ಪತ್ರಕರ್ತ ಅರ್ನಬ್ ಗೋಸ್ವಾಮಿ ಮೇಲಿನ ಹಲ್ಲೆ ಖಂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ
ರಿಪಬ್ಲಿಕ್ ಟಿವಿ ಮುಖ್ಯಸ್ಥ ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ಮೇಲೆ ನಡೆದ ದುಷ್ಕರ್ಮಿಗಳ ದಾಳಿಯನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.
'ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ' ಎಂದು ಕಾಂಗ್ರೆಸ್ ವಿರುದ್ಧ ಟೀಕಿಸಿದ್ದಾರೆ.
ಪತ್ರಕರ್ತ ಅರ್ನಬ್ ಗೋಸ್ವಾಮಿಯವರ ಮೇಲೆ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ
— Nalinkumar Kateel (@nalinkateel) April 23, 2020
ವಾಕ್ ಸ್ವಾತಂತ್ರ್ಯ ಕಾಂಗ್ರೆಸ್ಗೆ ಮಾತ್ರ ಇರುವುದು ಎಂದು ಅವರು ತಿಳಿದಿರುವುದೇ ನಿನ್ನೆ ನಡೆದ ದಾಳಿಗೆ ಸಾಕ್ಷಿ
ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ.
''ಪತ್ರಕರ್ತ ಅರ್ನಬ್ ಗೋಸ್ವಾಮಿಯವರ ಮೇಲೆ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಾಕ್ ಸ್ವಾತಂತ್ರ್ಯ ಕಾಂಗ್ರೆಸ್ಗೆ ಮಾತ್ರ ಇರುವುದು ಎಂದು ಅವರು ತಿಳಿದಿರುವುದೇ ನಿನ್ನೆ ನಡೆದ ದಾಳಿಗೆ ಸಾಕ್ಷಿ. ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ'' ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಇದೇ ಘಟನೆ ಕುರಿತು ಕೇಂದ್ರ ಸಚಿವ, ಕರ್ನಾಟಕದ ಸಂಸದ ಡಿವಿ ಸದಾನಂದ ಗೌಡ ಕೂಡ ಪ್ರತಿಕ್ರಿಯಿಸಿದ್ದು ''ಮಹಾರಾಷ್ಟ್ರದಲ್ಲಿ ಹಿಂದೂ ಸಾಧುಗಳ ಜನಸಮೂಹ ಹತ್ಯೆ ಕುರಿತು ಸೋನಿಯಾ ಸೇನಾ ಮೌನವನ್ನು ಪ್ರಶ್ನಿಸುವ ಧೈರ್ಯಕ್ಕಾಗಿ ಅರ್ನಬ್ ಗೋಸ್ವಾಮಿ ದಂಪತಿ ಮೇಲೆ ದಾಳಿ ಖಂಡನೀಯ. ಇದು ಅಸಹಿಷ್ಣು ಮನಸ್ಥಿತಿ. ಕಾಂಗ್ರೆಸ್ಗೆ ನಾಚಿಕೆಯಾಗಬೇಕು'' ಎಂದಿದ್ದಾರೆ.

ಅಂದ್ಹಾಗೆ, ಗುರುವಾರ ಬೆಳಿಗ್ಗೆ ಕಚೇರಿ ಮುಗಿಸಿ ಮನೆಗೆ ತೆರಳುವ ಸಂದರ್ಭದಲ್ಲಿ ಅರ್ನಬ್ ಗೋಸ್ವಾಮಿ ದಂಪತಿ ಮೇಲೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಟಿವಿ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ವಿರುದ್ಧ ಮಾತನಾಡಿದ್ದಕ್ಕಾಗಿ ಈ ಹಲ್ಲೆಯಾಗಿದೆ ಎಂದು ಸ್ವತಃ ಅರ್ನಬ್ ಆರೋಪಿಸಿದ್ದಾರೆ.
ಈ ಕುರಿತು ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈಗಾಗಲೇ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications