ಸ್ಪಾಟ್ ಫಿಕ್ಸಿಂಗ್: ಗುರುನಾಥ್ ಮತ್ತೆ ಕಟಂಕ ಶುರು
ಮುಂಬೈ, ಸೆ.21:ಇಂಡಿಯನ್ ಪ್ರೀಮಿಯರ್ ಲೀಗ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಕುರಿತ ಮುಂಬೈ ಪೊಲೀಸರ ಚಾರ್ಚ್ ಶೀಟ್ ನಲ್ಲಿ 22 ಆರೋಪಿಗಳು ಸೇರಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಬಿಸಿಸಿಐ ಮುಖ್ಯಸ್ಥ ಎನ್. ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ವಿಂದೂ ದಾರಾ ಸಿಂಗ್ ಹೆಸರುಗಳು ಸೇರಿವೆ. ಪಾಕಿಸ್ತಾನದ ಅಂಪೈರ್ ಅಸದ್ ರೌಫ್ ಹೆಸರು ಕೂಡಾ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಭಾನುವಾರ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಗಳಿವೆ.
ಎಲ್ಲ 22 ಆರೋಪಿಗಳ ವಿರುದ್ಧ ವಂಚನೆ, ಜೂಜು, ಸಂಚು ಹಾಗೂ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಬೆಟ್ಟಿಂಗ್ ನಡೆಸಿರುವ ಬಗ್ಗೆ ಸಾಕ್ಷ್ಯಗಳಿವೆ ಎಂದು ಮೂಲಗಳು ತಿಳಿಸಿವೆ. ನಿರ್ದಿಷ್ಟ ಹಣಕಾಸು ವ್ಯವಹಾರ ಮತ್ತು ಧ್ವನಿ ಮುದ್ರಣಗಳನ್ನು ಆಧರಿಸಿಯೇ ಚಾರ್ಜ್ ಶೀಟ್ ಸಿದ್ಧಪಡಿಸಲಾಗಿದೆಯಂತೆ.
ಆದರೆ, ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಪಾಕಿಸ್ತಾನದ ಮಾಜಿ ಅಂಪೈರ್ ಅಸಾದ್ ರೌಫ್ ವಿರುದ್ಧ ಚಾರ್ಜ್ ಶೀಟ್ ನಲ್ಲಿ ಹೆಚ್ಚಿನ ವಿವರಗಳಿಲ್ಲ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಲಭ್ಯ ಮಾಹಿತಿ ಆಧಾರಿಸಿ ಅಸದ್ ರೌಫ್ ಆವರ ಹೆಸರು ಸೇರ್ಪಡೆಗೊಳಿಸುವ ಬಗ್ಗೆ ಗೊಂದಲ ಇದೆ. ಪಾಕಿಸ್ತಾನದ ಬುಕ್ಕಿಗಳನ್ನು ಗುರುತಿಸಬೇಕಾಗಿದೆ. ಪಾಕ್ ಬುಕ್ಕಿಗಳು ಮತ್ತು ಪ್ರಕರಣದಲ್ಲಿ ಅವರ ಪಾತ್ರ ಕುರಿತು ತನಿಖೆ ನಡೆಸಬೇಕಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ನ ಮಾಲೀಕರಾಗಿರುವ ಎನ್. ಶ್ರೀನಿವಾಸನ್ ಅಳಿಯ ಮೇಯಪ್ಪನ್ ವಿರುದ್ಧ ವಂಚನೆ ಮತ್ತು ಬೆಟ್ಟಿಂಗ್ ಆರೋಪ ಎದುರಿಸಲಿದ್ದಾರೆ. ಆರೋಪಿಗಳ ಮೇಲೆ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಸೆಕ್ಷನ್ 4 ಹಾಗೂ 5 ಹಾಗೂ ಜೂಜು ನಿಯಂತ್ರಣ ಕಾಯ್ದೆ ಸೆಕ್ಷನ್ 465,466,468,471,490, ಐಪಿಸಿ ಸೆಕ್ಷನ್ 420,212,120ಬಿ ಹಾಗೂ 34ರ ಅನ್ವಯ ಕೇಸು ದಾಖಲಿಸಿ ದೋಷಾರೋಪಣ ಪಟ್ಟಿಯಲ್ಲಿ ಹೆಸರಿಸಲಾಗಿದೆ.
ಪೊಲೀಸರು 92 ಮೊಬೈಲ್ ಫೋನ್ 18 ಸಿಮ್ ಕಾರ್ಡ್, ಲ್ಯಾಪ್ ಟಾಪ್ ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದು, ಪಾಕಿಸ್ತಾನ, ದುಬೈ ಹಾಗೂ ಭಾರತದ ಬುಕ್ಕಿಗಳ ವಿಚಾರಣೆ ನಡೆಸಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications