ಮೋದಿ ಬಜೆಟ್ ಬಗ್ಗೆ ಮೂಡೀಸ್ ಗಿಲ್ಲ ಉತ್ತಮ ಅಭಿಪ್ರಾಯ!
ಮುಂಬೈ, ಫೆಬ್ರವರಿ 02: ಲೋಕಸಭಾ ಚುನಾವಣೆಗೂ ಮುನ್ನ ಮೋದಿ ಸರ್ಕಾರ ಮಂದಿಸಿದ ಬಜೆಟ್ ಬಗ್ಗೆ ಮಧ್ಯಮ ವರ್ಗದವರಂತೂ ಖುಷಿ ವ್ಯಕ್ತಪಡಿಸಿದ್ದಾರೆ.
ಆದರೆ ಜಾಗತಿಕ ರೇಟಿಂಗ್ ಏಜೆನ್ಸಿಯಾದ ಮೂಡೀಸ್ ಈ ಬಜೆಟ್ ಆರ್ಥಿಕತೆಯ ಮೇಲೆ ಬೀರಬಹುದಾದ ಋಣಾತ್ಮಕ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

"ಕೇಂದ್ರದ ಮಧ್ಯಂತರ ಬಜೆಟ್ ನಲ್ಲಿ ವಿತ್ತೀಯ ಕೊರತೆಯನ್ನು ನೀಗಿಸಲು ಯಾವುದೇ ಕ್ರಮಗಳಿಲ್ಲ. ಆದಾಯ ಸೃಷ್ಟಿಗೆ ಯಾವುದೇ ಯೋಜನೆಗಳಿಲ್ಲ. ಬದಲಾಗಿ ಸರ್ಕಾರದ ವೆಚ್ಚವೇ ಆದಾಯಕ್ಕಿಂತ ಹೆಚ್ಚಾಗುವುದರಿಂದ ಇದು ಆರ್ಥಿಕತೆಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ವಿತ್ತೀಯ ಕೊರತೆ ಬಹುದೊಡ್ಡ ಸಮಸ್ಯೆಯಾಗಬಹುದು" ಎಂದು ಮೂಡೀಸ್ ಹೇಳಿದೆ.
ಮಧ್ಯಂತರ ಬಜೆಟ್ 2019: ಆದಾಯ ತೆರಿಗೆ ಮಿತಿಯಲ್ಲಿ ಏರಿಕೆ
2019 ರ ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಮುನ್ನ ಮೋದಿ ಸರ್ಕಾರ ಈ ಅವಧಿಯಲ್ಲಿ ಮಂಡಿಸಿದ ಕೊನೆಯ ಬಜೆಟ್ ಇದಾಗಿದ್ದು, ನಿರೀಕ್ಷೆಯಂತೆಯೇ ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದು ತಿಳಿಯುತ್ತದೆ.
ಮಧ್ಯಮ ವರ್ಗ, ರೈತರು ಮತ್ತು ಕಾರ್ಮಿಕರನ್ನೇ ತನ್ನ ಆದ್ಯತೆಯನ್ನಾಗಿಸಿಕೊಂಡಿರುವುದು ಬಿಜೆಪಿಯ ಚುನಾವಣಾ ಅಸ್ತ್ರವೇ ಅನ್ನಿಸುತ್ತದೆ. ಆದರೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಆರ್ಥಿಕತೆಯ ಮೇಲೆ ಹೆಚ್ಚು ಋಣಾತ್ಮಕ ಪರಿಣಾಮವನ್ನೇ ಬೀರಬಹುದು ಎಂಬ ಕಳವಳವನ್ನು ಮೂಡೀಸ್ ವ್ಯಕ್ತಪಡಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications