ಮಹಾರಾಷ್ಟ್ರಕ್ಕೆ ಫಡ್ನವಿಸ್ ಸಿಎಂ, ಮತ್ತಿಬ್ಬರು ಡಿಸಿಎಂ: ಮೂಲಗಳಿಂದ ಮಾಹಿತಿ
ಮುಂಬೈ, ಅಕ್ಟೋಬರ್ 31: ಸಾಕಷ್ಟು ಕುತೂಹಲ ಕೆರಳಿಸಿರುವ ಮಹಾರಾಷ್ಟ್ರದ ಸರ್ಕಾರ ರಚನೆಯ ಕಸರತ್ತು ಕೊನೆಗೂ ಒಂದು ತಾರ್ಕಿಕ ಅಂತ್ಯ ಕಾಣುವ ಲಕ್ಷಣಗಳು ಕಾಣಿಸುತ್ತಿವೆ.
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರನ್ನು ಪೂರ್ಣಾವಧಿಗೆ ಆರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳನ್ನು ನೇಮಿಸುವ ನಿರ್ಧಾರಕ್ಕೂ ಬಿಜೆಪಿ, ಶಿವಸೇನೆ ಮೈತ್ರಿಕೂಟ ಬಂದಿದೆ ಎನ್ನಲಾಗಿದೆ.
ಅಕ್ಟೋಬರ್ 24 ಚುನಾವಣಾ ಫಲಿತಾಂಶ ಹೊರಬಂದರೂ, ಅತಂತ್ರ ವಿಧಾನಸಭೆ ತಲೆದೂರಿದ ಪರಿಣಾಮ ಸರ್ಕಾರ ರಚನೆ ಇನ್ನೂ ಸಾಧ್ಯವಾಗಿಲ್ಲ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಶಿವಸೇನೆ, ಮುಖ್ಯಮಂತ್ರಿ ಹುದ್ದೆಯ ಬೇಡಿಕೆ ಇಟ್ಟಿದ್ದರಿಂದ ಮೈತ್ರಪಕ್ಷಗಳ ನಡುವೆ ಕೊಂಚ ಬಿರುಕು ಏರ್ಪಟ್ಟಿತ್ತು.

ಆದರೆ ಇದೀಗ ಉಭಯ ಪಕ್ಷಗಳೂ ಒಂದು ನಿರ್ಧಾರಕ್ಕೆ ಬಂದಿದ್ದು, ಫಡ್ನವಿಸ್ ಮುಖ್ಯಮಂತ್ರಿಯಾಗಿಯೇ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ಶಿವಸೇನೆಗೆ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಸರ್ಕಾರದಲ್ಲಿ ಮಹತ್ವದ ಖಾತೆಗಳನ್ನು ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.
ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳಲ್ಲಿ ಜಯಗಳಿಸಿವೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ನಂಬರ್ 145. ಆದರೆ ಬಿಜೆಪಿ ಏಕಾಂಗಿಯಾಗಿ ಈ ಸ್ಥಾನ ಪಡೆಯಲು ಅಶಕ್ತವಾಗಿದ್ದರಿಂದ ಶಿವಸೇನೆಯ ಬೆಂಬಲಬಿಜೆಪಿಗೆ ಅನಿವಾರ್ಯವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications