ಸಿದ್ಧಿ ವಿನಾಯಕನಿಗೆ ಶರಣು ಶರಣೆಂದ ಅತೃಪ್ತ ಶಾಸಕರು

Recommended Video

      ಕರ್ನಾಟಕದ ಅತೃಪ್ತ ಶಾಸಕರಿಂದ ಶುರುವಾಯ್ತು ಟೆಂಪಲ್ ರನ್ | Oneindia Kannada

      ಮುಂಬೈ, ಜುಲೈ 12 : ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರು ಟೆಂಪಲ್ ರನ್ ಕೈಗೊಂಡಿದ್ದಾರೆ. ಮಂಗಳವಾರದ ತನಕ ಅತೃಪ್ತ ಶಾಸಕರ ರಾಜೀನಾಮೆ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

      ಶುಕ್ರವಾರ ಬೈರತಿ ಬಸವರಾಜು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರು ಸಿದ್ದಿ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಂಬೈನ ರಿಸೈಸೆನ್ಸ್ ಹೋಟೆಲ್‌ನಲ್ಲಿ 12 ಶಾಸಕರಿದ್ದಾರೆ.

      ಇಂದು ಕರ್ನಾಟಕದ ರಾಜಕೀಯದ ಪಾಲಿಗೆ ಮಹತ್ವದ ದಿನವಾಗಿತ್ತು. ಒಂದು ಕಡೆ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಮತ್ತೊಂದು ಕಡೆ ಸುಪ್ರೀಂಕೋರ್ಟ್‌ನಲ್ಲಿ ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿದೆ.

      Karnataka rebel MLAs temple run in Mumbai

      ಗುರುವಾರ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮುಂದೆ ಹಾಜರಾಗಿದ್ದ ಎಲ್ಲಾ ಅತೃಪ್ತ ಶಾಸಕರು ಮುಂಬೈಗೆ ವಾಪಸ್ ಆಗಿದ್ದರು. ಇಂದು ಸುಪ್ರೀಂಕೋರ್ಟ್ ಆದೇಶ ಬಂದ ಹಿನ್ನಲೆಯಲ್ಲಿ ಶಾಸಕರು ದೇವರ ಮೊರೆ ಹೋಗಿದ್ದಾರೆ.

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸಮತಯಾಚನೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಕಲಾಪವನ್ನು ಸ್ಪೀಕರ್ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.

      ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಅಲ್ಲಿಯ ತನಕ ಸರ್ಕಾರ ಮತ್ತು ಶಾಸಕರು ಇಬ್ಬರೂ ಸೇಫ್. ಆದ್ದರಿಂದ, ಶಾಸಕರು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

      ಯಾವ-ಯಾವ ಶಾಸಕರು? : ಮುಂಬೈನಲ್ಲಿ ಬಿ.ಸಿ.ಪಾಟೀಲ್ (ಹಿರೇಕೆರೂರು), ಬೈರತಿ ಬಸವರಾಜು (ಕೆ.ಆರ್.ಪುರ), ಎಚ್.ವಿಶ್ವನಾಥ್ (ಹುಣಸೂರು), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಲೌಔಟ್), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ), ಎಸ್.ಟಿ.ಸೋಮಶೇಖರ್ (ಯಶವಂತಪುರ), ಪ್ರತಾಪ್ ಗೌಡ ಪಾಟೀಲ್ (ಮಸ್ಕಿ) ಶಾಸಕರು ವಾಸ್ತವ್ಯ ಹೂಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+