'ನಮಗೆ ಭಾರತದ ಸಂವಿಧಾನದ ಮೇಲೆ ಗೌರವವಿಲ್ಲ'
ಬೆಂಗಳೂರು, ಜನವರಿ 27 : 'ನಮಗೆ ಭಾರತದ ಸಂವಿಧಾನದ ಮೇಲೆ ಗೌರವವಿಲ್ಲ. ಇಸ್ಲಾಂ ಧರ್ಮದ ರಕ್ಷಣೆಗಾಗಿ ಯುವಕರು ಐಎಸ್ಐಎಸ್ ಸೇರುತ್ತಿದ್ದಾರೆ. ನಮ್ಮನ್ನು ಬಂಧಿಸಿದರೆ ಮತ್ತೊಬ್ಬರು ಸಂಘಟನೆಯನ್ನು ಮುನ್ನಡೆಸುತ್ತಾರೆ' ಎಂದು ಉಗ್ರ ಮುದಬ್ಬೀರ್ ಮುಷ್ತಾಖ್ ಎನ್ಐಎ ವಿಚಾರಣೆ ವೇಳೆ ಹೇಳಿದ್ದಾನೆ.
ಕಳೆದ ವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರು, ಹೈದರಾಬಾದ್, ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಮುಂಬೈನಲ್ಲಿ ಮುದಬ್ಬೀರ್ ಮುಷ್ತಾಖ್ನನ್ನು ಎನ್ಐಎ ಬಂಧಿಸಿದ್ದು, ಜನವರಿ 30ರ ವರೆಗೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. [ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು]

ಎನ್ಐಎ ಅಧಿಕಾರಿಗಳು ಒನ್ ಇಂಡಿಯಾಕ್ಕೆ ನೀಡಿರುವ ಮಾಹಿತಿಯಂತೆ ಮುದಬ್ಬೀರ್ ಮುಷ್ತಾಖ್, 'ನಮ್ಮನ್ನು ಬಂಧಿಸಿದರೆ ಸಂಘಟನೆಗೆ ಹಿನ್ನಡೆ ಉಂಟಾಗುವುದಿಲ್ಲ. ನಾವಲ್ಲದಿದ್ದರೆ ಮತ್ತೊಬ್ಬರು ಸಂಘಟನೆಯನ್ನು ದೇಶವ್ಯಾಪಿ ವಿಸ್ತರಿಸುತ್ತಾರೆ' ಎಂದು ಹೇಳಿದ್ದಾನೆ. [ಉಗ್ರರ ಬಳಿ ಸುಧಾರಿತ ಸ್ಫೋಟಕ ಪತ್ತೆ]
ಎನ್ಐಎ, ಕೇಂದ್ರ ಗುಪ್ತಚರ ಇಲಾಖೆ ಸೇರಿದಂತೆ ವಿವಿಧ ತನಿಖಾ ತಂಡಗಳು ಮುಷ್ತಾಖ್ ವಿಚಾರಣೆ ನಡೆಸುತ್ತಿವೆ. ವಿಚಾರಣೆ ವೇಳೆಯಲ್ಲಿ 'ಸಂಘಟನೆಗೆ ತಾನು ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಮುಷ್ತಾಖ್ ಹೇಳಿದ್ದಾನೆ. ಭಾರತದ ಯುವಕರು ಹಣಕ್ಕಾಗಿ ಸಂಘಟನೆ ಸೇರುತ್ತಿಲ್ಲ, ಧರ್ಮದ ರಕ್ಷಣೆಗಾಗಿ ಸೇರುತ್ತಿದ್ದಾರೆ' ಎಂದು ತಿಳಿಸಿದ್ದಾನೆ.
ಮುಷ್ತಾಖ್ ಬಂಧಿಸುವ ವೇಳೆ ಎನ್ಐಎ ಅಧಿಕಾರಿಗಳು 2.37 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 6 ಲಕ್ಷ ರೂ.ಗಳ ವರ್ಗಾವಣೆ ಆತನ ಖಾತೆಯಿಂದ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಹಣ ಎಲ್ಲಿಂದ ಬಂತು? ಎಂದು ಅಧಿಕಾರಿಗಳು ಇನ್ನೂ ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ವಾರ ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು, ಬೆಂಗಳೂರು, ತುಮಕೂರಿನಲ್ಲಿಯೂ ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಒಟ್ಟು 5 ಉಗ್ರರನ್ನು ಎನ್ಐಎ ವಿಚಾರಣೆ ನಡೆಸುತ್ತಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications