ರಾಮಮಂದಿರ ನಿರ್ಮಾಣ ಕೂಡಾ 'ಜೂಮ್ಲಾ' : ಉದ್ಧವ್ ಠಾಕ್ರೆ

ಮುಂಬೈ, ನವೆಂಬರ್ 20: "ಮೊದಲು ಮಂದಿರ, ನಂತರ ಸರ್ಕಾರ. ಇದು ಎಲ್ಲ ಹಿಂದುಗಳ ಬೇಡಿಕೆ. ಹಾಗಾಗಿ ಆದಷ್ಟು ಬೇಗ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಬೇಕು" ಎಂದು ಘೋಷಿಸಿದ್ದ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಇಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಮೋದಿ ಭರವಸೆಗಳೆಲ್ಲವೂ ಚುನಾವಣೆ ಕಾಲದ ಪೊಳ್ಳು ಆಶ್ವಾಸನೆಗಳು ಎಂದು ಜೂಮ್ಲಾ ಎಂಬ ಪದದೊಂದಿಗೆ ಕೆಣಕುತ್ತಿದ್ದ ಕಾಂಗ್ರೆಸ್ಸಿಗರಂತೆ ಉದ್ಧವ್ ಠಾಕ್ರೆ ಕೂಡಾ ಬಿಜೆಪಿಯ ಕಾಲೆಳೆದಿದ್ದಾರೆ.

ಮುಂಬೈನಲ್ಲಿ ನಡೆದ ಶಿವಸೇನೆಯ ಸಮಾವೇಶವೊಂದರಲ್ಲಿ ಮಾತನಾಡಿದ ಉದ್ಧವ್​ ಠಾಕ್ರೆ, "ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣ ಬಂದು ಬೀಳುತ್ತದೆ ಎಂದಿದ್ದ ಕೇಂದ್ರ ಸರ್ಕಾರದ ಭರವಸೆ ಎಷ್ಟು ಸುಳ್ಳೋ, ರಾಮ ಮಂದಿರ ನಿರ್ಮಾಣವಾಗುತ್ತದೆ ಎಂಬ ಭರವಸೆಯೂ ಅಷ್ಟೇ ಸುಳ್ಳು ಇರಬಹುದು' ಎಂದು ಕಿಚಾಯಿಸಿದ್ದಾರೆ.

Is Ram Mandir Also A Jumla, Questions Uddhav Thackeray

"ರಾಮ ಮಂದಿರದ ವಿಚಾರವನ್ನು ನಾವು ಕೈಗೆತ್ತಿಕೊಂಡಾಗ, ಮಂದಿರವನ್ನು ನಿಜವಾಗಿಯೂ ನಿರ್ಮಾಣ ಮಾಡುವುದಷ್ಟೇ ನಮ್ಮ ಉದ್ದೇಶವಾಗಿತ್ತು. ಆದರೆ, ರಾಮ ಮಂದಿರದ ವಿಚಾರ ಪ್ರತಿ ಚುನಾವಣೆ ಹೊತ್ತಲ್ಲೂ ಚರ್ಚೆಗೆ ಬರುತ್ತದೆ. ಚುನಾವಣೆ ಮುಕ್ತಾಯವಾಗುತ್ತಿದ್ದಂತೆ ಎಲ್ಲರೂ ಮರೆತುಬಿಡುತ್ತಾರೆ' ಎಂದು ವಿಷಾದ ವ್ಯಕ್ತಪಡಿಸಿದರು.

ನವೆಂಬರ್ 25ರಂದು ಅಯೋಧ್ಯೆಗೆ ಭೇಟಿ ನೀಡಲಿರುವ ಉದ್ಧವ್ ಠಾಕ್ರೆ ಅವರು ವಿಶ್ವ ಹಿಂದೂ ಪರಿಷತ್ ಸಹಯೋಗದೊಂದಿಗೆ ಬೃಹತ್ ಸಮಾವೇಶ ಆಯೋಜಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+