ಮಹಾರಾಷ್ಟ್ರ ಚುನಾವಣಾ ರ್ಯಾಲಿಯಲ್ಲಿ ಮೋದಿ ವಿರುದ್ದ ರಾಹುಲ್ ಮಿಂಚು, ಗುಡುಗು
ಮುಂಬೈ, ಅ 15: ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿದ ಮೇಲೂ, ಸಂಸದ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಪಕ್ಷದ ಪರವಾಗಿ ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ವಾರ್ಧಾದಲ್ಲಿ ಮಂಗಳವಾರ ಚುನಾವಣಾ ರ್ಯಾಲಿಯಲ್ಲಿ, ಮತ್ತೆ ಅಪನಗದೀಕರಣ ಮತ್ತು ಸರಕು, ಸೇವಾ ತೆರಿಗೆಯ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರಕಾರವನ್ನು ಕಟುವಾದ ಶಬ್ದದಲ್ಲಿ ಟೀಕಿಸಿದ್ದಾರೆ.
"ಕೆಲವೇ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರು ಕಾರ್ಪೋರೇಟ್ ಟ್ಯಾಕ್ಸ್ ಅನ್ನು ರದ್ದು ಮಾಡಿದ್ದಾರೆ. ದೇಶದ ಹದಿನೈದು ಶ್ರೀಮಂತ ಉದ್ಯಮಿಗಳ ತೆರಿಗೆಯ ಮೊತ್ತವಾದ 1,25,000 ಕೋಟಿ ಹಣವನ್ನೂ ಮನ್ನಾ ಮಾಡಿದ್ದಾರೆ" ಎಂದು ರಾಹುಲ್ ಸಭೆಯಲ್ಲಿ ಹೇಳಿದರು.

"ಕಳೆದ ಐದು ವರ್ಷಗಳಲ್ಲಿ ದೇಶದ ಶ್ರೀಮಂತ ಉದ್ಯಮಿಗಳ 5,50,000 ಕೋಟಿ ಸಾಲವನ್ನು ಮನ್ನಾ ಮಾಡಲಾಗಿದೆ. ಅದಾನಿಗೆ ದೇಶದ ಎಲ್ಲಾ ಬಂದರು, ಏರ್ಪೋರ್ಟ್ ಗಳ ಜವಾಬ್ದಾರಿಯನ್ನು ನೀಡಲಾಗುತ್ತಿದೆ. ಸರಕಾರೀ ಸಂಸ್ಥೆಗಳನ್ನೆಲ್ಲಾ ಖಾಸಗೀಕರಣ ಮಾಡಲು ಮೋದಿ ಹೊರಟಿದ್ದಾರೆ" ಎಂದು ಸಭೆಯಲ್ಲಿ, ಕೇಂದ್ರದ ವಿರುದ್ದ ರಾಹುಲ್ ಗುಡುಗಿದರು.
"ರೈತರು ಒದ್ದಾಡುತ್ತಿರಲಿ, ಯುವಕರು ಕೆಲಸವಿಲ್ಲದೇ ಓಡಾಡುತ್ತಿದ್ದರೂ, ಇದರಿಂದ ಮೋದಿಗೆ ಯಾವ ವ್ಯತ್ಯಾಸವೂ ಇಲ್ಲ. ಆದಿವಾಸಿ ಬಿಲ್ ಅನ್ನು ಬದಲಿಸಲು ಹೊರಟಿದ್ದಾರೆ. ಆದರೆ, ಜಿಎಸ್ಟಿ ಎನ್ನುವುದು ಕಾನೂನು ಅದನ್ನು ಹೇಗೆ ಬದಲಿಸುವುದು ಎಂದು ಹಣಕಾಸು ಸಚಿವರು ಹೇಳುತ್ತಾರೆ" ಎಮ್ದು ರಾಹುಲ್ ವ್ಯಂಗ್ಯವಾಡಿದರು.
"ಬಡವರಿಗಾಗಿರುವ ಕಾನೂನನ್ನು ಎರಡು ನಿಮಿಷದಲ್ಲಿ ಬದಲಿಸುವ ಮೋದಿಗೆ ಇದೆಲ್ಲಾ ಬೇಕಾಗಿಲ್ಲ. ಸಣ್ಣ ಮತ್ತು ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಹಾಕುವ ಜಿಎಸ್ಟಿ ಕಾನೂನನ್ನು ಮಾತ್ರ ಇವರಿಗೆ ಬದಲಿಸಲು ಸಾಧ್ಯವಿಲ್ಲ" ಎಂದು ರಾಹುಲ್ ಆಕ್ರೋಶ ವ್ಯಕ್ತ ಪಡಿಸಿದರು.
"ನೋಟ್ ಬ್ಯಾನ್ ಮತ್ತು ಗಬ್ಬರ್ ಸಿಂಗ್ ಟ್ಯಾಕ್ಸ್ ನಿಂದ ಯಾರಿಗೂ ಲಾಭವಾಗಿಲ್ಲ. ನಿಮಗೂ ಅದರ ಅನುಭವವಾಗಿರಬೇಕು" ಎಂದು ರಾಹುಲ್, ಚುನಾವಾಣಾ ರ್ಯಾಲಿಯಲ್ಲಿ, ಮೋದಿ ವಿರುದ್ದ ಕಿಡಿಕಾರಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications