ದಾವೂದ್ನ ಡಿ-ಕಂಪನಿ ಜೊತೆ ಎನ್ಸಿಪಿ ನಾಯಕ ನವಾಬ್ ಮಲಿಕ್ ನಂಟು: ಇಡಿ
ಮುಂಬೈ ಮೇ 24: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಪಿ ನಾಯಕ ನವಾಬ್ ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯದ ತನಿಖೆಗಳು ಆಘಾತಕಾರಿ ಮಾಹಿತಿಗಳನ್ನು ಬಹಿರಂಗಪಡಿಸಿವೆ. ಇಡಿ ಪ್ರಕಾರ, ಮಹಾರಾಷ್ಟ್ರ ಸಚಿವರು ಪರಾರಿಯಾಗಿರುವ ದರೋಡೆಕೋರ ದಾವೂದ್ ಇಬ್ರಾಹಿಂನ ಡಿ-ಕಂಪೆನಿಯೊಂದಿಗೆ ದೀರ್ಘಕಾಲದವರೆಗೆ ಸಂಪರ್ಕ ಹೊಂದಿದ್ದಾರೆ. ಜಾರಿ ನಿರ್ದೇಶನಾಲಯ ಈ ಬಗ್ಗೆ ಮುಂಬೈನ ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ದೂರು (ಚಾರ್ಜ್ಶೀಟ್) ಸಲ್ಲಿಸಿದೆ.
ಪ್ರಾಸಿಕ್ಯೂಷನ್ ದೂರಿನಲ್ಲಿ, ಇಡಿ ಡಿ-ಕಂಪನಿಯೊಂದಿಗೆ ಮಲಿಕ್ ಅವರ ಆಪಾದಿತ ಸಂಪರ್ಕವನ್ನು ವಿಸ್ತಾರವಾಗಿ ಉಲ್ಲೇಖಿಸಿದೆ ಮತ್ತು 1996 ರಲ್ಲಿ ಕುರ್ಲಾ ವೆಸ್ಟ್ನಲ್ಲಿರುವ ಗೋವಾಲಾ ಕಟ್ಟಡದ ಕಾಂಪೌಂಡ್ ಅನ್ನು ಆಕ್ರಮಿಸಿಕೊಳ್ಳಲು ಪಿತೂರಿ ನಡೆಸಿದೆ ಎಂದಿದೆ.
ಮುಂಬೈ ಮತ್ತು ದೇಶದ ಇತರ ಪ್ರದೇಶಗಳಲ್ಲಿ ಸಕ್ರಿಯವಾಗಿರುವ ಗ್ಯಾಂಗ್ಗಳ ಕುರಿತು ದಾವೂದ್ ಇಬ್ರಾಹಿಂ ಅವರ ಸೋದರಳಿಯ ಅಲಿಶಾ ಪಾರ್ಕರ್ ಅವರನ್ನು ಸೋಮವಾರ ಮುಂಬೈನಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. 2014ರಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾವೂದ್ನ ಸಹೋದರಿ ಹಸೀನಾ ಪರ್ಕರ್ ಅವರ ಪುತ್ರನೇ ಈ ಅಲಿಶಾ ಪಾರ್ಕರ್. ದಾವೂದ್ ಸೋದರಳಿಯ ಇಡಿಗೆ ಈ ಹೇಳಿಕೆಯನ್ನು ನೀಡಿದ್ದಾರೆ.

ದಾವೂದ್ ಇಬ್ರಾಹಿಂ ಅವರ ಸೋದರಳಿಯ ಅಲಿಶಾ ಪಾರ್ಕರ್ ಅವರು ಮಲಿಕ್ ವಿರುದ್ಧದ ಪಿಎಂಎಲ್ಎ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಪಿಎಂಎಲ್ಎ ಕಾಯ್ದೆಯ ಸೆಕ್ಷನ್ 50 ರ ಅಡಿಯಲ್ಲಿ ಇಡಿಗೆ ಹೇಳಿಕೆ ನೀಡಿದ್ದರು. ದಾವೂದ್ ಇಬ್ರಾಹಿಂ ಜೊತೆ ತನ್ನ ತಾಯಿ ದೀರ್ಘ ಕಾಲದಿಂದ ಹಣಕಾಸಿನ ವಹಿವಾಟು ನಡೆಸುತ್ತಿದ್ದರು ಎಂದು ಅಲಿಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರು ತಮ್ಮ ತಾಯಿಯ ಸಹವರ್ತಿಗಳಲ್ಲಿ ಒಬ್ಬರಾಗಿದ್ದ ಸಲೀಂ ಪಟೇಲ್ ಅವರನ್ನೂ ಉಲ್ಲೇಖಿಸಿದ್ದಾರೆ. ಸಲೀಂ ಪಟೇಲ್ ಈರುಳ್ಳಿ ವ್ಯಾಪಾರಿ ಮತ್ತು ತಾಯಿಯೊಂದಿಗೆ ಆಸ್ತಿ ವ್ಯವಹಾರದಲ್ಲಿ ತೊಡಗಿದ್ದರು ಎಂದು ಹೇಳಿದ್ದಾರೆ. ಹಸೀನಾ ಪರ್ಕರ್ ಮತ್ತು ಸಲೀಂ ಪಟೇಲ್ ಗೋವಾಲಾ ಬಿಲ್ಡಿಂಗ್ನಲ್ಲಿ ವಿವಾದವನ್ನು ಬಗೆಹರಿಸಿದ್ದಾರೆ ಮತ್ತು ಅಲ್ಲಿ ಕಚೇರಿಯನ್ನು ತೆರೆಯುವ ಮೂಲಕ ಕಾಂಪೌಂಡ್ನ ಭಾಗವನ್ನು ತೆಗೆದುಕೊಂಡಿದ್ದಾರೆ ಎಂದು ಅಲಿಶಾ ಹೇಳಿದ್ದಾರೆ.

ನಂತರ, ಪಾರ್ಕರ್ ತನ್ನ ನಿಯಂತ್ರಣದಲ್ಲಿರುವ ಗೋವಾಲಾ ಕಟ್ಟಡದ ಒಂದು ಭಾಗವನ್ನು ನವಾಬ್ ಮಲಿಕ್ಗೆ ಮಾರಾಟ ಮಾಡಿದರು. ನವಾಬ್ ಮಲಿಕ್ ತನ್ನ ತಾಯಿ ಮತ್ತು ಪಟೇಲ್ಗೆ ಪಾವತಿಸಿದ ಹಣದ ಬಗ್ಗೆ ಅಲಿಶಾ ಅವರಿಗೆ ತಿಳಿದಿರಲಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಶುಕ್ರವಾರ ವಿಶೇಷ ನ್ಯಾಯಾಲಯವು ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯದ ಆರೋಪಪಟ್ಟಿಯನ್ನು ಗಮನಕ್ಕೆ ತೆಗೆದುಕೊಂಡಿತು. ಮಲಿಕ್ ನೇರವಾಗಿ ಮತ್ತು ಉದ್ದೇಶಪೂರ್ವಕವಾಗಿ ಹಣ ವರ್ಗಾವಣೆ ಮತ್ತು ಕುರ್ಲಾದಲ್ಲಿರುವ ಗೋವಾಲಾ ಕಾಂಪೌಂಡ್ ಅನ್ನು ಆಕ್ರಮಿಸಲು ಇತರರೊಂದಿಗೆ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಸೂಚಿಸಲು ಪ್ರಾಥಮಿಕ ಸಾಕ್ಷ್ಯವಿದೆ ಎಂದು ಹೇಳಿದೆ. ಹೀಗಾಗಿ ನ್ಯಾಯಾಲಯವು ಅವರ ವಿರುದ್ಧ ಮತ್ತು 1993 ರ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಸರ್ದಾರ್ ಶಹವಾಲಿ ಖಾನ್ ವಿರುದ್ಧ ಪ್ರಕ್ರಿಯೆಯನ್ನು ಹೊರಡಿಸಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications