ದಾವೂದ್ನ ಡಿ-ಕಂಪನಿ ಜೊತೆ ಎನ್ಸಿಪಿ ನಾಯಕ ನವಾಬ್ ಮಲಿಕ್ ನಂಟು: ಇಡಿ
ಮುಂಬೈ ಮೇ 24: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಪಿ ನಾಯಕ ನವಾಬ್ ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯದ ತನಿಖೆಗಳು ಆಘಾತಕಾರಿ ಮಾಹಿತಿಗಳನ್ನು ಬಹಿರಂಗಪಡಿಸಿವೆ. ಇಡಿ ಪ್ರಕಾರ, ಮಹಾರಾಷ್ಟ್ರ ಸಚಿವರು ಪರಾರಿಯಾಗಿರುವ ದರೋಡೆಕೋರ ದಾವೂದ್ ಇಬ್ರಾಹಿಂನ ಡಿ-ಕಂಪೆನಿಯೊಂದಿಗೆ ದೀರ್ಘಕಾಲದವರೆಗೆ ಸಂಪರ್ಕ ಹೊಂದಿದ್ದಾರೆ. ಜಾರಿ ನಿರ್ದೇಶನಾಲಯ ಈ ಬಗ್ಗೆ ಮುಂಬೈನ ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ದೂರು (ಚಾರ್ಜ್ಶೀಟ್) ಸಲ್ಲಿಸಿದೆ.
ಪ್ರಾಸಿಕ್ಯೂಷನ್ ದೂರಿನಲ್ಲಿ, ಇಡಿ ಡಿ-ಕಂಪನಿಯೊಂದಿಗೆ ಮಲಿಕ್ ಅವರ ಆಪಾದಿತ ಸಂಪರ್ಕವನ್ನು ವಿಸ್ತಾರವಾಗಿ ಉಲ್ಲೇಖಿಸಿದೆ ಮತ್ತು 1996 ರಲ್ಲಿ ಕುರ್ಲಾ ವೆಸ್ಟ್ನಲ್ಲಿರುವ ಗೋವಾಲಾ ಕಟ್ಟಡದ ಕಾಂಪೌಂಡ್ ಅನ್ನು ಆಕ್ರಮಿಸಿಕೊಳ್ಳಲು ಪಿತೂರಿ ನಡೆಸಿದೆ ಎಂದಿದೆ.
ಮುಂಬೈ ಮತ್ತು ದೇಶದ ಇತರ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಗ್ಯಾಂಗ್ಗಳ ಕುರಿತು ದಾವೂದ್ ಇಬ್ರಾಹಿಂ ಅವರ ಸೋದರಳಿಯ ಅಲಿಶಾ ಪಾರ್ಕರ್ ಅವರನ್ನು ಸೋಮವಾರ ಮುಂಬೈನಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. 2014ರಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾವೂದ್ನ ಸಹೋದರಿ ಹಸೀನಾ ಪರ್ಕರ್ ಅವರ ಪುತ್ರನೇ ಈ ಅಲಿಶಾ ಪಾರ್ಕರ್. ದಾವೂದ್ ಸೋದರಳಿಯ ಇಡಿಗೆ ಈ ಹೇಳಿಕೆಯನ್ನು ನೀಡಿದ್ದಾರೆ.

