ್ತಿನ ಮುಂದೆ ಘಟನೆಯ ಪೂರ್ಣ ವಿಡಿಯೋವನ್ನು ಇಟ್ಟಿದ್ದೇನೆ ಎಂದರು.[ಚಪ್ಪಲಿ ಏಟು ಕೊಟ್ಟ 'ಮಹಾ' ಸಂಸದ ಕಪ್ಪು ಪಟ್ಟಿಗೆ!]
57 ವರ್ಷದ ಮಹಾರಾಷ್ಟ್ರದ ಒಸ್ಮಾನಾಬಾದ್ ಕ್ಷೇತ್ರದ ಸಂಸದ ರವೀಂದ್ರ ಗಾಯಕ್ ವಾಡ್ ಕಳೆದ ತಿಂಗಳು ದೆಹಲಿಯಲ್ಲಿ ಏರ್ ಲೈನ್ಸ್ ಸಿಬ್ಬಂದಿಯೊಬ್ಬರ ಮೇಲೆ ಮಾಡಿದ ಹಲ್ಲೆ ರಾಷ್ಟ್ರ ಮಟ್ಟದಲ್ಲಿ ತೀವ್ರ ಟೀಕೆಗೆ ಗುರಿಯಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications