'ಮಹಾ'ದಲ್ಲಿ ಬಿಜೆಪಿ ಸರ್ಕಾರ ರಚಿಸಲು ಕಾರಣ ಅಮಿತ್ ಶಾ ಅಲ್ಲ.. ಇನ್ಯಾರು..?
ಮುಂಬೈ. ನವೆಂಬರ್ 24: ಮಹಾರಾಷ್ಟ್ರದಲ್ಲಿ ಇನ್ನೇನು ಶಿವಸೇನೆ-ಕಾಂಗ್ರೆಸ್-ಎನ್ಸಿಪಿ ಸರ್ಕಾರ ರಚಿಸಿಯೇ ಬಿಟ್ಟವು, ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿಬಿಟ್ಟರು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ದಿನಬೆಳಗಾಗುವಷ್ಟರಲ್ಲಿ ಅಲ್ಲಿ ನಡೆದಿದ್ದೆ ಬೇರೆ.
ಯಾರೂ ಕಲ್ಪನೆ ಮಾಡಿರದ ರೀತಿಯಲ್ಲಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ, ಎನ್ಸಿಪಿ ನಾಯಕ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿಬಿಟ್ಟಿದ್ದರು.
ಮಹಾರಾಷ್ಟ್ರದಲ್ಲಿ ನಡೆದ ಈ ಮಧ್ಯರಾತ್ರಿಯ ಪೊಲಿಟಿಕಲ್ ಹೈಡ್ರಾಮಾ ನಡೆಯಲು ಕಾರಣ ಯಾರು ಎಂದು ಊಹಿಸಿಕೊಂಡರೆ ನಿಮ್ಮ ಕಣ್ಮುಂದೆ ಬರುವುದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ.

ಆದರೆ ಅವರು ನೇರವಾಗಿ ಕಾರ್ಯಚರಣೆಗೆ ಇಳಿದಿರಲಿಲ್ಲ, ಶಾ ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸದವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಭೂಪೇಂದ್ರ ಸಿಂಗ್ ಯಾದವ್.
ಅಮಿತ್ ಶಾರ ನಂಬಿಕಸ್ಥ ಬಂಟನಾಗಿರುವ ಭೂಪೇಂದ್ರ ಸಿಂಗ್ ಯಾದವ್ ಕಳೆದ ಲೋಕಸಭಾ ಚುನಾವಣೆಯಲ್ಲಿ ತೆರೆಮರೆಯಲ್ಲಿ ರಣತಂತ್ರ ಹೆಣೆದು, ಬಿಜೆಪಿಗೆ ಕಷ್ಟವೆನಿಸಿದ್ದ ರಾಜ್ಯಗಳಲ್ಲಿಯೂ ಹೆಚ್ಚು ಸ್ಥಾನ ಗೆಲ್ಲುವಂತೆ ಮಾಡಿದವರು.

ಪಕ್ಷ ಕೊಟ್ಟ ಕೆಲಸವನ್ನು ಪೂರ್ಣಗೊಳಿಸುವುದರಲ್ಲಿ ಯಾದವ್ ಗೆ ಸರಿಸಾಟಿ ಇಲ್ಲ. ಈಗ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ಗೆ ಅದೃಷ್ಟ ತಂದಿಡುವಲ್ಲಿ ಯಾದವ್ ಪಾತ್ರ ಮಹತ್ವದ್ದು.
ಭೂಪೇಂದ್ರ ಯಾದವ್ ಅವಿಶ್ರಾಂತ ಶ್ರಮದಿಂದಾಗಿ ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚಿಸಿದೆ. ಆದರೆ ಈ ಸರ್ಕಾರ ಸದ್ಯ ಅತಂತ್ರದಲ್ಲಿದೆ. ಇನ್ನೂ ಬಹುಮತ ವಿಶ್ವಾಸ ವ್ಯಕ್ತಪಡಿಸಿಲ್ಲ.
ಎನ್ಸಿಪಿ ಶಾಸಕರ ನಡೆ ಯಾವ ಕಡೆ ಅನ್ನೋದು ನಿರ್ಧಾರವಾಗಿಲ್ಲ. ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ಕೊಡುವಲ್ಲಿ ಯಾದವ್ ರ ಅವಿರತ ಯತ್ನ ಅಲ್ಲಗೆಳೆಯುವಂತಿಲ್ಲ. ಈ ಮೂಲಕ ಶಾ ಇಟ್ಟ ವಿಶ್ವಾಸವನ್ನು ಯಾದವ್ ಉಳಿಸಿಕೊಂಡ್ರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications