ಅವಹೇಳನಾಕಾರಿ ಜಾಹೀರಾತು: ನಟ ಅಕ್ಷಯ್ ಕುಮಾರ್ ವಿರುದ್ಧ ಮರಾಠ ಸಂಘಟನೆ ದೂರು
ಔರಂಗಾಬಾದ್, ಜನವರಿ 11: ವಾಷಿಂಗ್ ಪೌಡರ್ನ ಜಾಹೀರಾತಿನಲ್ಲಿ ಮರಾಠ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮಹಾರಾಷ್ಟ್ರದ ನಾಂಡೇದ್ನಲ್ಲಿ ಮರಾಠ ಸಂಘಟನೆಯೊಂದು ಜಿಲ್ಲಾ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದೆ.
'ನಿರ್ಮಾ ವಾಷಿಂಗ್ ಪೌಡರ್' ಜಾಹೀರಾತಿನಲ್ಲಿ ಮರಾಠ ಯೋಧರಂತೆ ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಈ ಜಾಹೀರಾತಿನ ಪ್ರಸ್ತುತಿಯು ಮರಾಠ ಸೈನಿಕರನ್ನು ಅವಮಾನಿಸಿದೆ ಎಂದು ನಾಂಡೇದ್ ಜಿಲ್ಲಾಧಿಕಾರಿ ಮತ್ತು ವಜಿರಾಬಾದ್ ಪೊಲೀಸರಿಗೆ ಗುರುವಾರ ಪತ್ರ ಸಲ್ಲಿಸಿರುವ ಸಂಭಾಜಿ ಬ್ರಿಗೇಡ್, ಅಕ್ಷಯ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದೆ.
ಜಾಹೀರಾತಿನಲ್ಲಿ, ನಟ ಅಕ್ಷಯ್ ಕುಮಾರ್ ಮರಾಠಾ ರಾಜನ ಪಾತ್ರದಲ್ಲಿ ಕಾಣಿಸಿದ್ದಾರೆ. ಯುದ್ಧದಲ್ಲಿ ಗೆದ್ದು ತಮ್ಮ ಸೇನೆಯೊಂದಿಗೆ ಅರಮನೆಗೆ ಬರುವ ರಾಜನನ್ನು ಕೊಳೆ ಬಟ್ಟೆಯ ಬಗ್ಗೆ ರಾಣಿ ಲೇವಡಿ ಮಾಡುತ್ತಾಳೆ. ಬಳಿಕ ರಾಜ ಹಾಗೂ ಇತರೆ ಸೈನಿಕರು ನರ್ತಿಸುತ್ತಾ ತಮ್ಮ ಬಟ್ಟೆಗಳನ್ನು ತಾವೇ ಒಗೆಯುವ ದೃಶ್ಯವನ್ನು ತೋರಿಸಲಾಗಿದೆ.

ಈ ಜಾಹೀರಾತಿನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಂಭಾಜಿ ಬ್ರಿಗೇಡ್ ಸಲ್ಲಿಸಿರುವ ಪತ್ರವನ್ನು ವರಿಷ್ಠಾಧಿಕಾರಿಗಳ ಕಚೇರಿಗೆ ಕಳುಹಿಸಿರುವುದಾಗಿ ವಜಿರಾಬಾದ್ ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಈ ಜಾಹೀರಾತಿನಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಾಯ್ಕಾಟ್ ನಿರ್ಮಾ ಎಂಬ ಹ್ಯಾಷ್ ಟ್ಯಾಗ್ ಟ್ರೆಂಡ್ ಆಗುತ್ತಿದೆ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications