"ಭಾರತೀಯ ಮಹಿಳೆಯರು ಸುಳ್ಳು ದೂರು ನೀಡುವ ಸಂಭವ ತೀರಾ ಕಡಿಮೆ"
ಮುಂಬೈ, ಏಪ್ರಿಲ್ 07: "ಭಾರತೀಯ ಮಹಿಳೆಯರು ಸುಳ್ಳು ದೂರು ನೀಡುವುದು ತೀರಾ ಕಡಿಮೆ. ದೂರು ನೀಡುವಲ್ಲಿ ವಿಳಂಬವಾಯಿತೆಂದು ಆ ದೂರು ಸುಳ್ಳು ಎಂದು ನಿರ್ಧರಿಸುವುದು ತಪ್ಪು" ಎಂದು ಮುಂಬೈ ಹೈ ಕೋರ್ಟ್ ಹೇಳಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಸಾಮೂಹಿನ ಅತ್ಯಾಚಾರ ಪ್ರಕರಣವೊಂದರಲ್ಲಿ ನಾಲ್ವರು ಆರೋಪಿಗಳು ದೋಷಿಗಳು ಎಂದು ಅಧೀನ ನ್ಯಾಯಾಲಯವೊಂದು ನೀಡಿದ ತೀರ್ಪನ್ನು ಎತ್ತಿಹಿಡಿದ ಬಾಂಬೆ ಹೈ ಕೋರ್ಟ್, ಈ ರೀತಿ ಹೇಳಿದೆ.
ಮಾರ್ಚ್ 15, 2012 ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರವೊಂದರಲ್ಲಿ ಪೊಲೀಸರಿಗೆ ದೂರು ನೀಡದಂತೆ ಮಹಿಳೆಗೆ ಬೆದರಿಕೆ ಒಡ್ಡಲಾಗಿತ್ತು. ಆದರೂ ಅತ್ಯಾಚಾರ ನಡೆದ ಎರಡು ದಿನದ ನಂತರ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ಈ ಆರೋಪವನ್ನು ತಳ್ಳಿಹಾಕಿದ ಆರೋಪಿಗಳು, 'ಅತ್ಯಾಚಾರ ನಡೆದ ಎರಡು ದಿನದವರೆಗೆ ಆಕೆ ದೂರು ನೀಡದೆ ಇದ್ದಿದ್ಯಾಕೆ? ಆಕೆ ಸುಳ್ಳು ಆರೋಪ ಮಾಡುತ್ತಿದ್ದಾಳೆ' ಎಂದು ವಿಚಾರಣೆಯ ಸಮಯದಲ್ಲಿ ದೂರಿದ್ದರು.

ಇದಕ್ಕೆ ಪ್ರತಿಕ್ರೆ ನೀಡಿದ ಕೋರ್ಟು, 'ಒಬ್ಬ ಮಹಿಳೆ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಸುಳ್ಳು ದೂರು ನೀಡಲಾರಳು. ಅಂಥ ಪ್ರಕರಣಗಳು ತೀರಾ ಅಪರೂಪ. ಕೆಲವು ಅನಿವಾರ್ಯ ಕಾರಣ ಅಥವಾ ಒತ್ತಡದಿಂದ ದೂರು ನೀಡುವುದು ವಿಳಂಬವಾಗಬಹುದು. ಇದರಿಂದ ವೈದ್ಯಕೀಯ ಪರೀಕ್ಷೆಗೆ ತೊಂದರೆಯಾಗುತ್ತದೆ, ಸ್ಪಷ್ಟತೆ ಇರುವುದಿಲ್ಲ ಎಂಬುದು ನಿಜ. ಆದರೆ ದೂರು ನೀಡುವಲ್ಲಿ ವಿಳಂಬವಾಯ್ತು ಎಂದು ಮಹಿಳೆಯ ಆರೋಪವೇ ಸುಳ್ಳು ಎಂದು ನಿರ್ಧರಿಸುವುದು ತಪ್ಪು' ಎಂದು ಕೋರ್ಟು ಹೇಳಿದೆ.
ಅಧೀನ ನ್ಯಾಯಾಲಯ ಆ ನಾಲ್ಕು ಅತ್ಯಾಚಾರಿಗಳಿಗೆ ನೀಡಿದ 10 ವರ್ಷಗಳ ಜೈಲು ಶಿಕ್ಷೆಯನ್ನು ಹೈ ಕೋರ್ಟ್ ಎತ್ತಿಹಿಡಿದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications