ಅತೃಪ್ತ ಶಾಸಕರ ಅನರ್ಹತೆ ಸಾಧ್ಯವಿಲ್ಲ: ವಕೀಲ ಮುಕುಲ್ ರೋಹಟಗಿ

ಮುಂಬೈ, ಜುಲೈ 13: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹತ್ತು ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಅವರಿಗೆ ಸಾಧ್ಯವಿಲ್ಲ ಎಂದು ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹಟಗಿ ತಿಳಿಸಿದ್ದಾರೆ.

ಮುಂಬೈನ ಹೋಟೆಲ್‌ನಲ್ಲಿ ತಂಗಿರುವ ಅತೃಪ್ತ ಶಾಸಕರಿಗೆ ಮುಕುಲ್ ರೋಹಟಗಿ ಅವರು ಈ ಸಂಬಂಧ ಪತ್ರ ಬರೆದಿದ್ದಾರೆ. ಸ್ಪೀಕರ್ ಅವರು ಈಗಿನ ಸಂದರ್ಭದಲ್ಲಿ 10 ಮಂದಿ ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ. ಇದರಿಂದ ಅನರ್ಹತೆ ವಿಚಾರವಾಗಿ ಗೊಂದಲದಲ್ಲಿದ್ದ ಅತೃಪ್ತ ಶಾಸಕರು ಸ್ವಲ್ಪ ನಿರಾಳರಾಗಿದ್ದಾರೆ ಎನ್ನಲಾಗಿದೆ.

ಕೋರ್ಟ್ ಆದೇಶ ನಿರ್ದಿಷ್ಟ ಅನರ್ಹತೆ ದೂರಿಗೆ ಸೀಮಿತವಾಗಿಲ್ಲ. ವಿಪ್ ಜಾರಿಗೊಳಿಸಿರುವ ಆಧಾರದಲ್ಲಿ ಅನರ್ಹತೆ ಸಾಧ್ಯವಿಲ್ಲ. ಜುಲೈ 11ರಂದು ಕಾಂಗ್ರೆಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿತ್ತು. ಇದಕ್ಕೂ ಮೊದಲೇ ಅವರು ರಾಜೀನಾಮೆ ನೀಡಿರುವುದರಿಂದ ಈ ಶಾಸಕರ ಮೇಲೆ ವಿಪ್ ಜಾರಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

karnataka political crisis speaker can not disqualify mlas mukul rohatgi

ಎರಡೂ ಪಕ್ಷಗಳ ಶಾಸಕರು ವಿಪ್ ಜಾರಿಯಾಗುವ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ತಮ್ಮ ರಾಜೀನಾಮೆ ಅಂಗಿಕಾರ ಮಾಡುವುದಕ್ಕೆ ಸಭಾಧ್ಯಕ್ಷರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ಕಾರಣದಿಂದ ಅವರ ಅನರ್ಹತೆ ಸಾಧ್ಯವಿಲ್ಲ ಎಂದು ಮುಕುಲ್ ರೋಹಟಗಿ ವಿವರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+