ಮಹಾರಾಷ್ಟ್ರಕ್ಕೂ ಹರಡಿದ ಹಿಜಾಬ್ ವಿವಾದ: ಮಾಲೆಗಾಂವ್‌ ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿ

ಮುಂಬೈ ಫೆಬ್ರವರಿ 11: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ವಿರೋಧಿಸಿ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಗುರುವಾರ ಸಾವಿರಾರು ಜನರು ಜಮಾಯಿಸಿದ್ದರು. ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪ್ರತಿಭಟನೆಯನ್ನು ಆಯೋಜಿಸಿದ ಸಂಘಟನೆಯಾದ ಜಮಿಯೆತ್ ಉಲೇಮಾ ಇ ಹಿಂದ್‌ನ ನಾಲ್ವರು ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಯಿತು. ಜೊತೆಗೆ ಮಾಲೆಗಾಂವ್‌ನಲ್ಲಿ ಫೆಬ್ರವರಿ 11 ರ ಶುಕ್ರವಾರವನ್ನು 'ಹಿಜಾಬ್ ದಿನ' ಎಂದು ಆಚರಿಸಲಾಗುವುದು ಎಂದು ಪ್ರತಿಭಟನಾಕಾರರು ಘೋಷಿಸಿದರು.

ಹಿಜಾಬ್ ವಿವಾದದ ಮಧ್ಯೆ, ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಶುಕ್ರವಾರ ರಾಜಕೀಯ ಪಕ್ಷಗಳು ಪ್ರತಿಭಟನೆಗಳನ್ನು ನಡೆಸದಂತೆ ಮತ್ತು ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವಂತೆ ವಿನಂತಿಸಿದ್ದಾರೆ.

ಹಿಜಾಬ್‌ ವಿವಾದ: ರಾಷ್ಟ್ರ ಮಟ್ಟಕ್ಕೆ ಹರಡಬೇಡಿ ಎಂದ ಸುಪ್ರೀಂ
"ಮೊದಲನೆಯದಾಗಿ ಈ ವಿಚಾರವಾಗಿ ಎಲ್ಲಿಯೂ ಪ್ರತಿಭಟನೆ ಮಾಡಲು ಅನುಮತಿಸಲಾಗುವುದಿಲ್ಲ ಮತ್ತು ಯಾರಾದರೂ ಮಾಡಿದರೆ, ಅದನ್ನು ಶಾಂತಿಯುತವಾಗಿ ನಡೆಸಬೇಕು. ನಾನು ರಾಜಕೀಯ ಪಕ್ಷಗಳಿಗೆ ಈ ಬಗ್ಗೆ ಪ್ರೇರೇಪಿಸದಂತೆ ಮನವಿ ಮಾಡುತ್ತೇನೆ ಮತ್ತು ಎಲ್ಲರೂ ಶಾಂತಿಯನ್ನು ಕಾಪಾಡಲು ಕೆಲಸ ಮಾಡಬೇಕು" ಎಂದು ದಿಲೀಪ್ ವಾಲ್ಸೆ ಮನವಿ ಮಾಡಿದ್ದಾರೆ.

Karnataka Hijab Row: Thousands Gather to Protest in Malegaon

ಜಲ್ನಾದಲ್ಲಿ ಗುರುವಾರ ಹೆಚ್ಚಿನ ಸಂಖ್ಯೆಯ ಹುಡುಗಿಯರು ಮತ್ತು ಮಹಿಳೆಯರು ಹಿಜಾಬ್' ಅಥವಾ ಮುಸುಕು ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಅಥವಾ ಇಸ್ಲಾಮಿಕ್ ತಲೆ ಕವಚದ ಮೇಲಿನ ನಿಷೇಧದ ವಿರುದ್ಧ ಸ್ಥಳೀಯ ಸಂಘಟನೆಯಾದ ಜಲ್ನಾ ಮುಸ್ಲಿಮ್ಸ್ ನುಮಾನಿದಾ ಖಾವತೀನ್ ಪ್ರತಿಭಟನೆಯನ್ನು ಆಯೋಜಿಸಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಪ್ರತಿಭಟನಾಕಾರರು 'ಮೊದಲು ಹಿಜಾಬ್ ನಂತರ ಕಿತಾಬ್' (ಮೊದಲ ಹಿಜಾಬ್ ಮತ್ತು ನಂತರ ಪಠ್ಯಪುಸ್ತಕ) ಮತ್ತು 'ಸಂವಿಧಾನವನ್ನು ಉಳಿಸಿ, ದೇಶವನ್ನು ಉಳಿಸಿ' ಎಂಬ ಫಲಕಗಳನ್ನು ಮತ್ತು ಬ್ಯಾನರ್‌ಗಳನ್ನು ಹಿಡಿದುಕೊಂಡಿದ್ದರು. ಮೆರವಣಿಗೆಯ ಕೊನೆಯಲ್ಲಿ ಡೆಪ್ಯೂಟಿ ಕಲೆಕ್ಟರ್‌ಗೆ ಈ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನು ಹಸ್ತಾಂತರಿಸಲಾಯಿತು.

ಫೆಬ್ರವರಿ 4 ರಂದು ಕರ್ನಾಟಕದ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಹಿಜಾಬ್ ಪ್ರತಿಭಟನೆಗಳು ಪ್ರಾರಂಭವಾದವು. ಪ್ರತಿಭಟನೆಯ ಸಂದರ್ಭದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ಕೆಲವು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸಲಾಯಿತು.

ಇನ್ನೂ ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಮೌಖಿಕ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರಣೆ ಮೊದಲು ಮುಗಿಯಲಿ. ಬಳಿಕ ಈ ಬಗ್ಗೆ ನೋಡೋಣ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಹೇಳಿದರು. ಇದರಿಂದ, ಸಮವಸ್ತ್ರವನ್ನು ಹೊರತುಪಡಿಸಿ ಯಾವುದೇ ಧಾರ್ಮಿಕ ಉಡುಗೆ ಧರಿಸಿ ತರಗತಿಗೆ ಹೋಗುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂಬ ಮನವಿಗೆ ಹಿನ್ನಡೆಯಾಗಿದೆ.

Recommended Video

      ಲಾಯರ್ ಜಗದೀಶ್ ಮಗನ‌;ಮೇಲೆ ಹಲ್ಲೆ ಮಾಡಿದ್ದು ಯಾರು? ಕೋರ್ಟ್ ಮುಂದೆ ಹೈಡ್ರಾಮಾ | Oneindia Kannada

      ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೂರು ಅರ್ಜಿಗಳು ದಾಖಲಾಗಿದ್ದವು. ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್, ಎಸ್‌ಜೆ ಜಮೀಲ್ ಹಾಗೂ ಒಬ್ಬ ವಿದ್ಯಾರ್ಥಿನಿ ಕಡೆಯಿಂದ ಅರ್ಜಿ ಸಲ್ಲಿಕೆಯಾಗಿದ್ದವು. ಈ ಮೂರೂ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ತಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿರುವುದು ಇದು ಎರಡನೇ ಸಲವಾಗಿದೆ. ಗುರುವಾರ ಕೂಡ ವಿದ್ಯಾರ್ಥಿನಿಯೊಬ್ಬರ ಅರ್ಜಿ ಪರ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಮನವಿಯನ್ನು ಸಿಜೆಐ ಎನ್‌ವಿ ರಮಣ ತಿರಸ್ಕರಿಸಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+