ದಾವೂದ್ ಇಬ್ರಾಹಿಂ ಅವರ ಸೋದರಳಿಯ ಅಲಿಶಾ ಪಾರ್ಕರ್ ಅವರು ಮಲಿಕ್ ವಿರುದ್ಧದ ಪಿಎಂಎಲ್ಎ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಪಿಎಂಎಲ್ಎ ಕಾಯ್ದೆಯ ಸೆಕ್ಷನ್ 50 ರ ಅಡಿಯಲ್ಲಿ ಇಡಿಗೆ ಹೇಳಿಕೆ ನೀಡಿದ್ದರು. ದಾವೂದ್ ಇಬ್ರಾಹಿಂ ಜೊತೆ ತನ್ನ ತಾಯಿ ದೀರ್ಘ ಕಾಲದಿಂದ ಹಣಕಾಸಿನ ವಹಿವಾಟು ನಡೆಸುತ್ತಿದ್ದರು ಎಂದು ಅಲಿಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರು ತಮ್ಮ ತಾಯಿಯ ಸಹವರ್ತಿಗಳಲ್ಲಿ ಒಬ್ಬರಾಗಿದ್ದ ಸಲೀಂ ಪಟೇಲ್ ಅವರನ್ನೂ ಉಲ್ಲೇಖಿಸಿದ್ದಾರೆ. ಸಲೀಂ ಪಟೇಲ್ ಈರುಳ್ಳಿ ವ್ಯಾಪಾರಿ ಮತ್ತು ತಾಯಿಯೊಂದಿಗೆ ಆಸ್ತಿ ವ್ಯವಹಾರದಲ್ಲಿ ತೊಡಗಿದ್ದರು ಎಂದು ಹೇಳಿದ್ದಾರೆ. ಹಸೀನಾ ಪರ್ಕರ್ ಮತ್ತು ಸಲೀಂ ಪಟೇಲ್ ಗೋವಾಲಾ ಬಿಲ್ಡಿಂಗ್ನಲ್ಲಿ ವಿವಾದವನ್ನು ಬಗೆಹರಿಸಿದ್ದಾರೆ ಮತ್ತು ಅಲ್ಲಿ ಕಚೇರಿಯನ್ನು ತೆರೆಯುವ ಮೂಲಕ ಕಾಂಪೌಂಡ್ನ ಭಾಗವನ್ನು ತೆಗೆದುಕೊಂಡಿದ್ದಾರೆ ಎಂದು ಅಲಿಶಾ ಹೇಳಿದ್ದಾರೆ.

ನಂತರ, ಪಾರ್ಕರ್ ತನ್ನ ನಿಯಂತ್ರಣದಲ್ಲಿರುವ ಗೋವಾಲಾ ಕಟ್ಟಡದ ಒಂದು ಭಾಗವನ್ನು ನವಾಬ್ ಮಲಿಕ್ಗೆ ಮಾರಾಟ ಮಾಡಿದರು. ನವಾಬ್ ಮಲಿಕ್ ತನ್ನ ತಾಯಿ ಮತ್ತು ಪಟೇಲ್ಗೆ ಪಾವತಿಸಿದ ಹಣದ ಬಗ್ಗೆ ಅಲಿಶಾ ಅವರಿಗೆ ತಿಳಿದಿರಲಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಶುಕ್ರವಾರ ವಿಶೇಷ ನ್ಯಾಯಾಲಯವು ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯದ ಆರೋಪಪಟ್ಟಿಯನ್ನು ಗಮನಕ್ಕೆ ತೆಗೆದುಕೊಂಡಿತು. ಮಲಿಕ್ ನೇರವಾಗಿ ಮತ್ತು ಉದ್ದೇಶಪೂರ್ವಕವಾಗಿ ಹಣ ವರ್ಗಾವಣೆ ಮತ್ತು ಕುರ್ಲಾದಲ್ಲಿರುವ ಗೋವಾಲಾ ಕಾಂಪೌಂಡ್ ಅನ್ನು ಆಕ್ರಮಿಸಲು ಇತರರೊಂದಿಗೆ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಸೂಚಿಸಲು ಪ್ರಾಥಮಿಕ ಸಾಕ್ಷ್ಯವಿದೆ ಎಂದು ಹೇಳಿದೆ. ಹೀಗಾಗಿ ನ್ಯಾಯಾಲಯವು ಅವರ ವಿರುದ್ಧ ಮತ್ತು 1993 ರ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಸರ್ದಾರ್ ಶಹವಾಲಿ ಖಾನ್ ವಿರುದ್ಧ ಪ್ರಕ್ರಿಯೆಯನ್ನು ಹೊರಡಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications