ಉದ್ಯೋಗಕ್ಕೆ ಕರೆದು ಅವಮಾನ ಮಾಡಿತೇ ಸ್ಪೈಸ್ ಜೆಟ್?: ಪೈಲಟ್ಗಳ ಆರೋಪ
ಮುಂಬೈ, ಏಪ್ರಿಲ್ 26: ಆರ್ಥಿಕ ಸಂಕಷ್ಟದಿಂದ ಮುಚ್ಚುವ ಸ್ಥಿತಿಗೆ ತಲುಪಿರುವ ಜೆಟ್ ಏರ್ವೇಸ್ ವಿಮಾನಸಂಸ್ಥೆಯ ಸಿಬ್ಬಂದಿಗೆ ಉದ್ಯೋಗ ನೀಡುವುದಾಗಿ ಹೇಳುವ ಮೂಲಕ ಸ್ಪೈಸ್ ಜೆಟ್ ಅವರೆಡೆಗೆ ಸಹಾಯಹಸ್ತ ಚಾಚಿತ್ತು. ಆದರೆ, ಅದೇ ಸ್ಪೈಸ್ ಜೆಟ್ ಹಿರಿಯ ಅಧಿಕಾರಿಯೊಬ್ಬರು ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ತಮಗೆ ಅವಮಾನ ಎಸಗಿದ್ದಾರೆ ಎಂದು ಜೆಟ್ ಏರ್ ವೇಸ್ ಸಿಬ್ಬಂದಿ ಆರೋಪಿಸಿದ್ದಾರೆ.
ಸ್ಪೈಸ್ ಜೆಟ್ನ ಹಿರಿಯ ಸಿಬ್ಬಂದಿಯೊಬ್ಬರು ಇತ್ತೀಚೆಗೆ ನಡೆದ ನೇಮಕಾತಿ ಪ್ರಕ್ರಿಯೆ ವೇಳೆ ಜೆಟ್ ಏರ್ವೇಸ್ನಿಂದ ಕೆಲವು ಪೈಲಟ್ಗಳಿಗೆ ತಾವು ದಯಾಧರ್ಮ ಮಾಡುತ್ತಿರುವುದಾಗಿ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಜೆಟ್ ಏರ್ವೇಸ್ ಆಘಾತ ವ್ಯಕ್ತಪಡಿಸಿದೆ.
ಜೆಟ್ ಏರ್ ವೇಸ್ ಏಪ್ರಿಲ್ 17ರಿಂದ ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದ ಬಳಿಕ 1,300 ಪೈಲಟ್ಗಳು ಬೀದಿಗೆ ಬಂದಿದ್ದಾರೆ. 20 ಸಾವಿರಕ್ಕೂ ಅಧಿಕ ಉದ್ಯೋಗಿಗಳ ಉದ್ಯೋಗ ಡೋಲಾಯಮಾನವಾಗಿದೆ.

'ಇತ್ತೀಚೆಗೆ ಸ್ಪೈಸ್ಜೆಟ್ನ ಉನ್ನತ ಮ್ಯಾನೇಜ್ಮೆಂಟ್ನೊಂದಿಗೆ ನೇಮಕಾತಿ ಸಂದರ್ಶನದಲ್ಲಿ ಪಾಲ್ಗೊಂಡ ನಮ್ಮ ಸದಸ್ಯರನ್ನು ನಡೆಸಿಕೊಂಡಿರುವ ರೀತಿ ಕೇಳಿ ಅಘಾತ ಮತ್ತು ತೀವ್ರ ಬೇಸರವಾಗಿದೆ. ಇದು ಸತ್ಯವಾದರೆ, ಇಂತಹ ವೃತ್ತಿಪರವಲ್ಲದ ವರ್ತನೆಯನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಏಕೆಂದರೆ ಅದು ಅವಮಾನಕಾರಿ ಹಾಗೂ ನಮ್ಮ ಸಹೋದ್ಯೋಗಿಗಳಿಗೆ ತೀವ್ರ ಘಾಸಿ ಉಂಟುಮಾಡಿದೆ' ಎಂದು ನ್ಯಾಷನಲ್ ಏವಿಯೇಟರ್ಸ್ ಗಿಲ್ಡ್ ಹೇಳಿದೆ.
ಈ ಆರೋಪ ಸಂಪೂರ್ಣ ಸುಳ್ಳು ಮತ್ತು ತಿರುಚಿರುವಂಥದ್ದು ಎಂದು ಸ್ಪೈಸ್ ಜೆಟ್ ತಳ್ಳಿಹಾಕಿದೆ. ತನ್ನ ತಂಡ ಪೈಲಟ್ಗಳ ನೇಮಕಾತಿಗೆಂದು ನಗರಕ್ಕೆ ಬಂದಿದೆಯೇ ಹೊರತು, ಅವರನ್ನು ಅವಮಾನ ಮಾಡುವುದ್ದಕ್ಕಲ್ಲ ಎಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications