ಹಂಗೇರಿಗೆ ತೆರಳಲು ಕೋರ್ಟ್ ಅನುಮತಿ ಕೋರಿದ ಕಂಗನಾ ರನೌತ್
ಮುಂಬೈ, ಜೂನ್ 15: ಜನಪ್ರಿಯ ನಟಿ ಕಂಗನಾ ರನೌತ್ ವಿರುದ್ಧ ದೇಶದ್ರೋಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಆಕೆ ಪಾಸ್ಪೋರ್ಟ್ ನವೀಕರಣಕ್ಕೆ ಪ್ರಾಧಿಕಾರ ಆಕ್ಷೇಪಿಸಿದೆ. ಈ ನಡುವೆ ಚಿತ್ರೀಕರಣಕ್ಕಾಗಿ ಹಂಗೇರಿಗೆ ತೆರಳಲು ಅನುಮತಿ ನೀಡುವಂತೆ ಬಾಂಬೆ ಹೈಕೋರ್ಟ್ಗೆ ಕಂಗನಾ ಕೋರಿದ್ದಾರೆ.
ಭಾರತೀಯ ಪಾಸ್ಪೋರ್ಟ್ ಪ್ರಾಧಿಕಾರವು ಪಾಸ್ಪೋರ್ಟ್ ನವೀಕರಿಸಲು ಆಕ್ಷೇಪಿಸುತ್ತಿದ್ದು, ಪಾಸ್ಪೋರ್ಟ್ ನವೀಕರಿಸಲು ಸೂಕ್ತ ನಿರ್ದೇಶನವನ್ನು ಪ್ರಾಧಿಕಾರಕ್ಕೆ ನೀಡುವಂತೆ ಕಂಗನಾ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.
ದ್ವೇಷಪೂರಿತ ಹಾಗೂ ದೇಶದ್ರೋಹದ ಟ್ವೀಟ್ಗಳನ್ನು ಮಾಡಿದ ಆರೋಪದಲ್ಲಿ ಮುಂಬೈನ ಬಾಂದ್ರಾ ಪೊಲೀಸರು ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಕಂಗನಾ ಸಹೋದರಿಯರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳಾದ 153ಎ (ಎರಡು ಸಮುದಾಯಗಳ ನಡುವೆ ದ್ವೇಷ ಹರಡುವುದು), 295ಎ (ಧಾರ್ಮಿಕ ಭಾವನೆ ಕೆರಳಿಸುವುದು), 124ಎ (ದೇಶದ್ರೋಹ) ಜೊತೆಗೆ 34 ರ (ಪಿತೂರಿ) ಅಡಿ ದೂರು ದಾಖಲಿಸಿದ್ದಾರೆ.

ಕಂಗನಾರ ಪಾಸ್ಪೋರ್ಟ್ನ ಅವಧಿ ಕಳೆದ ಸೆಪ್ಟೆಂಬರ್ ತಿಂಗಳಿಗೆ ಮುಗಿದಿದೆ. ಸದ್ಯ ಎಫ್ಐಆರ್ ದಾಖಲಾಗಿದ್ದು, ಪಾಸ್ ಪೋರ್ಟ್ ನವೀಕರಿಸಲು ಸಾಧ್ಯವಿಲ್ಲ ಭಾರತೀಯ ಪಾಸ್ಪೋರ್ಟ್ ಪ್ರಾಧಿಕಾರ ಹೇಳಿದೆ.
''ದೇಶದ ವಿವಿಧೆಡೆ ಮತ್ತು ಅಂತಾರಾಷ್ಟ್ರೀಯ ಸ್ಥಳಗಳಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ತೆರಳಬೇಕಿರುವುದು ವೃತ್ತಿ ಬದ್ಧತೆಯಾಗಿದೆ. ಚಿತ್ರವೊಂದರಲ್ಲಿ ತಾನು ಪ್ರಧಾನ ಭೂಮಿಕೆಯಲ್ಲಿರುವುದರಿಂದ ಜೂನ್ 15 ರಿಂದ ಆಗಸ್ಟ್ವರೆಗೆ ಹಂಗರಿಯ ಬುಡಾಪೆಸ್ಟ್ಗೆ ತೆರಳಬೇಕಿದೆ. ಇದಕ್ಕಾಗಿ ನನ್ನ ಪಾಸ್ ಪೋರ್ಟ್ ನವೀಕರಣ ಅಗತ್ಯ'' ಎಂದು ಕಂಗನಾ ಕೋರಿದ್ದಾರೆ.
ರನೌತ್ ಸಹೋದರಿಯ ವಿರುದ್ಧ ದುರುದ್ದೇಶಪೂರಿತ ಕ್ರಮಕೈಗೊಳ್ಳದಂತೆ ನ್ಯಾಯಾಲಯವು ಮುಂಬೈ ಪೊಲೀಸರಿಗೆ ಬಾಂಬೆ ಹೈಕೋರ್ಟ್ ಈ ಹಿಂದೆಯೇ ಆದೇಶ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications