Get Updates
Get notified of breaking news, exclusive insights, and must-see stories!

ಮುಳುಗಿದ ಜಿಂದಾಲ್ ಕಾಮಾಕ್ಷಿ ಹಡಗು, 19 ಜನರ ರಕ್ಷಣೆ

ಮುಂಬೈ, ಜೂ. 22 : ಮುಂಬೈನಿಂದ ಸುಮಾರು 40 ನಾಟಿಕಲ್ ಮೈಲು ದೂರದಲ್ಲಿ ಸರಕು ಸಾಗಣೆ ಮಾಡುವ ಹಡಗು ಮುಳುಗಡೆಯಾಗಿದೆ. ಹಡಗಿನಲ್ಲಿದ್ದ 19 ಸಿಬ್ಬಂದಿಗಳನ್ನು ಐಎನ್‌ಎಸ್ ನೌಕಾನೆಲೆಯ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಸೋಮವಾರ ಬೆಳಗ್ಗೆ ಸರಕು ಸಾಗಣೆ ಮಾಡುತ್ತಿದ್ದ 'ಜಿಂದಾಲ್ ಕಾಮಾಕ್ಷಿ' ಹಡಗು ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ಕುರಿತು ಹಡಗಿನ ಸಿಬ್ಬಂದಿ ಮುಂಬೈ ನೌಕಾನೆಲೆಗೆ ಮಾಹಿತಿ ನೀಡಿದ್ದು, ಹೆಲಿಕಾಪ್ಟರ್ ಮೂಲಕ ನೌಕಾನೆಲೆ ಸಿಬ್ಬಂದಿ ಹಡಗಿನಲ್ಲಿದ್ದ 20 ಸಿಬ್ಬಂದಿಗಳ ಪೈಕಿ 19 ಜನರನ್ನು ರಕ್ಷಣೆ ಮಾಡಿದ್ದಾರೆ.

indian navy

ಮುಂಬೈನಿಂದ ಸುಮಾರು 40 ನಾಟಿಕಲ್ ಮೈಲು ದೂರದಲ್ಲಿ ಈ ಘಟನೆ ನಡೆದಿದೆ. ರಕ್ಷಣೆ ಮಾಡಲಾದ ಸಿಬ್ಬಂದಿಗಳನ್ನು ಐಎನ್‌ಎಸ್ ನೌಕಾನೆಲೆಗೆ ಕರೆತರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಡಗಿನ ಕ್ಯಾಪ್ಟನ್‌ಗಾಗಿ ಹುಡುಕಾಟ ಮುಂದುವರೆದಿದೆ. [ಮುಂಬೈ ಮಹಾಮಳೆ : ರೈಲು ಬಂದ್]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+