ಐಎಸ್ಐಎಸ್ ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು
ಬೆಂಗಳೂರು, ಜನವರಿ 23 : ದೇಶಾದ್ಯಂತ ಶುಕ್ರವಾರ ಎನ್ಐಎ ನಡೆಸಿದ ಕಾರ್ಯಾಚರಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯ (ಐಎಸ್ಐಎಸ್) ಉಗ್ರ ಸಂಘಟನೆಗೆ ಬೆಂಬಲ ನೀಡುತ್ತಿದ್ದ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಉಗ್ರರು ಮುಂಬೈನಿಂದ ಬರುವ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದರು.
ಶುಕ್ರವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನಡೆಸಿದ ದಾಳಿಯಲ್ಲಿ ಹೆಚ್ಚು ಉಗ್ರರನ್ನು ಬಂಧಿಸಿರುವುದು ಕರ್ನಾಟಕದಲ್ಲಿ. ಎಲ್ಲಾ ಶಂಕಿತ ಉಗ್ರರು ಮುಂಬೈನಲ್ಲಿ ನೆಲೆಸಿರುವ ಮುದಬ್ಬೀರ್ ಮುಷ್ತಾಖ್ (34) ಸೂಚನೆಯಂತೆ ಕಾರ್ಯಚರಣೆ ಮಾಡುತ್ತಿದ್ದರು. ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ ಈತ ಇತರ ಉಗ್ರರಿಗೆ ಸೂಚನೆಗಳನ್ನು ನೀಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. [ಉಗ್ರರ ಬಳಿ ಸುಧಾರಿತ ಸ್ಫೋಟಕ ಪತ್ತೆ]

ದೇಶದ ವಿವಿಧ ನಗರಗಳಲ್ಲಿ ನಡೆಸಿದ ದಾಳಿಯ ವೇಳೆ 5 ಶಂಕಿತ ಉಗ್ರರನ್ನು ಬಂಧಿಸಲಾಗಿದೆ. 9 ಶಂಕಿತ ಉಗ್ರರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್ಐಎ ಅಧಿಕಾರಿಗಳು ಹೇಳಿದ್ದಾರೆ. ಮುಸ್ತಾಖ್ ಯೂಸೂಫ್ ಎಂಬಾತನೊಂದಿಗೆ ನಂಟು ಹೊಂದಿದ್ದ ಎಂದು ತನಿಖೆಯಿಂದ ಬಹಿರಂಗವಾಗಿದೆ. [ನನ್ನ ಮಗ ಉಗ್ರನಲ್ಲ, ಅಮಾಯಕ : ತಾಯಿಯ ಕರುಳು]
ಯೂಸೂಫ್ ಭಟ್ಕಳ ಮೂಲದ ಸುಲ್ತಾನ್ ಅರ್ಮರ್ ಸಂಬಂಧಿಯಾಗಿದ್ದಾನೆ. ಸುಲ್ತಾನ್ ಭಾರತದ ಯುವಕರನ್ನು ಐಎಸ್ಐಎಸ್ಗೆ ನೇಮಕ ಮಾಡಿಕೊಳ್ಳಲು ಅನ್ಸರ್-ಉಲ್-ತವಾಹಿದ್ ಎಂಬ ಸಂಘಟನೆಯನ್ನು ಆರಂಭಿಸಿದ್ದ. ಸುಲ್ತಾನ್ ಹತ್ಯೆಯ ಬಳಿಕ ಆತನ ಸಹೋದರ ಶಾಫಿ ಅರ್ಮರ್ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದಾನೆ.
20 ಲಕ್ಷ ಹಣ ಎಲ್ಲಿಂದ ಬಂತು? : ಮುಂಬೈನಲ್ಲಿ ಶುಕ್ರವಾರ ಬಂಧಿಸಲಾದ ಮುದಬ್ಬೀರ್ ಮುಷ್ತಾಖ್ ಎರಡು ವರ್ಷಗಳ ಹಿಂದೆ ಕೆಲಸ ಬಿಟ್ಟಿದ್ದ. ಆದರೆ, ಆತನ ಬ್ಯಾಂಕ್ ಖಾತೆಯಲ್ಲಿ 20 ಲಕ್ಷಕ್ಕೂ ಅಧಿಕ ಹಣವಿದೆ. ಈ ಹಣ ಎಲ್ಲಿಂದ ಬಂತು? ಎಂದು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮುಷ್ತಾಖ್ ವಿವಿಧ ನಗರಗಳಲ್ಲಿ ಬಂಧಿಸಲಾದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ. ಎಲ್ಲಾ ಉಗ್ರರು ದೇಶದಲ್ಲಿ ದಾಳಿ ನಡೆಸುವ ಸಂಚನ್ನು ರೂಪಿಸಿದ್ದರು. ಜನವರಿ 26ರಂದು ವಿವಿಧ ನಗರದಲ್ಲಿ ದಾಳಿ ನಡೆಯುವ ಸಾಧ್ಯತೆ ಇತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಕರ್ನಾಟಕದಲ್ಲಿ ಬಂಧಿಸಲಾದ ಎಲ್ಲಾ ಉಗ್ರರನ್ನು ಇಂದು ಎನ್ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications