ಸ್ಪೀಕರ್ ರಮೇಶ್ ವಿರುದ್ಧ ಸುಪ್ರೀಂ ಮೊರೆ ಹೋದ ಭಿನ್ನಮತೀಯ ಶಾಸಕರು
Recommended Video
ಮುಂಬೈ, ಜುಲೈ 10: ಕರ್ನಾಟಕದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಅಸ್ತಿತ್ವ ಹಾಗೂ ಬಿಜೆಪಿಯ ಹೊಸ ಸರ್ಕಾರ ಉದಯಕ್ಕೆ ನಿರ್ಣಾಯಕವಾಗಬಲ್ಲ ನಿರ್ಣಯವನ್ನು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ತೆಗೆದುಕೊಂಡಿದ್ದಾರೆ. ಆದರೆ, 13 ಶಾಸಕರ ರಾಜೀನಾಮೆಯನ್ನು ಪರಿಶೀಲಿಸಿದ್ದು, ಈ ಪೈಕಿ 8 ಶಾಸಕರದ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದಿರುವುದು ಭಿನ್ನಮತೀಯ ಶಾಸಕರಿಗೆ ಅಸಮಾಧಾನ ಉಂಟು ಮಾಡಿದೆ.
ಕ್ರಮಬದ್ಧವಾದ ರಾಜೀನಾಮೆಗಳನ್ನು ಕೂಡಾ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿಲ್ಲ, ಉಳಿದ ರಾಜೀನಾಮೆಗಳನ್ನು ತಿರಸ್ಕರಿಸಲು ಸೂಕ್ತ ಕಾರಣ ಕೂಡಾ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಗುರುವಾರ(ಜುಲೈ 11) ಅರ್ಜಿ ವಿಚಾರಣೆಗೆ ಬರಲಿದೆ. ಅತೃಪ್ತರ ಪರ ಮುಕುಲ್ ರೋಹ್ಟಗಿ ಅವರು ವಾದಿಸಲಿದ್ದಾರೆ.
ರಾಜೀನಾಮೆ ಪತ್ರ ಪರಿಶೀಲಿಸಿದ ನಂತರ ವಿಧಾನಸೌದದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್, ಐವರು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿವೆ, 13 ಜನ ಶಾಸಕರು ನನ್ನ ಕಚೇರಿ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದಾರೆ. ನಾನು ಕಚೇರಿಯಿಂದ ಮನೆಗೆ ತೆರಳಿದ ಬಳಿಕ ಶಾಸಕರು ಬಂದಿದ್ದಾರೆ. ಸೋಮವಾರದಂದು ನಾನು ಕಚೇರಿಗೆ ಬಂದಿರಲಿಲ್ಲ. ಇವತ್ತು ರೋಷನ್ ಬೇಗ್ ಕೂಡ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದರು.

ಯಾರ ರಾಜೀನಾಮೆ ಕ್ರಮಬದ್ಧವಾಗಿಲ್ಲ: ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್, ನಾರಾಯಣ ಗೌಡ, ರಾಮಲಿಂಗಾರೆಡ್ಡಿ, ಗೋಪಾಲಯ್ಯ ಅವರ ರಾಜೀನಾಮೆ ಪತ್ರ ಕ್ರಮಬದ್ಧವಾಗಿದ್ದು, ಉಳಿದ 8 ಜನ ಶಾಸಕರ ರಾಜೀನಾಮೆ ರೂಲ್ಸ್ 202ರ ಪ್ರಕಾರ ಕ್ರಮಬದ್ಧವಾಗಿಲ್ಲ.ಸಂವಿಧಾನ ಬದ್ಧವಾಗಿ ನಾನು ಕಾನೂನು ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳುತ್ತಿದ್ದೇನೆ. ಈ ಬಗ್ಗೆ ರಾಜ್ಯಪಾಲರಿಗೆ ಪತ್ರದ ಮೂಲಕ ತಿಳಿಸುತ್ತೇನೆ ಎಂದು ರಮೇಶ್ ಕುಮಾರ್ ಅವರು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಜುಲೈ 10ರಂದು ವಿಧಾನಸಭೆ ಬಲಾಬಲ:
ಒಟ್ಟು ಸದಸ್ಯ ಬಲ : 211
ಕಾಂಗ್ರೆಸ್ + ಜೆಡಿಎಸ್ : 104
ಮ್ಯಾಜಿಕ್ ನಂಬರ್ : 106
ಬಿಜೆಪಿ : 105+1(ಪಕ್ಷೇತರ ಎಚ್ ನಾಗೇಶ್)
ಬಿಎಸ್ ಪಿ: 1
ಕಾಂಗ್ರೆಸ್ : 69
ಜೆಡಿಎಸ್ : 34
ಪಕ್ಷೇತರ : 1 (ಕಾಂಗ್ರೆಸ್ ಸೇರಿರುವ ಶಂಕರ್)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications